ETV Bharat / sports

ಅಮ್ಮನ ಜೊತೆ ಮಾತನಾಡಿದ್ದು ನನ್ನನ್ನು ಮಾನಸಿಕವಾಗಿ ಬಲಿಷ್ಠಗೊಳಿಸಿತು: ಸಿರಾಜ್​

author img

By

Published : Jan 18, 2021, 8:21 PM IST

ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅಂತಹ ಘಟಾನುಘಟಿ ಬೌಲರ್​ಗಳ ಅನುಪಸ್ಥಿತಿಯಲ್ಲಿ ಕೇವಲ ಮೂರನೇ ಪಂದ್ಯವನ್ನಾಡುತ್ತಿದ್ದರೂ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್​ನಲ್ಲಿ 5 ವಿಕೆಟ್​ ಪಡೆದು ಮಿಂಚಿದ್ದಾರೆ. ಅಲ್ಲದೆ ಟೂರ್ನಿಯಲ್ಲಿ ಒಟ್ಟಾರೆ 13 ವಿಕೆಟ್​ ಪಡೆದು ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಮೊಹಮ್ಮದ್ ಸಿರಾಜ್​
ಮೊಹಮ್ಮದ್ ಸಿರಾಜ್​

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಸರಣಿ ನಿರ್ಣಯಿಸುವ ಅಂತಿಮ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್​ ಪಡೆದು ಮಿಂಚಿರುವ ಮೊಹಮ್ಮದ್​ ಸಿರಾಜ್​ ತಾವು ಸಾಕಷ್ಟು ನೋವಿನ ನಡುವೆ ಈ ಸಾಧನೆ ಮಾಡಲು ತಮ್ಮ ತಾಯಿ ಮತ್ತು ಕುಟುಂಬದ ಪ್ರೋತ್ಸಾಹದಾಯಕ ಮಾತುಗಳೇ ಕಾರಣ ಎಂದು ತಿಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅಂತಹ ಘಟಾನುಘಟಿ ಬೌಲರ್​ಗಳ ಅನುಪಸ್ಥಿತಿಯಲ್ಲಿ ಕೇವಲ ಮೂರನೇ ಪಂದ್ಯವನ್ನಾಡುತ್ತಿದ್ದರೂ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್​ನಲ್ಲಿ 5 ವಿಕೆಟ್​ ಪಡೆದು ಮಿಂಚಿದ್ದಾರೆ. ಅಲ್ಲದೆ ಟೂರ್ನಿಯಲ್ಲಿ ಒಟ್ಟಾರೆ 13 ವಿಕೆಟ್​ ಪಡೆದು ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳಲ್ಲಿ 2ನೇ ಸ್ಥಾನದಲ್ಲಿದ್ದಾರೆ.

4ನೇ ದಿನದಾಟದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಿರಾಜ್​ ತಮ್ಮ ಈ ಪ್ರದರ್ಶನಕ್ಕೆ ತಾಯಿಯ ಜೊತೆ ಮಾತನಾಡಿದ್ದೆ ಕಾರಣ ಎಂದು ತಿಳಿಸಿದ್ದಾರೆ. "ತಂದೆಯನ್ನು ಕಳೆದುಕೊಂಡಿದ್ದು ನನಗೆ ತುಂಬಾ ಕಠಿಣವಾದ ಸಂದರ್ಭವಾಗಿತ್ತು. ಈ ಸಮಯದಲ್ಲಿ ನಾನು ಐದು ವಿಕೆಟ್ ಪಡೆಯಲು ಸಾಧ್ಯವಾಗಿದ್ದಕ್ಕೆ ಕೃತಜ್ಞನಾಗಿದ್ದೇನೆ. ನೋವಿನಲ್ಲಿದ್ದ ನಾನು ತಾಯಿಯ ಜೊತೆಗೆ ಮಾತನಾಡಿದ ನಂತರ ಮಾನಸಿಕವಾಗಿ ಬಲಿಷ್ಠನಾದೆ. ನಂತರ ನನ್ನ ತಂದೆಯ ಕನಸನ್ನು ನನಸು ಮಾಡುವುದರ ಕಡೆಗೆ ಗಮನ ನೀಡಿದೆ." ಎಂದು ಸಿರಾಜ್ ತಿಳಿಸಿದ್ದಾರೆ.

ಮೊಹಮ್ಮದ್ ಸಿರಾಜ್​
ಮೊಹಮ್ಮದ್ ಸಿರಾಜ್​

"ಭಾರತ ತಂಡದಲ್ಲಿ ಆಡಲು ಅವಕಾಶ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನನ್ನ ತಂದೆಯ ಕನಸು ಕೂಡ ಆಗಿತ್ತು. ನನ್ನ ಮಗ ಆಡುವುದನ್ನು ಇಡೀ ಪ್ರಪಂಚ ನೋಡುತ್ತದೆ ಎಂದು ಅವರು ಹೇಳುತ್ತಿದ್ದರು. ಆವರು ಇಂದು ಬದುಕಿದ್ದರೆ ತುಂಬಾ ಸಂತೋಷ ಪಡುತ್ತಿದ್ದರು. ಆದರೆ ಅವರ ಆಶೀರ್ವಾದ ಯಾವಾಗಲೂ ನನ್ನ ಜೊತೆಗಿರುತ್ತದೆ ಎಂಬುದು ನನಗೆ ಗೊತ್ತಿದೆ. ಇಂದಿನ ನನ್ನ ಪ್ರದರ್ಶನ ನನ್ನನ್ನು ಮೂಕನನ್ನಾಗಿಸಿದೆ." ಎಂದು ಅವರು ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನು ಟೂರ್ನಿಯಲ್ಲಿ 13 ವಿಕೆಟ್​ ಪಡೆದಿದ್ದು, ಆಸ್ಟ್ರೇಲಿಯಾ ಸ್ಟಾರ್​ ಬ್ಯಾಟ್ಸ್​ಮನ್​ ಸ್ಟೀವ್ ಸ್ಮಿತ್ ವಿಕೆಟ್​ ಪಡೆದದ್ದು ನನಗೆ ತುಂಬಾ ವಿಶೇಷವೆನಿಸಿದೆ ಎಂದು ಸೋಮವಾರ 73 ರನ್​ಗಳಿಗೆ 5 ವಿಕೆಟ್​ ಪಡೆದ ಸಿರಾಜ್ ತಿಳಿಸಿದ್ದಾರೆ.

ಇದನ್ನು ಓದಿ:ಆಸ್ಟ್ರೇಲಿಯಾ ಈ ಸರಣಿ ಡ್ರಾ ಮಾಡಿಕೊಂಡ್ರೆ, ಸೋಲಿಗಿಂತಲೂ ಹೀನಾಯ : ರಿಕಿ ಪಾಂಟಿಂಗ್​

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಸರಣಿ ನಿರ್ಣಯಿಸುವ ಅಂತಿಮ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್​ ಪಡೆದು ಮಿಂಚಿರುವ ಮೊಹಮ್ಮದ್​ ಸಿರಾಜ್​ ತಾವು ಸಾಕಷ್ಟು ನೋವಿನ ನಡುವೆ ಈ ಸಾಧನೆ ಮಾಡಲು ತಮ್ಮ ತಾಯಿ ಮತ್ತು ಕುಟುಂಬದ ಪ್ರೋತ್ಸಾಹದಾಯಕ ಮಾತುಗಳೇ ಕಾರಣ ಎಂದು ತಿಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅಂತಹ ಘಟಾನುಘಟಿ ಬೌಲರ್​ಗಳ ಅನುಪಸ್ಥಿತಿಯಲ್ಲಿ ಕೇವಲ ಮೂರನೇ ಪಂದ್ಯವನ್ನಾಡುತ್ತಿದ್ದರೂ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್​ನಲ್ಲಿ 5 ವಿಕೆಟ್​ ಪಡೆದು ಮಿಂಚಿದ್ದಾರೆ. ಅಲ್ಲದೆ ಟೂರ್ನಿಯಲ್ಲಿ ಒಟ್ಟಾರೆ 13 ವಿಕೆಟ್​ ಪಡೆದು ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳಲ್ಲಿ 2ನೇ ಸ್ಥಾನದಲ್ಲಿದ್ದಾರೆ.

4ನೇ ದಿನದಾಟದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಿರಾಜ್​ ತಮ್ಮ ಈ ಪ್ರದರ್ಶನಕ್ಕೆ ತಾಯಿಯ ಜೊತೆ ಮಾತನಾಡಿದ್ದೆ ಕಾರಣ ಎಂದು ತಿಳಿಸಿದ್ದಾರೆ. "ತಂದೆಯನ್ನು ಕಳೆದುಕೊಂಡಿದ್ದು ನನಗೆ ತುಂಬಾ ಕಠಿಣವಾದ ಸಂದರ್ಭವಾಗಿತ್ತು. ಈ ಸಮಯದಲ್ಲಿ ನಾನು ಐದು ವಿಕೆಟ್ ಪಡೆಯಲು ಸಾಧ್ಯವಾಗಿದ್ದಕ್ಕೆ ಕೃತಜ್ಞನಾಗಿದ್ದೇನೆ. ನೋವಿನಲ್ಲಿದ್ದ ನಾನು ತಾಯಿಯ ಜೊತೆಗೆ ಮಾತನಾಡಿದ ನಂತರ ಮಾನಸಿಕವಾಗಿ ಬಲಿಷ್ಠನಾದೆ. ನಂತರ ನನ್ನ ತಂದೆಯ ಕನಸನ್ನು ನನಸು ಮಾಡುವುದರ ಕಡೆಗೆ ಗಮನ ನೀಡಿದೆ." ಎಂದು ಸಿರಾಜ್ ತಿಳಿಸಿದ್ದಾರೆ.

ಮೊಹಮ್ಮದ್ ಸಿರಾಜ್​
ಮೊಹಮ್ಮದ್ ಸಿರಾಜ್​

"ಭಾರತ ತಂಡದಲ್ಲಿ ಆಡಲು ಅವಕಾಶ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನನ್ನ ತಂದೆಯ ಕನಸು ಕೂಡ ಆಗಿತ್ತು. ನನ್ನ ಮಗ ಆಡುವುದನ್ನು ಇಡೀ ಪ್ರಪಂಚ ನೋಡುತ್ತದೆ ಎಂದು ಅವರು ಹೇಳುತ್ತಿದ್ದರು. ಆವರು ಇಂದು ಬದುಕಿದ್ದರೆ ತುಂಬಾ ಸಂತೋಷ ಪಡುತ್ತಿದ್ದರು. ಆದರೆ ಅವರ ಆಶೀರ್ವಾದ ಯಾವಾಗಲೂ ನನ್ನ ಜೊತೆಗಿರುತ್ತದೆ ಎಂಬುದು ನನಗೆ ಗೊತ್ತಿದೆ. ಇಂದಿನ ನನ್ನ ಪ್ರದರ್ಶನ ನನ್ನನ್ನು ಮೂಕನನ್ನಾಗಿಸಿದೆ." ಎಂದು ಅವರು ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನು ಟೂರ್ನಿಯಲ್ಲಿ 13 ವಿಕೆಟ್​ ಪಡೆದಿದ್ದು, ಆಸ್ಟ್ರೇಲಿಯಾ ಸ್ಟಾರ್​ ಬ್ಯಾಟ್ಸ್​ಮನ್​ ಸ್ಟೀವ್ ಸ್ಮಿತ್ ವಿಕೆಟ್​ ಪಡೆದದ್ದು ನನಗೆ ತುಂಬಾ ವಿಶೇಷವೆನಿಸಿದೆ ಎಂದು ಸೋಮವಾರ 73 ರನ್​ಗಳಿಗೆ 5 ವಿಕೆಟ್​ ಪಡೆದ ಸಿರಾಜ್ ತಿಳಿಸಿದ್ದಾರೆ.

ಇದನ್ನು ಓದಿ:ಆಸ್ಟ್ರೇಲಿಯಾ ಈ ಸರಣಿ ಡ್ರಾ ಮಾಡಿಕೊಂಡ್ರೆ, ಸೋಲಿಗಿಂತಲೂ ಹೀನಾಯ : ರಿಕಿ ಪಾಂಟಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.