ಮೂಡಬಿದಿರೆಯಲ್ಲಿ ನಡೆದ ವಿವೇಕ ಜಯಂತಿಯಂದು ಜವನೆರ್ ಬೆದ್ರ ತಂಡದಿಂದ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಮಜಾ ಭಾರತ ಖ್ಯಾತಿಯ ಆರಾಧನಾ ಭಟ್ಗೆ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ವಿವೇಕ್ ಪುರಸ್ಕಾರ ನೀಡಿ ಗೌರವಿಸಲಾಯಿತು.
ಬಾಲ ನಟಿಯಾಗಿರುವ ಆರಾಧನಾ ಸಮಾಜಮುಖಿ ಕೆಲಸದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆರದಿರಲಿ ಬದುಕು ಸಂಸ್ಥೆಯ ಮೂಲಕ ಸಮಾಜದ ಆಸಕ್ತರಿಗೆ, ಬಡವರಿಗೆ, ಹಿಂದುಳಿದವರಿಗೆ ನೆರವಿನ ಹಸ್ತ ಚಾಚುತ್ತಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ಸೇವೆಯನ್ನು ಪರಿಗಣಿಸಿ ಇವರಿಗೆ ಹಲವಾರು ಪ್ರಶಸ್ತಿಗಳು ಒಲಿದು ಬಂದಿವೆ.