ETV Bharat / sports

ವೆಸ್ಟ್ ಇಂಡೀಸ್​ ವಿರುದ್ಧದ ಏಕದಿನ ಸರಣಿಗಾಗಿ ಅಹ್ಮದಾಬಾದ್​ಗೆ ಬಂದಿಳಿದ ಭಾರತ ತಂಡ

author img

By

Published : Jan 31, 2022, 7:13 PM IST

ದಕ್ಷಿಣ ಆಫ್ರಿಕಾ ಪ್ರವಾಸ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ ಫಿಟ್​ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೊದಲ ಬಾರಿಗೆ ಭಾರತ ಏಕದಿನ ತಂಡದ ಅಧಿಕೃತ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

India squad arrives in Ahmedabad for ODIs against West Indies
ಅಹ್ಮದಾಬಾದ್​ಗೆ ಬಂದಿಳಿದ ಭಾರತ ತಂಡ

ಅಹ್ಮದಾಬಾದ್​: ಫೆಬ್ರವರಿ 6ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ತಂಡದ ಸದಸ್ಯರು ಅಹ್ಮದಾಬಾದ್​ಗೆ ಆಗಮಿಸಿದ್ದಾರೆ. ಎಲ್ಲಾ ಆಟಗಾರರು ಬಯೋಬಬಲ್​ ಸೇರಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಸ್ಪಿನ್ನರ್ ಯುಜ್ವೇಂದ್ರ​ ಚಹಲ್​ ವಿಮಾನದಲ್ಲಿ ಶಿಖರ್​ ಧವನ್​ ಜೊತೆ ಕುಳಿತಿರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದು, ತಾವು ಅಹ್ಮದಾಬಾದ್​ಗೆ ತೆರಳುತ್ತಿರುವುದಾಗಿ ಬರೆದುಕೊಂಡಿದ್ದಾರೆ. ಈ ಕುರಿತು ಪಿಟಿಐಗೆ ಮಾಹಿತಿ ನೀಡಿರುವ ಬಿಸಿಸಿಐ ಅಧಿಕಾರಿಗಳು "ವಿಂಡೀಸ್ ಸರಣಿಗೆ ಆಗಮಿಸಿರುವ ಭಾರತೀಯ ಆಟಗಾರರು 3 ದಿನಗಳ ಕ್ವಾರಂಟೈನ್​ಗೆ ಒಳಗಾಗಿದ್ದಾರೆ" ಎಂದು ತಿಳಿಸಿದ್ದಾರೆ.

Ahemdabad ✈️🇮🇳 pic.twitter.com/oNqUDb7QUa

— Yuzvendra Chahal (@yuzi_chahal) January 30, 2022

ಇದನ್ನೂ ಓದಿ:ರೋಹಿತ್​ ಸೂಕ್ತ​, ರಹಾನೆ ಉತ್ತಮ.. ಆದ್ರೆ ರಾಹುಲ್​ಗೆ ಟೆಸ್ಟ್​ ನಾಯಕತ್ವದ ಗುಣಗಳಿಲ್ಲ: ಪಾಂಟಿಂಗ್

ಗಾಯದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ ಫಿಟ್​ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೊದಲ ಬಾರಿಗೆ ಭಾರತ ಏಕದಿನ ತಂಡದ ಅಧಿಕೃತ ನಾಯಕನಾಗಿ ಟೀಂಅನ್ನು ಮುನ್ನಡೆಸಲಿದ್ದಾರೆ. ಯುವ ಬೌಲರ್​ ರವಿ ಬಿಷ್ಣೋಯ್​, ಆಲ್​ರೌಂಡರ್​ ದೀಪಕ್ ಹೂಡ ​ಮತ್ತು ಆವೇಶ್ ಖಾನ್ ಈ ಸರಣಿಯಲ್ಲಿ ಮೊದಲ ಬಾರಿಗೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಕ್ರಿಕೆಟ್​ನಿಂದ ದೂರ ಉಳಿದಿರುವ ಸ್ಪಿನ್ನರ್ ಕುಲ್ದೀಪ್ ಯಾದವ್​ ಕೂಡ ಕಮ್​ಬ್ಯಾಕ್ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಅಹ್ಮದಾಬಾದ್​: ಫೆಬ್ರವರಿ 6ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ತಂಡದ ಸದಸ್ಯರು ಅಹ್ಮದಾಬಾದ್​ಗೆ ಆಗಮಿಸಿದ್ದಾರೆ. ಎಲ್ಲಾ ಆಟಗಾರರು ಬಯೋಬಬಲ್​ ಸೇರಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಸ್ಪಿನ್ನರ್ ಯುಜ್ವೇಂದ್ರ​ ಚಹಲ್​ ವಿಮಾನದಲ್ಲಿ ಶಿಖರ್​ ಧವನ್​ ಜೊತೆ ಕುಳಿತಿರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದು, ತಾವು ಅಹ್ಮದಾಬಾದ್​ಗೆ ತೆರಳುತ್ತಿರುವುದಾಗಿ ಬರೆದುಕೊಂಡಿದ್ದಾರೆ. ಈ ಕುರಿತು ಪಿಟಿಐಗೆ ಮಾಹಿತಿ ನೀಡಿರುವ ಬಿಸಿಸಿಐ ಅಧಿಕಾರಿಗಳು "ವಿಂಡೀಸ್ ಸರಣಿಗೆ ಆಗಮಿಸಿರುವ ಭಾರತೀಯ ಆಟಗಾರರು 3 ದಿನಗಳ ಕ್ವಾರಂಟೈನ್​ಗೆ ಒಳಗಾಗಿದ್ದಾರೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ರೋಹಿತ್​ ಸೂಕ್ತ​, ರಹಾನೆ ಉತ್ತಮ.. ಆದ್ರೆ ರಾಹುಲ್​ಗೆ ಟೆಸ್ಟ್​ ನಾಯಕತ್ವದ ಗುಣಗಳಿಲ್ಲ: ಪಾಂಟಿಂಗ್

ಗಾಯದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ ಫಿಟ್​ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೊದಲ ಬಾರಿಗೆ ಭಾರತ ಏಕದಿನ ತಂಡದ ಅಧಿಕೃತ ನಾಯಕನಾಗಿ ಟೀಂಅನ್ನು ಮುನ್ನಡೆಸಲಿದ್ದಾರೆ. ಯುವ ಬೌಲರ್​ ರವಿ ಬಿಷ್ಣೋಯ್​, ಆಲ್​ರೌಂಡರ್​ ದೀಪಕ್ ಹೂಡ ​ಮತ್ತು ಆವೇಶ್ ಖಾನ್ ಈ ಸರಣಿಯಲ್ಲಿ ಮೊದಲ ಬಾರಿಗೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಕ್ರಿಕೆಟ್​ನಿಂದ ದೂರ ಉಳಿದಿರುವ ಸ್ಪಿನ್ನರ್ ಕುಲ್ದೀಪ್ ಯಾದವ್​ ಕೂಡ ಕಮ್​ಬ್ಯಾಕ್ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.