ETV Bharat / sitara

ನನ್ನ ಬರ್ತ್​ಡೇ ಆಚರಣೆಗಿಂತ ನಿಮ್ಮ ಆರೋಗ್ಯ ಮುಖ್ಯ...ಸೆಂಚುರಿ ಸ್ಟಾರ್​​​​​​​​ - Century star not celebrating birthday

ಕರುನಾಡ ಚಕ್ರವರ್ತಿ, ಅಭಿಮಾನಿಗಳ ಪ್ರೀತಿಯ ಶಿವಣ್ಣ ಈ ಬಾರಿ ಹುಟ್ಟುಹಬ್ಬ ಆಚರಣೆ ಕ್ಯಾನ್ಸಲ್ ಮಾಡಿದ್ದಾರೆ. ನನ್ನ ಬರ್ತ್​ಡೇ ಆಚರಣೆಗಿಂತ ನಿಮ್ಮ ಆರೋಗ್ಯ ಮುಖ್ಯ ಎಂದು ಶಿವರಾಜ್​ಕುಮಾರ್ ಹೇಳಿದ್ದಾರೆ.

Shivarajkumar cancelled his birthday
ಸೆಂಚುರಿ ಸ್ಟಾರ್​​​​​​​​
author img

By

Published : Jul 3, 2020, 4:30 PM IST

ಜುಲೈ 12 ರಂದು ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್ ಹುಟ್ಟುಹಬ್ಬ. ಆದರೆ ಈ ಬಾರಿ ಶಿವರಾಜ್​ಕುಮಾರ್ ತಮ್ಮ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ನನ್ನ ಹುಟ್ಟುಹಬ್ಬ ಆಚರಣೆಗಿಂತ ನಿಮ್ಮ ಆರೋಗ್ಯವೇ ಮುಖ್ಯ ಎಂದು ಶಿವಣ್ಣ ಅಭಿಮಾನಿಗಳಿಗೆ ಹೇಳಿದ್ದಾರೆ.

ಹುಟ್ಟು ಹಬ್ಬ ಆಚರಣೆ ಬೇಡ ಎಂದ ಶಿವಣ್ಣ

ಪ್ರತಿ ವರ್ಷ ಶಿವಣ್ಣ ಅಭಿಮಾನಿಗಳೊಂದಿಗೆ ತಮ್ಮ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ಭೀತಿ ಎಲ್ಲರ ಬರ್ತ್​ಡೇ ಆಚರಣೆಗೆ ಅಡ್ಡಿಯುಂಟುಮಾಡಿದೆ. ಈ ಬಗ್ಗೆ ಮಾತನಾಡಿರುವ ಸೆಂಚುರಿ ಸ್ಟಾರ್, 'ಈ ಬಾರಿಯ ಹುಟ್ಟುಹಬ್ಬದಂದು ದಯವಿಟ್ಟು ಯಾರೂ ಮನೆ ಬಳಿ ಬರಬೇಡಿ. ಆ ದಿನ ನಾನು ಮನೆಯಲ್ಲಿ ಇರುವುದಿಲ್ಲ. ಹುಟ್ಟುಹಬ್ಬ ಆಚರಣೆಗೆ ನೀವು ಮನೆ ಬಳಿ ಬಂದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ. ನನ್ನ ಹುಟ್ಟುಹಬ್ಬ ಆಚರಣೆಗಿಂತ ನಿಮ್ಮ ಆರೋಗ್ಯ ನನಗೆ ಬಹಳ ಮುಖ್ಯ' ಎಂದಿದ್ದಾರೆ.

ಇನ್ನು 'ನೀವೆಲ್ಲರೂ ಆರೋಗ್ಯವಾಗಿದ್ದೀರಿ ಎಂದುಕೊಂಡಿದ್ದೇನೆ. ಕೊರೊನಾ ಬಗ್ಗೆ ಭಯ ಪಡುವ ಅಗತ್ಯ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ನೀವು ಜಾಗೃತರಾಗಿದ್ದರೆ ಯಾವ ಕೊರೊನಾ ಕೂಡಾ ನಿಮ್ಮನ್ನು ಏನೂ ಮಾಡುವುದಿಲ್ಲ. ನನ್ನ ನಿರ್ಧಾರದಿಂದ ನಿಮಗೆ ನೋವಾಗಿರಬಹುದು. ಆದರೆ ನನಗೂ ಬೇಸರ ಇದೆ. ಈ ಕೊರೊನಾ ಭೀತಿ ಕಡಿಮೆಯಾದ ನಂತರ ನಾವೆಲ್ಲರೂ ಭೇಟಿ ಆಗೋಣ' ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಜುಲೈ 12 ರಂದು ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್ ಹುಟ್ಟುಹಬ್ಬ. ಆದರೆ ಈ ಬಾರಿ ಶಿವರಾಜ್​ಕುಮಾರ್ ತಮ್ಮ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ನನ್ನ ಹುಟ್ಟುಹಬ್ಬ ಆಚರಣೆಗಿಂತ ನಿಮ್ಮ ಆರೋಗ್ಯವೇ ಮುಖ್ಯ ಎಂದು ಶಿವಣ್ಣ ಅಭಿಮಾನಿಗಳಿಗೆ ಹೇಳಿದ್ದಾರೆ.

ಹುಟ್ಟು ಹಬ್ಬ ಆಚರಣೆ ಬೇಡ ಎಂದ ಶಿವಣ್ಣ

ಪ್ರತಿ ವರ್ಷ ಶಿವಣ್ಣ ಅಭಿಮಾನಿಗಳೊಂದಿಗೆ ತಮ್ಮ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ಭೀತಿ ಎಲ್ಲರ ಬರ್ತ್​ಡೇ ಆಚರಣೆಗೆ ಅಡ್ಡಿಯುಂಟುಮಾಡಿದೆ. ಈ ಬಗ್ಗೆ ಮಾತನಾಡಿರುವ ಸೆಂಚುರಿ ಸ್ಟಾರ್, 'ಈ ಬಾರಿಯ ಹುಟ್ಟುಹಬ್ಬದಂದು ದಯವಿಟ್ಟು ಯಾರೂ ಮನೆ ಬಳಿ ಬರಬೇಡಿ. ಆ ದಿನ ನಾನು ಮನೆಯಲ್ಲಿ ಇರುವುದಿಲ್ಲ. ಹುಟ್ಟುಹಬ್ಬ ಆಚರಣೆಗೆ ನೀವು ಮನೆ ಬಳಿ ಬಂದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ. ನನ್ನ ಹುಟ್ಟುಹಬ್ಬ ಆಚರಣೆಗಿಂತ ನಿಮ್ಮ ಆರೋಗ್ಯ ನನಗೆ ಬಹಳ ಮುಖ್ಯ' ಎಂದಿದ್ದಾರೆ.

ಇನ್ನು 'ನೀವೆಲ್ಲರೂ ಆರೋಗ್ಯವಾಗಿದ್ದೀರಿ ಎಂದುಕೊಂಡಿದ್ದೇನೆ. ಕೊರೊನಾ ಬಗ್ಗೆ ಭಯ ಪಡುವ ಅಗತ್ಯ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ನೀವು ಜಾಗೃತರಾಗಿದ್ದರೆ ಯಾವ ಕೊರೊನಾ ಕೂಡಾ ನಿಮ್ಮನ್ನು ಏನೂ ಮಾಡುವುದಿಲ್ಲ. ನನ್ನ ನಿರ್ಧಾರದಿಂದ ನಿಮಗೆ ನೋವಾಗಿರಬಹುದು. ಆದರೆ ನನಗೂ ಬೇಸರ ಇದೆ. ಈ ಕೊರೊನಾ ಭೀತಿ ಕಡಿಮೆಯಾದ ನಂತರ ನಾವೆಲ್ಲರೂ ಭೇಟಿ ಆಗೋಣ' ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.