ETV Bharat / sports

Asia Cup 2022: ಭಾರತಕ್ಕಿಂದು 'ಮಾಡು ಇಲ್ಲವೇ ಮಡಿ' ಪಂದ್ಯ; ಲಂಕಾ ಸವಾಲಿಗೆ ರೋಹಿತ್ ಪಡೆ ಸಿದ್ಧ

author img

By

Published : Sep 6, 2022, 6:45 AM IST

Updated : Sep 6, 2022, 6:55 AM IST

ಏಷ್ಯಾ ಕಪ್​ ಫೈನಲ್​​​ಗೆ ಲಗ್ಗೆ ಹಾಕಲು ಮಹತ್ವ ಪಡೆದುಕೊಂಡಿರುವ ಇಂದಿನ ಪಂದ್ಯದಲ್ಲಿ ಭಾರತ-ಶ್ರೀಲಂಕಾ ಮುಖಾಮುಖಿಯಾಗಲಿವೆ.

Asia Cup 2022
Asia Cup 2022

ದುಬೈ(ಯುಎಇ): ಏಷ್ಯಾ ಕಪ್​​ನ ಸೂಪರ್​ 4 ಹಂತದ ಮೊದಲ ಪಂದ್ಯದಲ್ಲಿ ಪಾಕ್​ ವಿರುದ್ಧ ಸೋಲು ಕಂಡಿರುವ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೊಳಗಾಗಿದೆ. ಶ್ರೀಲಂಕಾ ವಿರುದ್ಧ ಪಂದ್ಯ ನಡೆಯಲಿದ್ದು, ಫೈನಲ್​​​ ಆಸೆ ಜೀವಂತವಾಗಿರಿಸಿಕೊಳ್ಳಲು ಈ ಗೆಲುವು ರೋಹಿತ್​ ಬಳಗಕ್ಕೆ ಅತ್ಯಂತ ಅನಿವಾರ್ಯ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಈಗಾಗಲೇ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿರುವ ಸಿಂಹಳೀಯರು ಕೂಡಾ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದ್ದಾರೆ.

ಟಿ20 ಕ್ರಿಕೆಟ್​​ನಲ್ಲಿ ಭಾರತ-ಶ್ರೀಲಂಕಾ 25 ಪಂದ್ಯಗಳಲ್ಲಿ ಎದುರುಬದುರಾಗಿವೆ. ಈ ಪೈಕಿ ಲಂಕಾ 7 ಪಂದ್ಯಗಳಲ್ಲಿ ಗೆದ್ದಿದೆ. ಭಾರತ 17 ಸಲ ಗೆಲುವಿನ ನಗೆ ಬೀರಿದೆ. ಆದರೆ, ಏಷ್ಯಾ ಕಪ್​​ನಲ್ಲಿ ಉಭಯ ತಂಡಗಳದ್ದು ಸಮಬಲದ ಸಾಧನೆ. ಟೂರ್ನಿಯಲ್ಲಿ ಉಭಯ ತಂಡಗಳು 20 ಪಂದ್ಯಗಳಲ್ಲಿ ಆಡಿವೆ. ಇದರಲ್ಲಿ ಭಾರತ ಹಾಗೂ ಶ್ರೀಲಂಕಾ ತಲಾ 10 ಪಂದ್ಯಗಳಲ್ಲಿ ಗೆದ್ದಿವೆ.

ಇದನ್ನೂ ಓದಿ: 'ಟೆಸ್ಟ್ ನಾಯಕತ್ವ ತೊರೆದಾಗ ಧೋನಿ ಹೊರತುಪಡಿಸಿ ಮತ್ಯಾರೂ ಸಂದೇಶ ಕಳುಹಿಸಲಿಲ್ಲ':​​ ಕೊಹ್ಲಿ

ಪಾಕ್​ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಆಲ್​ರೌಂಡರ್​ ಜಡೇಜಾ ಇಲ್ಲದಿರುವುದು ತಂಡಕ್ಕೆ ಹೆಚ್ಚಿನ ಸಂಕಷ್ಟ ತಂದೊಡ್ಡಿದೆ. ಲೀಗ್​​​ ಹಂತದಲ್ಲಿ ಪಾಕ್ ವಿರುದ್ಧ ಅಬ್ಬರಿಸಿದ್ದ ಹಾರ್ದಿಕ್ ತದನಂತರದ ಪಂದ್ಯದಲ್ಲಿ ಸಂಪೂರ್ಣವಾಗಿ ಕಳೆಗುಂದಿದರು. ಚಹಲ್​​​ ಕೈಚಳಕ ನಡೆಯುತ್ತಿಲ್ಲ. ಹೀಗಾಗಿ, ಭುವನೇಶ್ವರ್ ಕುಮಾರ್​, ಅರ್ಷ್‌ದೀಪ್​ ಹಾಗೂ ಬಿಷ್ಣೋಯ್ ಮೇಲೆ ಹೆಚ್ಚಿನ ಒತ್ತಡವಿದೆ. ಆದರೆ, ಕಳೆದ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ರಾಹುಲ್​, ರೋಹಿತ್​, ವಿರಾಟ್​​ ಅಬ್ಬರಿಸಿದ್ದು, ಇಂದಿನ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ಮತ್ತಷ್ಟು ರನ್​ ಹರಿದುಬರಬೇಕಿದೆ.

ಲೀಗ್​​ ಹಂತದಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯ ಹಾಗೂ ಸೂಪರ್​ 4 ಹಂತದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿರುವ ಲಂಕಾ, ಭಾರತಕ್ಕೆ ತಿರುಗೇಟು ನೀಡುವ ಮೂಲಕ ಫೈನಲ್​ ಹಾದಿ ಸುಗಮ ಮಾಡಿಕೊಳ್ಳುವ ತವಕದಲ್ಲಿದೆ.

ಟೀಂ ಇಂಡಿಯಾ ಹೀಗಿದೆ: ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌.ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷ್‌ದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌.ಅಶ್ವಿನ್‌ ಹಾಗು ರವಿ ಬಿಷ್ಣೋಯ್‌.

ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಚರಿತ್ ಅಸಲಂಕಾ (ಉಪನಾಯಕ), ಧನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಶಾಲ್ ಮೆಂಡಿಸ್ (ವಿಕೆಟ್‌ಕೀಪರ್), ಭಾನುಕಾ ರಾಜಪಕ್ಸೆ (ವಿಕೆಟ್‌ಕೀಪರ್), ಅಶೆನ್ ಬಂಡಾರ, ಧನಂಜಯ ಡಿ ಸಿಲ್ವಾ, ವನಿಂದು ಹಸ್ಸರಂಗ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ದ್ವಾಂಡರ್ಸೆ, ಬಿನೂರ ಫೆರ್ನಾಂಡೊ, ಚಾಮಿಕ ಕರುಣಾರತ್ನೆ, ದಿಲ್ಶನ್ ಮಧುಶಂಕ, ಮತಿಶ ಪತಿರಾನ, ದಿನೇಶ್ ಚಾಂಡಿಮಲ್ (ವಿಕೆಟ್ ಕೀಪರ್), ನುವಾನಿಂದು ಫೆರ್ನಾಂಡೊ ಹಾಗು ಕಸುನ್ ರಜಿತ

ಪಂದ್ಯ ಆರಂಭ: ಸಂಜೆ 7:30ಕ್ಕೆ (ಭಾರತೀಯ ಕಾಲಮಾನ)

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ

ದುಬೈ(ಯುಎಇ): ಏಷ್ಯಾ ಕಪ್​​ನ ಸೂಪರ್​ 4 ಹಂತದ ಮೊದಲ ಪಂದ್ಯದಲ್ಲಿ ಪಾಕ್​ ವಿರುದ್ಧ ಸೋಲು ಕಂಡಿರುವ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೊಳಗಾಗಿದೆ. ಶ್ರೀಲಂಕಾ ವಿರುದ್ಧ ಪಂದ್ಯ ನಡೆಯಲಿದ್ದು, ಫೈನಲ್​​​ ಆಸೆ ಜೀವಂತವಾಗಿರಿಸಿಕೊಳ್ಳಲು ಈ ಗೆಲುವು ರೋಹಿತ್​ ಬಳಗಕ್ಕೆ ಅತ್ಯಂತ ಅನಿವಾರ್ಯ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಈಗಾಗಲೇ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿರುವ ಸಿಂಹಳೀಯರು ಕೂಡಾ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದ್ದಾರೆ.

ಟಿ20 ಕ್ರಿಕೆಟ್​​ನಲ್ಲಿ ಭಾರತ-ಶ್ರೀಲಂಕಾ 25 ಪಂದ್ಯಗಳಲ್ಲಿ ಎದುರುಬದುರಾಗಿವೆ. ಈ ಪೈಕಿ ಲಂಕಾ 7 ಪಂದ್ಯಗಳಲ್ಲಿ ಗೆದ್ದಿದೆ. ಭಾರತ 17 ಸಲ ಗೆಲುವಿನ ನಗೆ ಬೀರಿದೆ. ಆದರೆ, ಏಷ್ಯಾ ಕಪ್​​ನಲ್ಲಿ ಉಭಯ ತಂಡಗಳದ್ದು ಸಮಬಲದ ಸಾಧನೆ. ಟೂರ್ನಿಯಲ್ಲಿ ಉಭಯ ತಂಡಗಳು 20 ಪಂದ್ಯಗಳಲ್ಲಿ ಆಡಿವೆ. ಇದರಲ್ಲಿ ಭಾರತ ಹಾಗೂ ಶ್ರೀಲಂಕಾ ತಲಾ 10 ಪಂದ್ಯಗಳಲ್ಲಿ ಗೆದ್ದಿವೆ.

ಇದನ್ನೂ ಓದಿ: 'ಟೆಸ್ಟ್ ನಾಯಕತ್ವ ತೊರೆದಾಗ ಧೋನಿ ಹೊರತುಪಡಿಸಿ ಮತ್ಯಾರೂ ಸಂದೇಶ ಕಳುಹಿಸಲಿಲ್ಲ':​​ ಕೊಹ್ಲಿ

ಪಾಕ್​ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಆಲ್​ರೌಂಡರ್​ ಜಡೇಜಾ ಇಲ್ಲದಿರುವುದು ತಂಡಕ್ಕೆ ಹೆಚ್ಚಿನ ಸಂಕಷ್ಟ ತಂದೊಡ್ಡಿದೆ. ಲೀಗ್​​​ ಹಂತದಲ್ಲಿ ಪಾಕ್ ವಿರುದ್ಧ ಅಬ್ಬರಿಸಿದ್ದ ಹಾರ್ದಿಕ್ ತದನಂತರದ ಪಂದ್ಯದಲ್ಲಿ ಸಂಪೂರ್ಣವಾಗಿ ಕಳೆಗುಂದಿದರು. ಚಹಲ್​​​ ಕೈಚಳಕ ನಡೆಯುತ್ತಿಲ್ಲ. ಹೀಗಾಗಿ, ಭುವನೇಶ್ವರ್ ಕುಮಾರ್​, ಅರ್ಷ್‌ದೀಪ್​ ಹಾಗೂ ಬಿಷ್ಣೋಯ್ ಮೇಲೆ ಹೆಚ್ಚಿನ ಒತ್ತಡವಿದೆ. ಆದರೆ, ಕಳೆದ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ರಾಹುಲ್​, ರೋಹಿತ್​, ವಿರಾಟ್​​ ಅಬ್ಬರಿಸಿದ್ದು, ಇಂದಿನ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ಮತ್ತಷ್ಟು ರನ್​ ಹರಿದುಬರಬೇಕಿದೆ.

ಲೀಗ್​​ ಹಂತದಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯ ಹಾಗೂ ಸೂಪರ್​ 4 ಹಂತದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿರುವ ಲಂಕಾ, ಭಾರತಕ್ಕೆ ತಿರುಗೇಟು ನೀಡುವ ಮೂಲಕ ಫೈನಲ್​ ಹಾದಿ ಸುಗಮ ಮಾಡಿಕೊಳ್ಳುವ ತವಕದಲ್ಲಿದೆ.

ಟೀಂ ಇಂಡಿಯಾ ಹೀಗಿದೆ: ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌.ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷ್‌ದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌.ಅಶ್ವಿನ್‌ ಹಾಗು ರವಿ ಬಿಷ್ಣೋಯ್‌.

ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಚರಿತ್ ಅಸಲಂಕಾ (ಉಪನಾಯಕ), ಧನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಶಾಲ್ ಮೆಂಡಿಸ್ (ವಿಕೆಟ್‌ಕೀಪರ್), ಭಾನುಕಾ ರಾಜಪಕ್ಸೆ (ವಿಕೆಟ್‌ಕೀಪರ್), ಅಶೆನ್ ಬಂಡಾರ, ಧನಂಜಯ ಡಿ ಸಿಲ್ವಾ, ವನಿಂದು ಹಸ್ಸರಂಗ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ದ್ವಾಂಡರ್ಸೆ, ಬಿನೂರ ಫೆರ್ನಾಂಡೊ, ಚಾಮಿಕ ಕರುಣಾರತ್ನೆ, ದಿಲ್ಶನ್ ಮಧುಶಂಕ, ಮತಿಶ ಪತಿರಾನ, ದಿನೇಶ್ ಚಾಂಡಿಮಲ್ (ವಿಕೆಟ್ ಕೀಪರ್), ನುವಾನಿಂದು ಫೆರ್ನಾಂಡೊ ಹಾಗು ಕಸುನ್ ರಜಿತ

ಪಂದ್ಯ ಆರಂಭ: ಸಂಜೆ 7:30ಕ್ಕೆ (ಭಾರತೀಯ ಕಾಲಮಾನ)

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ

Last Updated : Sep 6, 2022, 6:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.