ಮುಂಬೈ: ವಿವಿಧ ಬೇಡಿಕೆ ಮುಂದಿಟ್ಟು ಬಾಂಗ್ಲಾ ಕ್ರಿಕೆಟ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಾಂಗ್ಲಾ ಕ್ರಿಕೆಟರ್ಸ್ ಇದೀಗ ಭಾರತ ವಿರುದ್ಧದ ಟಿ-20 ಸರಣಿಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದು, ಇದೇ ವಿಚಾರವಾಗಿ ಭಾರತೀಯ ಕ್ರಿಕೆಟ್ ಮಂಡಳಿ ಪ್ರತಿಕ್ರಿಯೆ ನೀಡಿದೆ.
ತಕ್ಷಣವೇ 11 ಬೇಡಿಕೆ ಈಡೇರಿಸುವಂತೆ ಕ್ರಿಕೆಟರ್ಸ್ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ತಮ್ಮ ಬೇಡಿಕೆ ಈಡೇರಿಕೆಯಾಗದಿದ್ದರೆ ಮುಂದಿನ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಮುಂದಿನ ತಿಂಗಳು ಭಾರತದ ವಿರುದ್ಧ ನಡೆಯಲಿರುವ ಟಿ-20 ಸರಣಿ ಮೇಲೆ ಕರಿಛಾಯೆ ಮೂಡಿದೆ.