ಹೈದರಾಬಾದ್: ಎಡಗೈ ಹೆಬ್ಬೆರಳು ಗಾಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಮೈದಾನದಲ್ಲಿ ಜಾಗಿಂಗ್ ಮಾಡುವ ಮೂಲಕ ಮತ್ತೆ ತಂಡಕ್ಕೆ ಮರಳುವ ಮುನ್ಸೂಚನೆ ನೀಡಿದ್ದಾರೆ.
ಜನವರಿಯಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ 3 ನೇ ದಿನದಂದು ಬ್ಯಾಟಿಂಗ್ ಮಾಡುವಾಗ ಜಡೇಜಾ ಅವರ ಎಡಗೈ ಹೆಬ್ಬೆರಳಿಗೆ ಪೆಟ್ಟು ಬಿದ್ದಿತ್ತು. ನಂತರ ಅವರನ್ನ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿ ವಿಶ್ರಾಂತಿ ನೀಡಲಾಗಿತ್ತು.
-
Back on the field 🏃🏻#firstday #postsurgery pic.twitter.com/SrCyLx7TQx
— Ravindrasinh jadeja (@imjadeja) March 2, 2021 " class="align-text-top noRightClick twitterSection" data="
">Back on the field 🏃🏻#firstday #postsurgery pic.twitter.com/SrCyLx7TQx
— Ravindrasinh jadeja (@imjadeja) March 2, 2021Back on the field 🏃🏻#firstday #postsurgery pic.twitter.com/SrCyLx7TQx
— Ravindrasinh jadeja (@imjadeja) March 2, 2021
"ಸರ್ಜರಿ ನಂತರ ಮೊದಲ ದಿನ ಬ್ಯಾಕ್ ಆನ್ ದಿ ಫೀಲ್ಡ್" ಎಂದು ಜಡೇಜಾ ಬರೆದುಕೊಂಡಿದ್ದಾರೆ. "ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ, ಶೀಘ್ರದಲ್ಲೇ ಅಬ್ಬರದಿಂದ ಮರಳುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.
ಓದಿ : ಸರಣಿ ಡ್ರಾ ಮಾಡಿಕೊಂಡರೆ ಅದು ನನ್ನ ಕ್ರಿಕೆಟ್ ಜೀವನದ ಅತ್ಯುತ್ತಮ ಸಾಧನೆ: ರೂಟ್
ಪ್ರಸ್ತುತ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-1 ರಿಂದ ಮುನ್ನಡೆ ಸಾಧಿಸಿದೆ. ನಾಳೆಯಿಂದ ಅಂತಿಮ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಇದು ಭಾರತ ತಂಡಕ್ಕೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಯ ಫೈನಲ್ಗೆ ಅರ್ಹತೆ ಪಡೆಯ ಬೇಕಾದರೆ ಈ ಪಂದ್ಯವನ್ನು ವಿರಾಟ್ ಪಡೆ ಗೆಲ್ಲಲೇಬೇಕು ಇಲ್ಲವೇ ಡ್ರಾ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿಯಲ್ಲಿದೆ. ಕೊನೆಯ ಟೆಸ್ಟ್ನಲ್ಲಿ ಇಂಗ್ಲೆಂಡ್ ಜಯಗಳಿಸಿದರೆ, ಆಸ್ಟ್ರೇಲಿಯಾ ಡಬ್ಲ್ಯೂಟಿಸಿ ಫೈನಲ್ಗೆ ಅರ್ಹತೆ ಪಡೆಯುತ್ತದೆ.