ETV Bharat / sports

ಧೋನಿಗೆ ಭಾರತ ರತ್ನ ನೀಡಿ ಗೌರವಿಸಿ: ಕೇಂದ್ರಕ್ಕೆ ಕಾಂಗ್ರೆಸ್​​ ಶಾಸಕನ ಮನವಿ

author img

By

Published : Aug 18, 2020, 2:32 PM IST

ಶನಿವಾರ ಆಗಸ್ಟ್​ 15ರಂದು ಭಾರತದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್​ ಧೋನಿ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ್ದರು. ಭಾರತ ಕ್ರಿಕೆಟ್ ಚರಿಷ್ಮಾವನ್ನೇ ಬದಲಿಸಿದ ಹಾಗೂ ಐಸಿಸಿಯ 3 ಟ್ರೋಫಿಗಳನ್ನು ಗೆದ್ದಿರುವ ವಿಶ್ವದ ಏಕೈಕ ನಾಯಕನಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಬೇಕು ಎಂದು ಕಾಂಗ್ರೆಸ್​ ಶಾಸಕರೊಬ್ಬರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದೀಗ ಅವರ ಜೊತೆ ಅಭಿಮಾನಿಗಳು ಸಹ ಕೈಜೋಡಿಸಿದ್ದಾರೆ.

ಧೋನಿಗೆ ಭಾರತ ರತ್ನ
ಧೋನಿಗೆ ಭಾರತ ರತ್ನ

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂಎಸ್​ ಧೋನಿ ಅವರಿಗೆ ಭಾರತ ರತ್ನ ನೀಡಿ ಎಂದು ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕರೊಬ್ಬರು ಭಾರತ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಶನಿವಾರ ಆಗಸ್ಟ್​ 15ರಂದು ಭಾರತದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್​ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ್ದರು. ಭಾರತ ಕ್ರಿಕೆಟ್​​ನ ಅದೃಷ್ಟ ಬದಲಿಸಿದ ಹಾಗೂ ಐಸಿಸಿಯ 3 ಟ್ರೋಫಿಗಳನ್ನು ಗೆದ್ದಿರುವ ವಿಶ್ವದ ಏಕೈಕ ನಾಯಕನಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕಾಂಗ್ರೆಸ್​ ಶಾಸಕರೊಬ್ಬರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಇದೀಗ ಅವರ ಜೊತೆ ಅಭಿಮಾನಿಗಳು ಕೈಜೋಡಿಸಿದ್ದಾರೆ.

ಮಧ್ಯಪ್ರದೇಶದ ಭೋಪಾಲ್​​​ನ ಕಾಂಗ್ರೆಸ್ ಶಾಸಕ ಪಿಸಿ ಶರ್ಮಾ, ದೇಶದ ರತ್ನವಾಗಿರುವ ಎಂಎಸ್​ ಧೋನಿಗೆ​ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

" ಎಂಎಸ್​ ಧೋನಿ ಕ್ರಿಕೆಟ್​ ಜಗತ್ತಿನಲ್ಲಿ ಭಾರತದ ಕೀರ್ತಿಯನ್ನು ವಿಶ್ವದಲ್ಲಿ ಅತ್ಯುನ್ನತ ಸ್ಥಾನಕ್ಕೇರಿಸಿದ್ದಾರೆ. ಅವರು ದೇಶದ ರತ್ನ, ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಬೇಕೆಂದು" ಪಿಸಿ ಶರ್ಮಾ ತಮ್ಮ ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ.

ಈಗಾಗಲೇ ಕ್ರಿಕೆಟ್​ ದೇವರೆಂದೇ ಖ್ಯಾತರಾಗಿರುವ​ ಸಚಿನ್​ ತೆಂಡುಲ್ಕರ್​ ಅವರಿಗೆ ಭಾರತ ರತ್ನ ಪುರಸ್ಕಾರ ದೊರತಿದೆ. ಫೆಬ್ರವರಿ 04, 2014 ರಂದು ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಸಚಿನ್ ತೆಂಡುಲ್ಕರ್ ಭಾರತ ರತ್ನ ಪುರಸ್ಕಾರ ಪಡೆದಿದ್ದರು.

ಎಂಎಸ್​ ಧೋನಿ ತಮ್ಮ ನಾಯಕತ್ವದಲ್ಲಿ ಭಾರತಕ್ಕೆ 2007ರ ಟಿ-20 ವಿಶ್ವಕಪ್​, 2011ರ ಏಕದಿನ ವಿಶ್ವಕಪ್​ ಹಾಗೂ 2013 ಚಾಂಪಿಯನ್​ ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ. ಈ ಸಾಧನೆ ಮಾಡಿರುವ ವಿಶ್ವದ ಏಕೈಕ ನಾಯಕ ಎಂಬ ಕೀರ್ತಿಯೂ ಅವರ ಹೆಸರಿನಲ್ಲಿದೆ.

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂಎಸ್​ ಧೋನಿ ಅವರಿಗೆ ಭಾರತ ರತ್ನ ನೀಡಿ ಎಂದು ಮಧ್ಯ ಪ್ರದೇಶದ ಕಾಂಗ್ರೆಸ್​ ಶಾಸಕರೊಬ್ಬರು ಭಾರತ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಶನಿವಾರ ಆಗಸ್ಟ್​ 15ರಂದು ಭಾರತದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್​ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ್ದರು. ಭಾರತ ಕ್ರಿಕೆಟ್​​ನ ಅದೃಷ್ಟ ಬದಲಿಸಿದ ಹಾಗೂ ಐಸಿಸಿಯ 3 ಟ್ರೋಫಿಗಳನ್ನು ಗೆದ್ದಿರುವ ವಿಶ್ವದ ಏಕೈಕ ನಾಯಕನಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕಾಂಗ್ರೆಸ್​ ಶಾಸಕರೊಬ್ಬರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಇದೀಗ ಅವರ ಜೊತೆ ಅಭಿಮಾನಿಗಳು ಕೈಜೋಡಿಸಿದ್ದಾರೆ.

ಮಧ್ಯಪ್ರದೇಶದ ಭೋಪಾಲ್​​​ನ ಕಾಂಗ್ರೆಸ್ ಶಾಸಕ ಪಿಸಿ ಶರ್ಮಾ, ದೇಶದ ರತ್ನವಾಗಿರುವ ಎಂಎಸ್​ ಧೋನಿಗೆ​ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

" ಎಂಎಸ್​ ಧೋನಿ ಕ್ರಿಕೆಟ್​ ಜಗತ್ತಿನಲ್ಲಿ ಭಾರತದ ಕೀರ್ತಿಯನ್ನು ವಿಶ್ವದಲ್ಲಿ ಅತ್ಯುನ್ನತ ಸ್ಥಾನಕ್ಕೇರಿಸಿದ್ದಾರೆ. ಅವರು ದೇಶದ ರತ್ನ, ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಬೇಕೆಂದು" ಪಿಸಿ ಶರ್ಮಾ ತಮ್ಮ ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ.

ಈಗಾಗಲೇ ಕ್ರಿಕೆಟ್​ ದೇವರೆಂದೇ ಖ್ಯಾತರಾಗಿರುವ​ ಸಚಿನ್​ ತೆಂಡುಲ್ಕರ್​ ಅವರಿಗೆ ಭಾರತ ರತ್ನ ಪುರಸ್ಕಾರ ದೊರತಿದೆ. ಫೆಬ್ರವರಿ 04, 2014 ರಂದು ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಸಚಿನ್ ತೆಂಡುಲ್ಕರ್ ಭಾರತ ರತ್ನ ಪುರಸ್ಕಾರ ಪಡೆದಿದ್ದರು.

ಎಂಎಸ್​ ಧೋನಿ ತಮ್ಮ ನಾಯಕತ್ವದಲ್ಲಿ ಭಾರತಕ್ಕೆ 2007ರ ಟಿ-20 ವಿಶ್ವಕಪ್​, 2011ರ ಏಕದಿನ ವಿಶ್ವಕಪ್​ ಹಾಗೂ 2013 ಚಾಂಪಿಯನ್​ ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ. ಈ ಸಾಧನೆ ಮಾಡಿರುವ ವಿಶ್ವದ ಏಕೈಕ ನಾಯಕ ಎಂಬ ಕೀರ್ತಿಯೂ ಅವರ ಹೆಸರಿನಲ್ಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.