ETV Bharat / sports

ಶ್ರೀಲಂಕಾ ಕ್ರಿಕೆಟ್ ತಂಡ ಅಮಾನತುಗೊಳಿಸಿದ ಐಸಿಸಿ: ಅಂತಾರಾಷ್ಟ್ರೀಯ ಪಂದ್ಯಗಳಿಂದ ದೂರ ಉಳಿಯಲಿರುವ ಲಂಕಾ ತಂಡ

author img

By ETV Bharat Karnataka Team

Published : Nov 10, 2023, 10:57 PM IST

ಸರ್ಕಾರದ ಹಸ್ತಕ್ಷೇಪದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ ಶುಕ್ರವಾರ ಶ್ರೀಲಂಕಾ ಕ್ರಿಕೆಟ್​ ತಂಡವನ್ನು ಅಮಾನತು ಮಾಡಿದೆ.

ಶ್ರೀಲಂಕಾ ಕ್ರಿಕೆಟ್ ಅಮಾನತುಗೊಳಿಸಿದ ಐಸಿಸಿ
ಶ್ರೀಲಂಕಾ ಕ್ರಿಕೆಟ್ ಅಮಾನತುಗೊಳಿಸಿದ ಐಸಿಸಿ

ಹೈದರಾಬಾದ್: ಸದ್ಯ ನಡೆಯುತ್ತಿರುವ ವಿಶ್ವಕಪ್​ ಪಂದ್ಯದಲ್ಲಿ ಕಳಪೆ ಪ್ರದರ್ಶನ ತೋರಿ ಟೂರ್ನಿಯಿಂದ ಹೊರ ಬಿದ್ದಿರುವ ಶ್ರೀಲಂಕಾ ತಂಡಕ್ಕೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ (ICC) ಮತ್ತೊಂದು ಶಾಕ್​ ನೀಡಿದ್ದು, ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್​ ತಂಡದ ಸದಸ್ಯತ್ವವನ್ನು ಅಮಾನತುಗೊಳಿಸಿದೆ.

ಹೌದು, ಶ್ರೀಲಂಕಾ ಸರ್ಕಾರ ಕ್ರಿಕೆಟ್ ಮಂಡಳಿಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಕಂಡು ಬಂದಿದ್ದು ಐಸಿಸಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಉಲ್ಲೇಖಿಸಿರುವ ಐಸಿಸಿ ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್‌ ತಂಡದ ಸದಸ್ಯತ್ವವನ್ನು ರದ್ದುಗೊಳಿಸಿದೆ. ಶ್ರೀಲಂಕಾ ಕ್ರಿಕೆಟ್ ಮೇಲಿನ ನಿಷೇಧವನ್ನು ಐಸಿಸಿ ಹಿಂತೆಗೆದು ಕೊಳ್ಳುವವರೆಗೂ ತಂಡ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಾಧ್ಯವಿಲ್ಲ. ಪ್ರಸ್ತುತ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡದ ಎಲ್ಲ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಐಸಿಸಿ ಈ ಕ್ರಮ ಕೈಗೊಂಡಿದ್ದರಿಂದ ಟೂರ್ನಿ ವೇಳಾಪಟ್ಟಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.

ಅಮಾನತಿಗೆ ಕಾರಣ ಏನು?: ಪ್ರಸ್ತುತ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ​ ಭಾರತ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ಹೀನಾಯ ಸೋಲಿನ ನಂತರ ಕ್ರಿಕೆಟ್​ ಅಭಿಮಾನಿಗಳು ಲಂಕಾ ಕ್ರಿಕೆಟ್​ ಮಂಡಳಿಯನ್ನು ತೀವ್ರವಾಗಿ ಟೀಕಿಸಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಸರ್ಕಾರ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿತ್ತು. ಶ್ರೀಲಂಕಾದ ಸಂಸತ್ತು ದೇಶದ ಕ್ರಿಕೆಟ್ ಆಡಳಿತ ಮಂಡಳಿಯನ್ನು ವಜಾಗೊಳಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಇದಕ್ಕೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಬೆಂಬಲ ಕೂಡ ಸಿಕ್ಕಿತು. ನಂತರ ಕ್ರೀಡಾ ಸಚಿವ ರೋಶನ್ ರಣಸಿಂಗ್ ಅವರು ಶ್ರೀಲಂಕಾ ಕ್ರಿಕೆಟ್ ಆಡಳಿತವನ್ನು ವಜಾಗೊಳಿಸಿ, ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸಲು ಏಳು ಸದಸ್ಯರ ಹೊಸ ಸಮಿತಿಯ ಮುಖ್ಯಸ್ಥರಾಗಿ ಅರ್ಜುನ ರಣತುಂಗ ಅವರನ್ನು ನೇಮಕ ಮಾಡಿ ಆದೇಶಿಸಿತ್ತು.

ಇದರ ವಿರುದ್ಧ ಶ್ರೀಲಂಕಾ ಕ್ರಿಕೆಟ್​ ಮಂಡಳಿ ನ್ಯಾಯಾಲಯದ ಮೊರೆ ಹೋಗಿತ್ತು. ಶ್ರೀಲಂಕಾ ಕ್ರಿಕೆಟ್​ ಮಂಡಳಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಾಲಯವು ಸರ್ಕಾರದ ನಿರ್ಧಾರವನ್ನು ತಡೆಹಿಡಿದು, ಶಮ್ಮಿ ಸಿಲ್ವಾ ನೇತೃತ್ವದ ಶ್ರೀಲಂಕಾ ಕ್ರಿಕೆಟ್ ಆಡಳಿತವನ್ನು ಮರುಸ್ಥಾಪಿಸಿತ್ತು.

ಈ ಎಲ್ಲಾ ಬೇಳವಣಿಗೆಗಳನ್ನು ಗಮನಿಸಿದ ಐಸಿಸಿ ತಕ್ಷಣವೇ ಜಾರಿಗೆ ಬರುವಂತೆ ಲಂಕಾ ಕ್ರಿಕೆಟ್ ಸದಸ್ಯತ್ವವನ್ನು ರದ್ದುಗೊಳಿಸಿದೆ. ಪ್ರಸುತ್ತ ವಿಶ್ವಕಪ್​ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಆಡಿದ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಗೆದ್ದು 7 ರಲ್ಲಿ ಸೋಲುಕಂಡು ಟೂರ್ನಿಯನ್ನು ಮುಕ್ತಾಯಗೊಳಿಸಿದೆ.

ಇದನ್ನೂ ಓದಿ: ರೋಹಿತ್​ ಶರ್ಮಾಗೆ ಟೀಮ್​ ಇಂಡಿಯಾ ನಾಯಕತ್ವ ವಹಿಸಿಕೊಳ್ಳಲು ಆಸಕ್ತಿ ಹೊಂದಿರಲಿಲ್ಲ: ಸೌರವ್​ ಗಂಗೂಲಿ

ಹೈದರಾಬಾದ್: ಸದ್ಯ ನಡೆಯುತ್ತಿರುವ ವಿಶ್ವಕಪ್​ ಪಂದ್ಯದಲ್ಲಿ ಕಳಪೆ ಪ್ರದರ್ಶನ ತೋರಿ ಟೂರ್ನಿಯಿಂದ ಹೊರ ಬಿದ್ದಿರುವ ಶ್ರೀಲಂಕಾ ತಂಡಕ್ಕೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ (ICC) ಮತ್ತೊಂದು ಶಾಕ್​ ನೀಡಿದ್ದು, ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್​ ತಂಡದ ಸದಸ್ಯತ್ವವನ್ನು ಅಮಾನತುಗೊಳಿಸಿದೆ.

ಹೌದು, ಶ್ರೀಲಂಕಾ ಸರ್ಕಾರ ಕ್ರಿಕೆಟ್ ಮಂಡಳಿಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಕಂಡು ಬಂದಿದ್ದು ಐಸಿಸಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಉಲ್ಲೇಖಿಸಿರುವ ಐಸಿಸಿ ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್‌ ತಂಡದ ಸದಸ್ಯತ್ವವನ್ನು ರದ್ದುಗೊಳಿಸಿದೆ. ಶ್ರೀಲಂಕಾ ಕ್ರಿಕೆಟ್ ಮೇಲಿನ ನಿಷೇಧವನ್ನು ಐಸಿಸಿ ಹಿಂತೆಗೆದು ಕೊಳ್ಳುವವರೆಗೂ ತಂಡ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಾಧ್ಯವಿಲ್ಲ. ಪ್ರಸ್ತುತ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡದ ಎಲ್ಲ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಐಸಿಸಿ ಈ ಕ್ರಮ ಕೈಗೊಂಡಿದ್ದರಿಂದ ಟೂರ್ನಿ ವೇಳಾಪಟ್ಟಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.

ಅಮಾನತಿಗೆ ಕಾರಣ ಏನು?: ಪ್ರಸ್ತುತ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ​ ಭಾರತ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ಹೀನಾಯ ಸೋಲಿನ ನಂತರ ಕ್ರಿಕೆಟ್​ ಅಭಿಮಾನಿಗಳು ಲಂಕಾ ಕ್ರಿಕೆಟ್​ ಮಂಡಳಿಯನ್ನು ತೀವ್ರವಾಗಿ ಟೀಕಿಸಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಸರ್ಕಾರ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿತ್ತು. ಶ್ರೀಲಂಕಾದ ಸಂಸತ್ತು ದೇಶದ ಕ್ರಿಕೆಟ್ ಆಡಳಿತ ಮಂಡಳಿಯನ್ನು ವಜಾಗೊಳಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಇದಕ್ಕೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಬೆಂಬಲ ಕೂಡ ಸಿಕ್ಕಿತು. ನಂತರ ಕ್ರೀಡಾ ಸಚಿವ ರೋಶನ್ ರಣಸಿಂಗ್ ಅವರು ಶ್ರೀಲಂಕಾ ಕ್ರಿಕೆಟ್ ಆಡಳಿತವನ್ನು ವಜಾಗೊಳಿಸಿ, ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸಲು ಏಳು ಸದಸ್ಯರ ಹೊಸ ಸಮಿತಿಯ ಮುಖ್ಯಸ್ಥರಾಗಿ ಅರ್ಜುನ ರಣತುಂಗ ಅವರನ್ನು ನೇಮಕ ಮಾಡಿ ಆದೇಶಿಸಿತ್ತು.

ಇದರ ವಿರುದ್ಧ ಶ್ರೀಲಂಕಾ ಕ್ರಿಕೆಟ್​ ಮಂಡಳಿ ನ್ಯಾಯಾಲಯದ ಮೊರೆ ಹೋಗಿತ್ತು. ಶ್ರೀಲಂಕಾ ಕ್ರಿಕೆಟ್​ ಮಂಡಳಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಾಲಯವು ಸರ್ಕಾರದ ನಿರ್ಧಾರವನ್ನು ತಡೆಹಿಡಿದು, ಶಮ್ಮಿ ಸಿಲ್ವಾ ನೇತೃತ್ವದ ಶ್ರೀಲಂಕಾ ಕ್ರಿಕೆಟ್ ಆಡಳಿತವನ್ನು ಮರುಸ್ಥಾಪಿಸಿತ್ತು.

ಈ ಎಲ್ಲಾ ಬೇಳವಣಿಗೆಗಳನ್ನು ಗಮನಿಸಿದ ಐಸಿಸಿ ತಕ್ಷಣವೇ ಜಾರಿಗೆ ಬರುವಂತೆ ಲಂಕಾ ಕ್ರಿಕೆಟ್ ಸದಸ್ಯತ್ವವನ್ನು ರದ್ದುಗೊಳಿಸಿದೆ. ಪ್ರಸುತ್ತ ವಿಶ್ವಕಪ್​ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಆಡಿದ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಗೆದ್ದು 7 ರಲ್ಲಿ ಸೋಲುಕಂಡು ಟೂರ್ನಿಯನ್ನು ಮುಕ್ತಾಯಗೊಳಿಸಿದೆ.

ಇದನ್ನೂ ಓದಿ: ರೋಹಿತ್​ ಶರ್ಮಾಗೆ ಟೀಮ್​ ಇಂಡಿಯಾ ನಾಯಕತ್ವ ವಹಿಸಿಕೊಳ್ಳಲು ಆಸಕ್ತಿ ಹೊಂದಿರಲಿಲ್ಲ: ಸೌರವ್​ ಗಂಗೂಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.