ತಿರುವನಂತಪುರಂ(ಕೇರಳ): ದಕ್ಷಿಣ ಆಫ್ರಿಕ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ಮತ್ತು ಅಭಿಮಾನಿಗಳ ಅದ್ಧೂರಿ ಸ್ವಾಗತದ ನಡುವೆ ಭಾರತ ಕ್ರಿಕೆಟ್ ತಂಡ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಆಗಮಿಸಿದರು.
ಇಲ್ಲಿನ ಗ್ರೀನ್ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಸಂಜೆ 7 ಗಂಟೆಗೆ ಮೊದಲ ಟಿ20 ಪಂದ್ಯ ನಡೆಯಲಿದ್ದು, ದಕ್ಷಿಣ ಆಫ್ರಿಕ ವಿರುದ್ಧ ಭಾರತ ತಂಡ ಕಣಕ್ಕಿಳಿಯಲಿದೆ. ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕ ತಂಡ ಕೂಡ ಭಾನುವಾರ ರಾಜ್ಯ ರಾಜಧಾನಿ ತಲುಪಿದೆ. ಇನ್ನು, ಭಾರತ ತಂಡ ಮಂಗಳವಾರ ಸಂಜೆ 5 ರಿಂದ ರಾತ್ರಿ 8ರವರೆಗೆ ಅಭ್ಯಾಸ ನಡೆಸಿದ್ದು, ಇದಕ್ಕೂ ಮುನ್ನ ಎದುರಾಳಿ ದಕ್ಷಿಣ ಆಫ್ರಿಕ ತಂಡವು ಮಧ್ಯಾಹ್ನ 1.00 ರಿಂದ 4.00 ರವರೆಗೆ ಮೈದಾನದಲ್ಲಿ ಅಭ್ಯಾಸ ನಡೆಸಿದೆ ಎಂದು ಕೆಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಿನ್ನೆ ಸಂಜೆ ಉಭಯ ತಂಡಗಳ ನಾಯಕರು ಮಾಧ್ಯಮದವರನ್ನು ಭೇಟಿ ಮಾಡಿದ್ದರು. ಕ್ರೀಡಾಂಗಣವು 55,000 ಆಸನಗಳ ಸಾಮರ್ಥ್ಯವನ್ನು ಹೊಂದಿದ್ದು, ಈಗಾಗಲೇ ಎಲ್ಲ ಟಿಕೆಟ್ಗಳು ಸೋಲ್ಡ್ಔಟ್ ಆಗಿವೆ ಎಂದು ತಿಳಿದು ಬಂದಿದೆ.