ETV Bharat / sports

ಇಂದು ಇಂಡೋ-ವೆಸ್ಟ್​ ಇಂಡೀಸ್​ 2ನೇ ಟೆಸ್ಟ್​​.. ಸರಣಿ ಕ್ಲೀನ್​ ಸ್ವೀಪ್​ನತ್ತ ಟೀಂ ಇಂಡಿಯಾ ಕಣ್ಣು!

author img

By

Published : Aug 30, 2019, 9:06 AM IST

ಇಂದಿನಿಂದ ಕಿಂಗ್ಸ್​ಟನ್​ನ ಸಬಿನಾ ಪಾರ್ಕ್​ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್​ ಪಂದ್ಯ ಆರಂಭವಾಗಲಿದ್ದು, ಸರಣಿ ಕ್ಲೀನ್ ಸ್ವೀಪ್​ ನತ್ತ ಟೀಂ ಇಂಡಿಯಾ ಕಣ್ಣಿಟ್ಟಿದೆ. ಸರಣಿ ಸಮಬಲದತ್ತ ವೆಸ್ಟ್​ ಇಂಡೀಸ್ ಚಿತ್ತ ಹರಿಸಿದೆ.

ಸರಣಿ ಕ್ಲೀನ್​ ಸ್ವೀಪ್​ನತ್ತ ಟೀಂ ಇಂಡಿಯಾ ಕಣ್ಣು

ಕಿಂಗ್ಸ್​ಟನ್: ವೆಸ್ಟ್​ ಇಂಡೀಸ್​ ವಿರುದ್ಧ ನಡೆದ ಟೆಸ್ಟ್​ ಚಾಂಪಿಯನ್​​ಶಿಪ್​ನ ಮೊದಲ ಟೆಸ್ಟ್​​ ಪಂದ್ಯದಲ್ಲಿ 318ರನ್​ಗಳ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ಎರಡನೇ ಟೆಸ್ಟ್​ ಪಂದ್ಯವನ್ನು ಗೆಲ್ಲುವ ವಿಶ್ವಾಸ ಹೊಂದಿದೆ.

ಇಂದಿನಿಂದ ಕಿಂಗ್ಸ್​ಟನ್​ನ ಸಬಿನಾ ಪಾರ್ಕ್​ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್​ ಪಂದ್ಯ ನಡೆಯಲಿದ್ದು ಉಭಯ ತಂಗಳು ಕಠಿಣ ತಾಲೀಮು ನಡೆಸಿವೆ. ತವರಿನಲ್ಲಿ ಟೀಂ ಇಂಡಿಯಾ ವಿರುದ್ಧ ಮೊದಲ ಟೆಸ್ಟ್​ ಪಂದ್ಯದಲ್ಲಿ ಮುಗ್ಗರಿಸಿರುವ ಕೆರಿಬಿಯನ್​ ಪಡೆ ಎರಡನೇ ಟೆಸ್ಟ್​ಗೆ ಬಲಿಷ್ಟ ತಂಡವನ್ನ ಆಯ್ಕೆ ಮಾಡಿದೆ. ಆ ಮೂಲಕ ಹೇಗಾದರೂ ಮಾಡಿ ಸರಣಿ ಸಮಬಲ ಸಾಧಿಸುವ ಉದ್ದೇಶ ಹೊಂದಿದೆ.

ಇನ್ನು ಟೀಂ ಇಂಡಿಯಾ ಆಟಗಾರರು ಕೂಡ ನೆಟ್​ನಲ್ಲಿ ಭರ್ಜರಿ ತಾಲೀಮು ನಡೆಸಿದ್ದಾರೆ. ದ್ವಿತೀಯ ಟೆಸ್ಟ್​ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಆರಂಭಿಕ ಆಟಗಾಗರರಾದ ಮಯಾಂಕ್ ಅಗರ್ವಾಲ್ ಮತ್ತು ಕೆ ಎಲ್ ರಾಹುಲ್​ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಆದರೂ ಎರಡನೇ ಪಂದ್ಯದಲ್ಲಿ ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊದಲ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ಹನುಮ ವಿಹಾರಿ ಕೂಡ ದ್ವಿತೀಯ ಇನ್ನಿಂಗ್ಸ್​ನಲ್ಲಿ 93 ರನ್​ ಗಳಿಸುವ ಮೂಲಕ ತಮ್ಮ ಆಯ್ಕೆಗೆ ನ್ಯಾಯ ಒದಗಿಸಿದ್ದರು. ಬೌಲಿಂಗ್ ವಿಭಾಗದಲ್ಲಿ ಇಶಾಂತ್​ ಶರ್ಮಾ, ಜಸ್ಪ್ರಿತ್​ ಬುಮ್ರಾ, ಮಹ್ಮದ್ ಶಮಿ, ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಪಿಚ್ ಕಂಡೀಷನ್​ ಉತ್ತಮವಾಗಿದೆ ಎಂದು ಕಾಣುತ್ತಿದೆ. ಮತ್ತೊಂದು ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದ್ದೇವೆ ಅಂತಾ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ.

ಕಿಂಗ್ಸ್​ಟನ್: ವೆಸ್ಟ್​ ಇಂಡೀಸ್​ ವಿರುದ್ಧ ನಡೆದ ಟೆಸ್ಟ್​ ಚಾಂಪಿಯನ್​​ಶಿಪ್​ನ ಮೊದಲ ಟೆಸ್ಟ್​​ ಪಂದ್ಯದಲ್ಲಿ 318ರನ್​ಗಳ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ಎರಡನೇ ಟೆಸ್ಟ್​ ಪಂದ್ಯವನ್ನು ಗೆಲ್ಲುವ ವಿಶ್ವಾಸ ಹೊಂದಿದೆ.

ಇಂದಿನಿಂದ ಕಿಂಗ್ಸ್​ಟನ್​ನ ಸಬಿನಾ ಪಾರ್ಕ್​ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್​ ಪಂದ್ಯ ನಡೆಯಲಿದ್ದು ಉಭಯ ತಂಗಳು ಕಠಿಣ ತಾಲೀಮು ನಡೆಸಿವೆ. ತವರಿನಲ್ಲಿ ಟೀಂ ಇಂಡಿಯಾ ವಿರುದ್ಧ ಮೊದಲ ಟೆಸ್ಟ್​ ಪಂದ್ಯದಲ್ಲಿ ಮುಗ್ಗರಿಸಿರುವ ಕೆರಿಬಿಯನ್​ ಪಡೆ ಎರಡನೇ ಟೆಸ್ಟ್​ಗೆ ಬಲಿಷ್ಟ ತಂಡವನ್ನ ಆಯ್ಕೆ ಮಾಡಿದೆ. ಆ ಮೂಲಕ ಹೇಗಾದರೂ ಮಾಡಿ ಸರಣಿ ಸಮಬಲ ಸಾಧಿಸುವ ಉದ್ದೇಶ ಹೊಂದಿದೆ.

ಇನ್ನು ಟೀಂ ಇಂಡಿಯಾ ಆಟಗಾರರು ಕೂಡ ನೆಟ್​ನಲ್ಲಿ ಭರ್ಜರಿ ತಾಲೀಮು ನಡೆಸಿದ್ದಾರೆ. ದ್ವಿತೀಯ ಟೆಸ್ಟ್​ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಆರಂಭಿಕ ಆಟಗಾಗರರಾದ ಮಯಾಂಕ್ ಅಗರ್ವಾಲ್ ಮತ್ತು ಕೆ ಎಲ್ ರಾಹುಲ್​ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಆದರೂ ಎರಡನೇ ಪಂದ್ಯದಲ್ಲಿ ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊದಲ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ಹನುಮ ವಿಹಾರಿ ಕೂಡ ದ್ವಿತೀಯ ಇನ್ನಿಂಗ್ಸ್​ನಲ್ಲಿ 93 ರನ್​ ಗಳಿಸುವ ಮೂಲಕ ತಮ್ಮ ಆಯ್ಕೆಗೆ ನ್ಯಾಯ ಒದಗಿಸಿದ್ದರು. ಬೌಲಿಂಗ್ ವಿಭಾಗದಲ್ಲಿ ಇಶಾಂತ್​ ಶರ್ಮಾ, ಜಸ್ಪ್ರಿತ್​ ಬುಮ್ರಾ, ಮಹ್ಮದ್ ಶಮಿ, ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಪಿಚ್ ಕಂಡೀಷನ್​ ಉತ್ತಮವಾಗಿದೆ ಎಂದು ಕಾಣುತ್ತಿದೆ. ಮತ್ತೊಂದು ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದ್ದೇವೆ ಅಂತಾ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ.

Intro:Body:

sports


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.