ನವದೆಹಲಿ: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದರೆ ನಾಯಕತ್ವದ ಒತ್ತಡದಿಂದ ಅಜಿಂಕ್ಯ ರಹಾನೆ ತತ್ತರಿಸುವುದಿಲ್ಲ ಎಂದು ಬ್ಯಾಟಿಂಗ್ ಶ್ರೇಷ್ಠ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಅಡಿಲೇಡ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಡೆಯಲಿರುವ ಅಹರ್ನಿಶಿ ಟೆಸ್ಟ್ ಪಂದ್ಯದ ನಂತರ ಕೊಹ್ಲಿ ಪಿತೃತ್ವ ರಜೆ ಮೇಲೆ ತವರಿಗೆ ವಾಪಸ್ ಆಗಲಿದ್ದಾರೆ. ಉಳಿದ ಮೂರು ಪಂದ್ಯಗಳಲ್ಲಿ ರಹಾನೆ, ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

"ಅಜಿಂಕ್ಯಾ ರಹಾನೆ ಮೇಲೆ ಒತ್ತಡವಿಲ್ಲ, ಏಕೆಂದರೆ ಅವರು ಎರಡು ಬಾರಿ ತಂಡವನ್ನು ಮುನ್ನಡೆಸಿ ಗೆದ್ದಿದ್ದಾರೆ. ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸಿದ್ದು, ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಅಫಘಾನಿಸ್ತಾನ ವಿರುದ್ಧ ಕೂಡ ಟೀಂ ಇಂಡಿಯಾವನ್ನು ಮುನ್ನಡೆಸಿ ಗೆಲುವು ದಾಖಲಿಸಿದ್ದಾರೆ" ಎಂದು ಗವಾಸ್ಕರ್ ಹೇಳಿದ್ದಾರೆ.
ಓದಿ ಅಭ್ಯಾಸ ಪಂದ್ಯದ ಶತಕ ನನ್ನ ಆತ್ಮ ವಿಶ್ವಾಸ ಹೆಚ್ಚಿಸಿದೆ: ಪಂತ್
3 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಬೇಕು ಎಂಬ ವಿಚಾರ ಅವರಿಗೆ ಈಗಾಗಲೆ ತಿಳಿದಿದೆ. ಹೀಗಾಗಿ ನಾಯಕತ್ವಕ್ಕೆ ಸಂಬಂಧಿಸಿದಂತೆ ರಹಾನೆಗೆ ಯಾವುದೇ ಒತ್ತಡವಿಲ್ಲ ಎಂದಿದ್ದಾರೆ.
"ಕ್ಯಾಪ್ಟನ್ ಆಗಿರುವುದು ಅಥವಾ ಕ್ಯಾಪ್ಟನ್ ಆಗಿ ಮುಂದುವರಿಯುವುದು ಅವರ ಚಿಂತನೆಯ ಭಾಗವಾಗಲಿದೆ ಎಂದು ನಾನು ಭಾವಿಸುವುದಿಲ್ಲ. ತನ್ನ ಕ್ರಿಕೆಟ್ ಆಡುವಂತೆಯೇ ಪ್ರಾಮಾಣಿಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಒಬ್ಬ ಬ್ಯಾಟ್ಸ್ಮನ್ನಂತೆ ಮೈದಾನದಲ್ಲಿ ತನ್ನ ಆಟವನ್ನು ಆಡಲಿದ್ದಾರೆ" ಎಂದು ಗವಾಸ್ಕರ್ ಹೇಳಿದ್ದಾರೆ.