ETV Bharat / sports

ಮೈದಾನದಲ್ಲಿದ್ದರೂ ಪತ್ನಿಯ ಯೋಗಕ್ಷೇಮ ವಿಚಾರಿಸಿದ ವಿರಾಟ್ ಕೊಹ್ಲಿ: ವಿಡಿಯೋ - ಅನುಷ್ಕಾ ಶರ್ಮಾ ಲೇಟೆಸ್ಟ್ ನ್ಯೂಸ್

ಮೈದಾನದಲ್ಲಿದ್ದರೂ ಗರ್ಭಿಣಿ ಪತ್ನಿಯ ಬಗ್ಗೆ ಕಾಳಜಿ ತೋರಿದ ವಿರಾಟ್ ಕೊಹ್ಲಿ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Virat Kohli's Adorable Gesture For Anushka Sharma
ಪತ್ನಿಯ ಯೋಗಕ್ಷೇಮ ವಿಚಾರಿಸಿದ ವಿರಾಟ್
author img

By

Published : Oct 29, 2020, 1:32 PM IST

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಮೈದಾನದಿಂದಲೇ ಪತ್ನಿ ಅನುಷ್ಕಾ ಶರ್ಮಾ ಅವರ ಕ್ಷೇಮ ವಿಚಾರಿಸಿದ ವಿಡಿಯೋ ವೈರಲ್ ಆಗಿದೆ.

ಈ ಬಾರಿಯ ಐಪಿಎಲ್ ಪಂದ್ಯ ಯುಎಇನಲ್ಲಿ ನಡೆಯುತ್ತಿರುವ ಕಾರಣ ಪತ್ನಿ ಅನುಷ್ಕಾ ಶರ್ಮಾ ತನ್ನ ಪತಿ ವಿರಾಟ್ ಪ್ರತಿನಿಧಿಸುತ್ತಿರುವ ಆರ್​ಸಿಬಿ ತಂಡವನ್ನು ಚಿಯರ್ ಮಾಡಲು ದುಬೈಗೆ ತೆರಳಿದ್ದಾರೆ. ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಳ್ಳುವ ಅನುಷ್ಕಾ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸುತ್ತಾರೆ.

ಭಾನುವಾರ ದುಬೈನಲ್ಲಿ ನಡೆದ ಪಂದ್ಯದ ವೇಳೆ ಅನುಷ್ಕಾ ಶರ್ಮಾ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನದಲ್ಲಿದ್ದ ವಿರಾಟ್ ಕೊಹ್ಲಿ ಸನ್ನೆಯ ಮೂಲಕವೇ ಊಟ ಆಯ್ತಾ? ಎಂದು ಪತ್ನಿಗೆ ಕೇಳಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ಅನುಷ್ಕಾ, ತಂಬ್ಸ್​​ ಅಪ್ ಸನ್ನೆಯ ಮೂಲಕ ಪತಿಗೆ ಸಂದೇಶ ನೀಡಿದ್ರು. ಗರ್ಭಿಣಿ ಪತ್ನಿಯ ಯೋಗಕ್ಷೇಮ ವಿಚಾರಿಸಿದ ವಿರಾಟ್ ನಡೆ, ನೆಟ್ಟಿಗರ ಮೆಚ್ಚುಗೆಗೆ ಕಾರಣವಾಗಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಆರ್​ಸಿಬಿ ನೀಡಿದ 146 ರನ್​ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಸಿಎಸ್​ಕೆ 18.4 ಓವರ್​ಗಳಲ್ಲಿ ಗೆಲುವಿನ ಗಡಿ ದಾಟುವ ಮೂಲಕ ಸೋಲಿನ ಸರಪಳಿ ಕಳಚಿತು. ಯುವ ಬ್ಯಾಟ್ಸ್​ಮನ್ ರುತುರಾಜ್​ 51 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ ಅಜೇಯ 65 ರನ್​ಗಳಿಸಿ ಗೆಲುವಿನ ರೂವಾರಿಯಾದರು. ​

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಮೈದಾನದಿಂದಲೇ ಪತ್ನಿ ಅನುಷ್ಕಾ ಶರ್ಮಾ ಅವರ ಕ್ಷೇಮ ವಿಚಾರಿಸಿದ ವಿಡಿಯೋ ವೈರಲ್ ಆಗಿದೆ.

ಈ ಬಾರಿಯ ಐಪಿಎಲ್ ಪಂದ್ಯ ಯುಎಇನಲ್ಲಿ ನಡೆಯುತ್ತಿರುವ ಕಾರಣ ಪತ್ನಿ ಅನುಷ್ಕಾ ಶರ್ಮಾ ತನ್ನ ಪತಿ ವಿರಾಟ್ ಪ್ರತಿನಿಧಿಸುತ್ತಿರುವ ಆರ್​ಸಿಬಿ ತಂಡವನ್ನು ಚಿಯರ್ ಮಾಡಲು ದುಬೈಗೆ ತೆರಳಿದ್ದಾರೆ. ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಳ್ಳುವ ಅನುಷ್ಕಾ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸುತ್ತಾರೆ.

ಭಾನುವಾರ ದುಬೈನಲ್ಲಿ ನಡೆದ ಪಂದ್ಯದ ವೇಳೆ ಅನುಷ್ಕಾ ಶರ್ಮಾ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನದಲ್ಲಿದ್ದ ವಿರಾಟ್ ಕೊಹ್ಲಿ ಸನ್ನೆಯ ಮೂಲಕವೇ ಊಟ ಆಯ್ತಾ? ಎಂದು ಪತ್ನಿಗೆ ಕೇಳಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ಅನುಷ್ಕಾ, ತಂಬ್ಸ್​​ ಅಪ್ ಸನ್ನೆಯ ಮೂಲಕ ಪತಿಗೆ ಸಂದೇಶ ನೀಡಿದ್ರು. ಗರ್ಭಿಣಿ ಪತ್ನಿಯ ಯೋಗಕ್ಷೇಮ ವಿಚಾರಿಸಿದ ವಿರಾಟ್ ನಡೆ, ನೆಟ್ಟಿಗರ ಮೆಚ್ಚುಗೆಗೆ ಕಾರಣವಾಗಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಆರ್​ಸಿಬಿ ನೀಡಿದ 146 ರನ್​ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಸಿಎಸ್​ಕೆ 18.4 ಓವರ್​ಗಳಲ್ಲಿ ಗೆಲುವಿನ ಗಡಿ ದಾಟುವ ಮೂಲಕ ಸೋಲಿನ ಸರಪಳಿ ಕಳಚಿತು. ಯುವ ಬ್ಯಾಟ್ಸ್​ಮನ್ ರುತುರಾಜ್​ 51 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ ಅಜೇಯ 65 ರನ್​ಗಳಿಸಿ ಗೆಲುವಿನ ರೂವಾರಿಯಾದರು. ​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.