ETV Bharat / sports

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ದೃಢ: ಬಿಸಿಸಿಐ - ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿ

ಯುಎಇಯಲ್ಲಿ ನಡೆಯಲಿರುವ ಏಷ್ಯಾ ಕಪ್ ಟಿ20 ಕ್ರಿಕೆಟ್‌ ಟೂರ್ನಿಗೆ ಭಾರತ ತಂಡ ಸಜ್ಜಾಗಿದೆ. ಈ ನಡುವೆ ಕನ್ನಡಿಗ ರಾಹುಲ್ ದ್ರಾವಿಡ್​ಗೆ ಕೋವಿಡ್ ದೃಢಪಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

India coach Rahul Dravid tests positive for Covid  India coach Rahul Dravid  Rahul Dravid covid positive  Rahul Dravid corona  ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ದೃಢ  ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟಿ20 ಟೂರ್ನಿ  ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್  ರಾಹುಲ್ ದ್ರಾವಿಡ್​ಗೆ ಕೋವಿಡ್ ಪರೀಕ್ಷೆ  ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ
ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ದೃಢ
author img

By

Published : Aug 23, 2022, 12:03 PM IST

Updated : Aug 23, 2022, 12:41 PM IST

ಮುಂಬೈ: ಯುಎಇಯಲ್ಲಿ ನಿಗದಿಯಾಗಿರುವ ಏಷ್ಯಾ ಕಪ್ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಭಾರತದ ಆರಂಭಿಕ ಅಭಿಯಾನಕ್ಕೆ ಕೆಲವೇ ದಿನಗಳ ಮೊದಲು ಕಹಿ ಸುದ್ದಿ ಹೊರಬಿದ್ದಿದೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢಪಟ್ಟಿದೆ ಎಂದು ಬಿಸಿಸಿಐ ಹೇಳಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಗಾಗಿ ದ್ರಾವಿಡ್ ಪ್ರಯಾಣಿಸಲಿಲ್ಲ. ಕೆ ಎಲ್ ರಾಹುಲ್ ನೇತೃತ್ವದ ತಂಡವು 3-0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಕೋಚಿಂಗ್ ಸಿಬ್ಬಂದಿಗೆ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಿತ್ತು.

ಆಗಸ್ಟ್ 28 ರಂದು ಏಷ್ಯಾ ಕಪ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮೊದಲ ಪಂದ್ಯ ಆಡಲಿದೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಅಜಮ್ ತಂಡದ ವಿರುದ್ಧ 10 ವಿಕೆಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಉತ್ಸುಕವಾಗಿದೆ.

ಇದನ್ನೂ ಓದಿ: ಭೂಮಿ ಮೇಲೆ 4 ಸಾವಿರ ಹುಲಿಗಳಿವೆ, ಭಾರತ ಕ್ರಿಕೆಟ್​ನಲ್ಲಿ ದ್ರಾವಿಡ್​ ಏಕೈಕ ಹುಲಿ ಎಂದ ರಾಸ್​​ ಟೇಲರ್

ಮುಂಬೈ: ಯುಎಇಯಲ್ಲಿ ನಿಗದಿಯಾಗಿರುವ ಏಷ್ಯಾ ಕಪ್ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಭಾರತದ ಆರಂಭಿಕ ಅಭಿಯಾನಕ್ಕೆ ಕೆಲವೇ ದಿನಗಳ ಮೊದಲು ಕಹಿ ಸುದ್ದಿ ಹೊರಬಿದ್ದಿದೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢಪಟ್ಟಿದೆ ಎಂದು ಬಿಸಿಸಿಐ ಹೇಳಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಗಾಗಿ ದ್ರಾವಿಡ್ ಪ್ರಯಾಣಿಸಲಿಲ್ಲ. ಕೆ ಎಲ್ ರಾಹುಲ್ ನೇತೃತ್ವದ ತಂಡವು 3-0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಕೋಚಿಂಗ್ ಸಿಬ್ಬಂದಿಗೆ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಿತ್ತು.

ಆಗಸ್ಟ್ 28 ರಂದು ಏಷ್ಯಾ ಕಪ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮೊದಲ ಪಂದ್ಯ ಆಡಲಿದೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಅಜಮ್ ತಂಡದ ವಿರುದ್ಧ 10 ವಿಕೆಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಉತ್ಸುಕವಾಗಿದೆ.

ಇದನ್ನೂ ಓದಿ: ಭೂಮಿ ಮೇಲೆ 4 ಸಾವಿರ ಹುಲಿಗಳಿವೆ, ಭಾರತ ಕ್ರಿಕೆಟ್​ನಲ್ಲಿ ದ್ರಾವಿಡ್​ ಏಕೈಕ ಹುಲಿ ಎಂದ ರಾಸ್​​ ಟೇಲರ್

Last Updated : Aug 23, 2022, 12:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.