ETV Bharat / sports

ಹಂದ್ವಾರ​ ಎನ್​ಕೌಂಟರ್​ನಲ್ಲಿ ಯೋಧರು ಹುತಾತ್ಮ... ಸಂತಾಪ ಸೂಚಿಸಿದ ಪೃಥ್ವಿ ಶಾ!

ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾಗಿರುವ ಭಾರತೀಯ ಯೋಧರಿಗೆ ಟೀಂ ಇಂಡಿಯಾ ಕ್ರಿಕೆಟರ್​ ಪೃಥ್ವಿ ಶಾ ಟ್ವೀಟ್​ ಮೂಲಕ ಗೌರವವಂದನೆ ಸಲ್ಲಿಕೆ ಮಾಡಿದ್ದಾರೆ.

author img

By

Published : May 4, 2020, 8:43 PM IST

Prithvi Shaw pays tribute
Prithvi Shaw pays tribute

ನವದೆಹಲಿ: ಕಳೆದೆರಡು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ಹಂದ್ವಾರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೇಜರ್​, ಕರ್ನಲ್​ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ಅವರ ಧೈರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

ಇದೀಗ ಟೀಂ ಇಂಡಿಯಾ ಪ್ಲೇಯರ್​​ ಪೃಥ್ವಿ ಶಾ ಸಂತಾಪ ಸೂಚಿಸಿದ್ದು, ಗೌರವ ಸಲ್ಲಿಕೆ ಮಾಡಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ನಮ್ಮ ಸೈನಿಕರು ಹಂದ್ವಾರ್ ಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ನಮ್ಮ ರಾಷ್ಟ್ರ ರಕ್ಷಿಸಲು ಅವರು ಮಾಡಿದ ತ್ಯಾಗ ನಮ್ಮ ಮನದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಹುತಾತ್ಮರಾದ ಪ್ರತಿಯೊಬ್ಬ ಯೋಧರಿಗೂ ನಮಸ್ಕರಿಸುತ್ತೇವೆ ಮತ್ತು ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಟ್ವೀಟ್​ ಮಾಡಿದ್ದಾರೆ.

ಉಗ್ರ ಸಂಹಾರದ ವೇಳೆ ಹುತಾತ್ಮರಾದ ವೀರ ಯೋಧರಿಗೆ ವಿರಾಟ್ ಕೊಹ್ಲಿ ಸಂತಾಪ

ಜಮ್ಮು- ಕಾಶ್ಮೀರದ ಹಂದ್ವಾರದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಕರ್ನಲ್​ ಅಶುತೋಷ್​ ಶರ್ಮಾ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. ನಿನ್ನೆ ಟ್ವೀಟ್​ ಮಾಡಿದ್ದ ವಿರಾಟ್​ ಕೊಹ್ಲಿ ಯಾವುದೇ ಸಂದರ್ಭದಲ್ಲೂ ಕರ್ತವ್ಯ ಮರೆಯದವರು ನಿಜವಾದ ಹೀರೋಗಳು. ಅವರ ತ್ಯಾಗ ಮರೆಯಲು ಅಸಾಧ್ಯ. ಹಂದ್ವಾರ ಗುಂಡಿನ ಕಾಳಗದಲ್ಲಿ ಪ್ರಾಣ ಕಳೆದುಕೊಂಡ ಯೋಧರು ಮತ್ತು ಪೊಲೀಸರಿಗೆ ನಾನು ತಲೆ ಬಾಗುತ್ತೇನೆ. ವೀರಯೋಧರ ಕುಟುಂಬಕ್ಕೆ ಸಾವಿನ ಶಕ್ತಿಯನ್ನು ಭರಿಸುವ ಧೈರ್ಯ ದೇವರು ನೀಡಲಿ. ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ. ಜೈ ಹಿಂದ್​ ಎಂದು ಟ್ವೀಟ್​ ಮಾಡಿದ್ದಾರೆ..

ನವದೆಹಲಿ: ಕಳೆದೆರಡು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ಹಂದ್ವಾರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೇಜರ್​, ಕರ್ನಲ್​ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ಅವರ ಧೈರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

ಇದೀಗ ಟೀಂ ಇಂಡಿಯಾ ಪ್ಲೇಯರ್​​ ಪೃಥ್ವಿ ಶಾ ಸಂತಾಪ ಸೂಚಿಸಿದ್ದು, ಗೌರವ ಸಲ್ಲಿಕೆ ಮಾಡಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ನಮ್ಮ ಸೈನಿಕರು ಹಂದ್ವಾರ್ ಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ನಮ್ಮ ರಾಷ್ಟ್ರ ರಕ್ಷಿಸಲು ಅವರು ಮಾಡಿದ ತ್ಯಾಗ ನಮ್ಮ ಮನದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಹುತಾತ್ಮರಾದ ಪ್ರತಿಯೊಬ್ಬ ಯೋಧರಿಗೂ ನಮಸ್ಕರಿಸುತ್ತೇವೆ ಮತ್ತು ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಟ್ವೀಟ್​ ಮಾಡಿದ್ದಾರೆ.

ಉಗ್ರ ಸಂಹಾರದ ವೇಳೆ ಹುತಾತ್ಮರಾದ ವೀರ ಯೋಧರಿಗೆ ವಿರಾಟ್ ಕೊಹ್ಲಿ ಸಂತಾಪ

ಜಮ್ಮು- ಕಾಶ್ಮೀರದ ಹಂದ್ವಾರದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಕರ್ನಲ್​ ಅಶುತೋಷ್​ ಶರ್ಮಾ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. ನಿನ್ನೆ ಟ್ವೀಟ್​ ಮಾಡಿದ್ದ ವಿರಾಟ್​ ಕೊಹ್ಲಿ ಯಾವುದೇ ಸಂದರ್ಭದಲ್ಲೂ ಕರ್ತವ್ಯ ಮರೆಯದವರು ನಿಜವಾದ ಹೀರೋಗಳು. ಅವರ ತ್ಯಾಗ ಮರೆಯಲು ಅಸಾಧ್ಯ. ಹಂದ್ವಾರ ಗುಂಡಿನ ಕಾಳಗದಲ್ಲಿ ಪ್ರಾಣ ಕಳೆದುಕೊಂಡ ಯೋಧರು ಮತ್ತು ಪೊಲೀಸರಿಗೆ ನಾನು ತಲೆ ಬಾಗುತ್ತೇನೆ. ವೀರಯೋಧರ ಕುಟುಂಬಕ್ಕೆ ಸಾವಿನ ಶಕ್ತಿಯನ್ನು ಭರಿಸುವ ಧೈರ್ಯ ದೇವರು ನೀಡಲಿ. ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ. ಜೈ ಹಿಂದ್​ ಎಂದು ಟ್ವೀಟ್​ ಮಾಡಿದ್ದಾರೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.