ETV Bharat / sports

ಹರಿಣಗಳ ವಿರುದ್ಧ ಟಿ - 20 ಸರಣಿ: ಜೂ.​ 5ರಂದು ದೆಹಲಿಯಲ್ಲಿ ಒಗ್ಗೂಡಲಿದೆ ಟೀಂ ಇಂಡಿಯಾ - ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಸರಣಿ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೋಸ್ಕರ ಟೀಂ ಇಂಡಿಯಾ ಈಗಾಗಲೇ ಪ್ರಕಟಗೊಂಡಿದ್ದು, ಜೂನ್​ 5ರಂದು ಎಲ್ಲ ಪ್ಲೇಯರ್ಸ್​ ದೆಹಲಿಯಲ್ಲಿ ಒಗ್ಗೂಡಲಿದ್ದಾರೆ.

Indian team T20 Series
Indian team T20 Series
author img

By

Published : May 31, 2022, 3:30 PM IST

ನವದೆಹಲಿ: 2022ರ ಇಂಡಿಯನ್​ ಪ್ರಿಮೀಯರ್ ಲೀಗ್ ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಆಡಲು ಅಣಿಯಾಗಲಿದೆ. ಹೀಗಾಗಿ, ಜೂನ್​​ 5ರಂದು ದೆಹಲಿಗೆ ಎಲ್ಲ ಪ್ಲೇಯರ್ಸ್​ ಆಗಮಿಸಲಿದ್ದಾರೆ. ಇದಕ್ಕೂ ಮುಂಚಿತವಾಗಿ ಜೂನ್​​ 2ರಂದು ಹರಿಣಗಳ ತಂಡ ಭಾರತಕ್ಕೆ ಬರಲಿದೆ.

ಜೂನ್​ 9ರಿಂದ ಉಭಯ ತಂಡಗಳ ನಡುವೆ ಟಿ-20 ಸರಣಿ ಆರಂಭಗೊಳ್ಳಲಿದ್ದು, ಅದಕ್ಕಾಗಿ ಉಭಯ ತಂಡಗಳ ಘೋಷಣೆಯಾಗಿದೆ. ಕೋವಿಡ್​​ ಹಿನ್ನೆಲೆಯಲ್ಲಿ ಎಲ್ಲ ಪ್ಲೇಯರ್ಸ್​ ಪರೀಕ್ಷೆಗೊಳಪಡಲಿದ್ದಾರೆ. ವಿಶೇಷ ಎಂದರೆ ಆಟಗಾರರು ಯಾವುದೇ ರೀತಿಯ ಬಯೋ ಬಬಲ್​ಗೆ ಒಳಪಡುವುದಿಲ್ಲ. ಕ್ರಿಕೆಟ್ ವೀಕ್ಷಣೆ ಮಾಡಲು ಶೇ. 100ರಷ್ಟು ಪ್ರೇಕ್ಷಕರಿಗೆ ಅವಕಾಶ ಸಹ ನೀಡಲಾಗಿದೆ.

ಇದನ್ನೂ ಓದಿ: IPL ಯಶಸ್ಸಿಗೆ ಶ್ರಮಿಸಿದ ಕ್ರೀಡಾಂಗಣದ ಸಿಬ್ಬಂದಿಗೆ ಬಿಸಿಸಿಐ ಭರ್ಜರಿ ಗಿಫ್ಟ್​.. ₹1.25 ಕೋಟಿ ಬಹುಮಾನ ಘೋಷಣೆ

ಜೂನ್ 9ರಂದು ದೆಹಲಿಯಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಜೂನ್ 12 ಕಟಕ್​, ಜೂನ್ 14 ವಿಶಾಖಪಟ್ಟಣಂ, ಜೂನ್​ 17 ರಾಜ್​ಕೋಟ್​ ಹಾಗೂ ಜೂನ್​ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಎರಡು ತಿಂಗಳ ಕಾಲ ಸುದೀರ್ಘ ಐಪಿಎಲ್​​ನಲ್ಲಿ ಭಾಗಿಯಾಗಿರುವ ಕಾರಣ ಟೀಂ ಇಂಡಿಯಾ ಖಾಯಂ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್​ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಹಿರಿಯರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹೀಗಾಗಿ, ತಂಡವನ್ನ ಕೆಎಲ್ ರಾಹುಲ್​ ಮುನ್ನಡೆಸಲಿದ್ದಾರೆ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ನವದೆಹಲಿ: 2022ರ ಇಂಡಿಯನ್​ ಪ್ರಿಮೀಯರ್ ಲೀಗ್ ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಆಡಲು ಅಣಿಯಾಗಲಿದೆ. ಹೀಗಾಗಿ, ಜೂನ್​​ 5ರಂದು ದೆಹಲಿಗೆ ಎಲ್ಲ ಪ್ಲೇಯರ್ಸ್​ ಆಗಮಿಸಲಿದ್ದಾರೆ. ಇದಕ್ಕೂ ಮುಂಚಿತವಾಗಿ ಜೂನ್​​ 2ರಂದು ಹರಿಣಗಳ ತಂಡ ಭಾರತಕ್ಕೆ ಬರಲಿದೆ.

ಜೂನ್​ 9ರಿಂದ ಉಭಯ ತಂಡಗಳ ನಡುವೆ ಟಿ-20 ಸರಣಿ ಆರಂಭಗೊಳ್ಳಲಿದ್ದು, ಅದಕ್ಕಾಗಿ ಉಭಯ ತಂಡಗಳ ಘೋಷಣೆಯಾಗಿದೆ. ಕೋವಿಡ್​​ ಹಿನ್ನೆಲೆಯಲ್ಲಿ ಎಲ್ಲ ಪ್ಲೇಯರ್ಸ್​ ಪರೀಕ್ಷೆಗೊಳಪಡಲಿದ್ದಾರೆ. ವಿಶೇಷ ಎಂದರೆ ಆಟಗಾರರು ಯಾವುದೇ ರೀತಿಯ ಬಯೋ ಬಬಲ್​ಗೆ ಒಳಪಡುವುದಿಲ್ಲ. ಕ್ರಿಕೆಟ್ ವೀಕ್ಷಣೆ ಮಾಡಲು ಶೇ. 100ರಷ್ಟು ಪ್ರೇಕ್ಷಕರಿಗೆ ಅವಕಾಶ ಸಹ ನೀಡಲಾಗಿದೆ.

ಇದನ್ನೂ ಓದಿ: IPL ಯಶಸ್ಸಿಗೆ ಶ್ರಮಿಸಿದ ಕ್ರೀಡಾಂಗಣದ ಸಿಬ್ಬಂದಿಗೆ ಬಿಸಿಸಿಐ ಭರ್ಜರಿ ಗಿಫ್ಟ್​.. ₹1.25 ಕೋಟಿ ಬಹುಮಾನ ಘೋಷಣೆ

ಜೂನ್ 9ರಂದು ದೆಹಲಿಯಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಜೂನ್ 12 ಕಟಕ್​, ಜೂನ್ 14 ವಿಶಾಖಪಟ್ಟಣಂ, ಜೂನ್​ 17 ರಾಜ್​ಕೋಟ್​ ಹಾಗೂ ಜೂನ್​ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಎರಡು ತಿಂಗಳ ಕಾಲ ಸುದೀರ್ಘ ಐಪಿಎಲ್​​ನಲ್ಲಿ ಭಾಗಿಯಾಗಿರುವ ಕಾರಣ ಟೀಂ ಇಂಡಿಯಾ ಖಾಯಂ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್​ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಹಿರಿಯರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹೀಗಾಗಿ, ತಂಡವನ್ನ ಕೆಎಲ್ ರಾಹುಲ್​ ಮುನ್ನಡೆಸಲಿದ್ದಾರೆ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.