ಸ್ಯಾಂಡಲ್ವುಡ್ನಲ್ಲಿ 'ಗಣಪ', 'ಕರಿಯ-2' ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿರುವ ನಟ ಸಂತೋಷ್ ಬಾಲರಾಜ್. ಸದ್ಯ ಸಂತೋಷ್ 'ಬರ್ಕ್ಲಿ' ಚಿತ್ರದ ಶೂಟಿಂಗ್ ಮುಗಿಸಿದ್ದು, ಚಿತ್ರದ ಲಿರಿಕಲ್ ಹಾಡೊಂದು ಬಿಡುಗಡೆಯಾಗಿದೆ.
ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಸುಮಧುರವಾಗಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತವಿದ್ದು, ಸಂತೋಷ್ ಜೋಡಿಯಾಗಿ ಸಿಮ್ರಾನ್ ನಾಟೇಕರ್ ಕಾಣಿಸಿಕೊಂಡಿದ್ದಾರೆ. ವಸಿಷ್ಠ ಸಿಂಹ ಅಭಿನಯದ ಕಾಲಚಕ್ರ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿರುವ ಸುಮಂತ್ ಕ್ರಾಂತಿ ಈ ಚಿತ್ರಕ್ಕೂ ನಿರ್ದೇಶಕರಾಗಿದ್ದಾರೆ.
ಸಾಹಸ ಪ್ರಧಾನ ಹಾಗೂ ಉತ್ತಮ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಬಹುಭಾಷಾ ನಟ ಚರಣ್ರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ, ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗವಿದೆ.
- " class="align-text-top noRightClick twitterSection" data="">
ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ, ಅಮಿತ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಈ ಹಿಂದೆ ಕರಿಯ, ಗಣಪ, ಕರಿಯ-2 ಅದ್ದೂರಿ ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ ಇದಾಗಿದೆ. ಸದ್ಯ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ. ಚಿತ್ರತಂಡವು ಸದ್ಯದಲ್ಲೇ ಬರ್ಕ್ಲಿ ಸಿನಿಮಾ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದೆ.
ಇದನ್ನೂ ಓದಿ: ಸ್ಯಾಂಡಲ್ವುಡ್ನಲ್ಲಿ ಗಣೇಶ ಹಬ್ಬದ ಸಂಭ್ರಮ: ಸುಮಲತಾ, ಯಶ್, ಅದಿತಿ ಪ್ರಭುದೇವ, ಉಪೇಂದ್ರ ದಂಪತಿಯಿಂದ ಪೂಜಾ ಕಾರ್ಯ