ETV Bharat / sports

ವಿಂಡೀಸ್​​​​ ವಿರುದ್ಧ ರಾಹುಲ್​ಗೆ ಸುವರ್ಣಾವಕಾಶ... ಬಿಟ್ಟರೆ ಸಿಗದು ಮತ್ತೊಂದು ಚಾನ್ಸ್​​​​!

ವಿಂಡೀಸ್ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಆರಂಬಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ರೆ ಓಪನರ್​ ಸ್ಥಾನ ಭದ್ರಪಡಿಸಿಕೊಳ್ಳಬಹುದು.

author img

By

Published : Dec 5, 2019, 10:29 PM IST

ಭಾರತ ವೆಸ್ಟ್ ಇಂಡೀಸ್ ಟಿ20 ಪಂದ್ಯ, KL Rahul To Seal Opener Spot
ಕೆ.ಎಲ್.ರಾಹುಲ್

ಹೈದರಾಬಾದ್: ನಾಳೆಯಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್​ಗೆ ಸುವರ್ಣ ಅವಕಾಶವೊಂದು ಒದಗಿಬರುವ ಸಾಧ್ಯತೆ ಇದೆ.

ವಿಂಡೀಸ್ ವಿರುದ್ಧದ ಚುಟುಕು ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್​, ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್​ ಆರಂಭಿಸುವ ಸಾಧ್ಯತೆ ಇದೆ. ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದಿದ್ದು, ರಾಹುಲ್ ಓಪನರ್​ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಭಾರತ ವೆಸ್ಟ್ ಇಂಡೀಸ್ ಟಿ20 ಪಂದ್ಯ, KL Rahul To Seal Opener Spot
ಶಿಖರ್ ಧವನ್, ಕೆ.ಎಲ್.ರಾಹುಲ್

ದೇಶಿ ಟೂರ್ನಿ ಮತ್ತು ಐಪಿಎಲ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಉತ್ತಮ ಪ್ರದರ್ಶನ ನೀಡಿರುವ ಕೆ.ಎಲ್.ರಾಹುಲ್, ಕೆರಿಬಿಯನ್ನರ ವಿರುದ್ಧ ಉತ್ತಮ ಪ್ರದರ್ಶನ ತೋರಿದರೆ ಟೀಂ ಇಂಡಿಯಾದಲ್ಲಿ ಆರಂಬಿಕನ ಸ್ಥಾನ ಭದ್ರಪಡಿಸಿಕೊಳ್ಳಬಹುದಾಗಿದೆ. ಮುಂಬರುವ ಟಿ-20 ವಿಶ್ವಕಪ್​ ಟೂರ್ನಿಯ ದೃಷ್ಟಿಯಿಂದ ಪ್ರತಿಯೊಂದು ಟಿ-20 ಪಂದ್ಯಗಳು ಮುಖ್ಯವಾಗಿದ್ದು, ರಾಹುಲ್ ಆರಂಭಿಕನಾಗಿ ಅಬ್ಬರಿಸಿದ್ರೆ ವಿಶ್ವಕಪ್​ ಟೂರ್ನಿಗೆ ಆಯ್ಕೆಯಾಗುವ ಸಾಧ್ಯೆತೆ ಇದೆ.

ಇನ್ನು ಶಿಖರ್​ ಧವನ್ ಬದಲಿಗೆ ಸ್ಥಾನ ಪಡೆದುಕೊಂಡಿರುವ ಯುವ ವಿಕೆಟ್ ಕೀಪರ್​ ಸಂಜು ಸ್ಯಾಮ್ಸನ್​ಗೆ ಆಡುವ 11ರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದ್ದು, ರಿಷಭ್ ಪಂತ್ ಕಣಕ್ಕಿಳಿಯುವ ಸಾಧ್ಯತೆಯೇ ಹೆಚ್ಚಿದೆ.

ಹೈದರಾಬಾದ್: ನಾಳೆಯಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್​ಗೆ ಸುವರ್ಣ ಅವಕಾಶವೊಂದು ಒದಗಿಬರುವ ಸಾಧ್ಯತೆ ಇದೆ.

ವಿಂಡೀಸ್ ವಿರುದ್ಧದ ಚುಟುಕು ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್​, ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್​ ಆರಂಭಿಸುವ ಸಾಧ್ಯತೆ ಇದೆ. ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದಿದ್ದು, ರಾಹುಲ್ ಓಪನರ್​ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಭಾರತ ವೆಸ್ಟ್ ಇಂಡೀಸ್ ಟಿ20 ಪಂದ್ಯ, KL Rahul To Seal Opener Spot
ಶಿಖರ್ ಧವನ್, ಕೆ.ಎಲ್.ರಾಹುಲ್

ದೇಶಿ ಟೂರ್ನಿ ಮತ್ತು ಐಪಿಎಲ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಉತ್ತಮ ಪ್ರದರ್ಶನ ನೀಡಿರುವ ಕೆ.ಎಲ್.ರಾಹುಲ್, ಕೆರಿಬಿಯನ್ನರ ವಿರುದ್ಧ ಉತ್ತಮ ಪ್ರದರ್ಶನ ತೋರಿದರೆ ಟೀಂ ಇಂಡಿಯಾದಲ್ಲಿ ಆರಂಬಿಕನ ಸ್ಥಾನ ಭದ್ರಪಡಿಸಿಕೊಳ್ಳಬಹುದಾಗಿದೆ. ಮುಂಬರುವ ಟಿ-20 ವಿಶ್ವಕಪ್​ ಟೂರ್ನಿಯ ದೃಷ್ಟಿಯಿಂದ ಪ್ರತಿಯೊಂದು ಟಿ-20 ಪಂದ್ಯಗಳು ಮುಖ್ಯವಾಗಿದ್ದು, ರಾಹುಲ್ ಆರಂಭಿಕನಾಗಿ ಅಬ್ಬರಿಸಿದ್ರೆ ವಿಶ್ವಕಪ್​ ಟೂರ್ನಿಗೆ ಆಯ್ಕೆಯಾಗುವ ಸಾಧ್ಯೆತೆ ಇದೆ.

ಇನ್ನು ಶಿಖರ್​ ಧವನ್ ಬದಲಿಗೆ ಸ್ಥಾನ ಪಡೆದುಕೊಂಡಿರುವ ಯುವ ವಿಕೆಟ್ ಕೀಪರ್​ ಸಂಜು ಸ್ಯಾಮ್ಸನ್​ಗೆ ಆಡುವ 11ರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದ್ದು, ರಿಷಭ್ ಪಂತ್ ಕಣಕ್ಕಿಳಿಯುವ ಸಾಧ್ಯತೆಯೇ ಹೆಚ್ಚಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.