ETV Bharat / sitara

ಕೊಲ್ಲಾಪುರದ ಅಂಬಾಬಾಯಿ ತಾಯಿಯ ಆಶೀರ್ವಾದ ಪಡೆದ ಪವರ್ ಸ್ಟಾರ್​​​​​​​​

author img

By

Published : Mar 5, 2021, 5:51 PM IST

ಸಂತೋಷ್ ಆನಂದ್​​​​​ರಾಮ್​​ ನಿರ್ದೇಶನದಲ್ಲಿ ಪುನೀತ್ ರಾಜ್​ಕುಮಾರ್ ಹಾಗೂ ಸಯೇಶಾ ಸೈಗಲ್ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಯುವರತ್ನ' ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ಸಿಯಾಗಲೆಂದು ಪುನೀತ್ ರಾಜ್​ಕುಮಾರ್, ಸಂತೋಷ್ ಆನಂದ್ ರಾಮ್ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಕೊಲ್ಲಾಪುರಕ್ಕೆ ತೆರಳಿ ಅಂಬಾಬಾಯಿ ದೇವಿ ಆಶೀರ್ವಾದ ಪಡೆದಿದ್ದಾರೆ.

Yuvaratna team
ಕೊಲ್ಲಾಪುರದಲ್ಲಿ ಯುವರತ್ನ ತಂಡ

ಪವರ್​​​ ಸ್ಟಾರ್​​​​ ಪುನೀತ್ ರಾಜ್​​​​​​​ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಯುವರತ್ನ ' ಏಪ್ರಿಲ್ 1 ರಂದು ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಸಿನಿಮಾ ನೋಡಲು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾ ಈಗಾಗಲೇ ಹಾಡುಗಳು ಹಾಗೂ ಟ್ರೇಲರ್​ನಿಂದ ಗಮನ ಸೆಳೆದಿದೆ.

Yuvaratna team
ಏಪ್ರಿಲ್ 1 ರಂದು ರಿಲೀಸ್ ಆಗಲಿರುವ 'ಯುವರತ್ನ'

ಇದನ್ನೂ ಓದಿ: ರಿಷಭ್ ಶೆಟ್ಟಿ 'ಹೀರೋ' ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿದೆ...?

ಚಿತ್ರತಂಡ ಸದ್ಯಕ್ಕೆ ಸಿನಿಮಾ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದೆ. ಈ ನಡುವೆ ಚಿತ್ರತಂಡದ ಸದಸ್ಯರು ಕೊಲ್ಲಾಪುರಕ್ಕೆ ತೆರಳಿ ದೇವಿ ದರ್ಶನ ಪಡೆದಿದ್ದಾರೆ. 'ಯುವರತ್ನ ' ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್ ರಾಮ್, ಚಿತ್ರದ ನಾಯಕ ಪುನೀತ್ ರಾಜ್​ಕುಮಾರ್ ಹಾಗೂ ಚಿತ್ರತಂಡದ ಇತರ ಸದಸ್ಯರು ಕೊಲ್ಲಾಪುರದ ಅಂಬಾಬಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಕ್ಷ್ಮಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಆಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ಯುವರತ್ನ ' ಸಿನಿಮಾ ಅಪ್ಪು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಸಿದೆ. ಪುನೀತ್ ರಾಜ್​​​​​​​​​​​​​​ಕುಮಾರ್ ಜೊತೆ ಸಯೇಶಾ ಸೈಗಲ್​​​, ಪ್ರಕಾಶ್ ರೈ, ಧನಂಜಯ್, ಸೋನುಗೌಡ, ದಿಗಂತ್ ಹೀಗೆ ದೊಡ್ಡ ತಾರಾ ಬಳಗವೇ ಇದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ವಿಜಯ್ ಕಿರಗಂದೂರು ಅದ್ದೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಎಸ್​​​. ತಮನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 1 ರಂದು 'ಯುವರತ್ನ' ತೆರೆ ಮೇಲೆ ಅಬ್ಬರಿಸಲಿದೆ.

ಪವರ್​​​ ಸ್ಟಾರ್​​​​ ಪುನೀತ್ ರಾಜ್​​​​​​​ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಯುವರತ್ನ ' ಏಪ್ರಿಲ್ 1 ರಂದು ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಸಿನಿಮಾ ನೋಡಲು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾ ಈಗಾಗಲೇ ಹಾಡುಗಳು ಹಾಗೂ ಟ್ರೇಲರ್​ನಿಂದ ಗಮನ ಸೆಳೆದಿದೆ.

Yuvaratna team
ಏಪ್ರಿಲ್ 1 ರಂದು ರಿಲೀಸ್ ಆಗಲಿರುವ 'ಯುವರತ್ನ'

ಇದನ್ನೂ ಓದಿ: ರಿಷಭ್ ಶೆಟ್ಟಿ 'ಹೀರೋ' ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿದೆ...?

ಚಿತ್ರತಂಡ ಸದ್ಯಕ್ಕೆ ಸಿನಿಮಾ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದೆ. ಈ ನಡುವೆ ಚಿತ್ರತಂಡದ ಸದಸ್ಯರು ಕೊಲ್ಲಾಪುರಕ್ಕೆ ತೆರಳಿ ದೇವಿ ದರ್ಶನ ಪಡೆದಿದ್ದಾರೆ. 'ಯುವರತ್ನ ' ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್ ರಾಮ್, ಚಿತ್ರದ ನಾಯಕ ಪುನೀತ್ ರಾಜ್​ಕುಮಾರ್ ಹಾಗೂ ಚಿತ್ರತಂಡದ ಇತರ ಸದಸ್ಯರು ಕೊಲ್ಲಾಪುರದ ಅಂಬಾಬಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಕ್ಷ್ಮಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಆಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ಯುವರತ್ನ ' ಸಿನಿಮಾ ಅಪ್ಪು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಸಿದೆ. ಪುನೀತ್ ರಾಜ್​​​​​​​​​​​​​​ಕುಮಾರ್ ಜೊತೆ ಸಯೇಶಾ ಸೈಗಲ್​​​, ಪ್ರಕಾಶ್ ರೈ, ಧನಂಜಯ್, ಸೋನುಗೌಡ, ದಿಗಂತ್ ಹೀಗೆ ದೊಡ್ಡ ತಾರಾ ಬಳಗವೇ ಇದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ವಿಜಯ್ ಕಿರಗಂದೂರು ಅದ್ದೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಎಸ್​​​. ತಮನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 1 ರಂದು 'ಯುವರತ್ನ' ತೆರೆ ಮೇಲೆ ಅಬ್ಬರಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.