ETV Bharat / sitara

ರಾಧಾ ಪಾತ್ರಧಾರಿಯಾಗಿ ಬಂದ ಗಾಂಧಾರಿ... ಶ್ವೇತಾ ಅಡ್ಡಾಗೆ ಕಾವ್ಯಗೌಡ ಎಂಟ್ರಿ

ರಾಧಾರಮಣ ಧಾರವಾಹಿಯಲ್ಲಿ ರಾಧಾ ಮಿಸ್ ಜಾಗಕ್ಕೆ ಇದೀಗ ಕಾವ್ಯಗೌಡ ಆಯ್ಕೆಯಾಗಿದ್ದು ಶ್ವೇತಾ ಜಾಗವನ್ನು ಕಾವ್ಯ ಹೇಗೆ ತುಂಬುತ್ತಾರೆ ಎಂಬುದನ್ನು ಮುಂದಿನ ಎಪಿಸೋಡ್​​ಗಳಲ್ಲಿ ಕಾದು ನೋಡಬೇಕು.

author img

By

Published : May 3, 2019, 3:00 PM IST

ಕಾವ್ಯಗೌಡ

ಕಿರುತೆರೆ ಖ್ಯಾತ ಧಾರವಾಹಿ ರಾಧಾರಮಣದಲ್ಲಿ ಎರಡು ವರ್ಷಗಳಿಂದ ರಾಧಾ ಮಿಸ್ ಆಗಿ ನಟಿಸುತ್ತಿದ್ದ ಶ್ವೇತಾ ಪ್ರಸಾದ್ ಇತ್ತೀಚೆಗೆ ಧಾರವಾಹಿಯಿಂದ ಹೊರ ಹೋಗಿದ್ದರು. ಇದೀಗ ಅವರ ಜಾಗಕ್ಕೆ ಕಾವ್ಯ ಗೌಡ ಬಂದಿದ್ದಾರೆ.

kavyagowda
ಕಾವ್ಯಗೌಡ

ಧಾರವಾಹಿಯ ಮುಂದಿನ ಸಂಚಿಕೆಗಳಲ್ಲಿ ಶ್ವೇತಾ ಬದಲಿಗೆ ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಕಾವ್ಯಗೌಡ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು‘ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟವರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಇದೀಗ ರಾಧಾ ಮಿಸ್ ಆಗಿ ಅವರು ಧಾರವಾಹಿ ತಂಡ ಸೇರಿಕೊಂಡಿದ್ದು ಆ ಪಾತ್ರವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

kavyagowda
ಕಾವ್ಯಗೌಡ

ರಾಧಾ ರಮಣ ಧಾರವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿದ್ದ ಕಾರಣ ಅವರು ಧಾರವಾಹಿಯಿಂದ ಹೊರ ಹೋಗಿದ್ದಾರೆ. ಧಾರಾವಾಹಿ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ಅವರು ನಟಿಸಿದ್ದರು.

ಕಿರುತೆರೆ ಖ್ಯಾತ ಧಾರವಾಹಿ ರಾಧಾರಮಣದಲ್ಲಿ ಎರಡು ವರ್ಷಗಳಿಂದ ರಾಧಾ ಮಿಸ್ ಆಗಿ ನಟಿಸುತ್ತಿದ್ದ ಶ್ವೇತಾ ಪ್ರಸಾದ್ ಇತ್ತೀಚೆಗೆ ಧಾರವಾಹಿಯಿಂದ ಹೊರ ಹೋಗಿದ್ದರು. ಇದೀಗ ಅವರ ಜಾಗಕ್ಕೆ ಕಾವ್ಯ ಗೌಡ ಬಂದಿದ್ದಾರೆ.

kavyagowda
ಕಾವ್ಯಗೌಡ

ಧಾರವಾಹಿಯ ಮುಂದಿನ ಸಂಚಿಕೆಗಳಲ್ಲಿ ಶ್ವೇತಾ ಬದಲಿಗೆ ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಕಾವ್ಯಗೌಡ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು‘ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟವರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಇದೀಗ ರಾಧಾ ಮಿಸ್ ಆಗಿ ಅವರು ಧಾರವಾಹಿ ತಂಡ ಸೇರಿಕೊಂಡಿದ್ದು ಆ ಪಾತ್ರವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

kavyagowda
ಕಾವ್ಯಗೌಡ

ರಾಧಾ ರಮಣ ಧಾರವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿದ್ದ ಕಾರಣ ಅವರು ಧಾರವಾಹಿಯಿಂದ ಹೊರ ಹೋಗಿದ್ದಾರೆ. ಧಾರಾವಾಹಿ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ಅವರು ನಟಿಸಿದ್ದರು.

Intro:ಬೆಂಗಳೂರು: ರಾಧಾ ರಮಣ ಧಾರಾವಾಹಿಗೆ ರಾಧಾ ಮಿಸ್ ಎಂಟ್ರಿ ಕೊಟ್ರು!!Body: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.
ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ ಕಾವ್ಯ ಗೌಡ ನಿರ್ವಹಿಸಲಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಧಾರಾವಾಹಿಯಲ್ಲಿ ಶ್ವೇತಾ ಅವರ ಬದಲು ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ.
ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು, ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಯಲ್ಲಿ ನಟಿಸಿದ್ದರು.
ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.
ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ನಟಿಸಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಸದ್ಯಕ್ಕೆ ನಟಿ ಶ್ವೇತಾ ಪ್ರಸಾದ್ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.