ETV Bharat / sports

'ಶೀಘ್ರದಲ್ಲೇ ಕೆಲ ಬದಲಾವಣೆ' ಎಂದ ನಿತೀಶ್ ರಾಣಾ: 'ನೀವು, ನಿಮ್ಮನ್ನ ನಂಬಿದರೆ, ಎಲ್ಲವೂ ಸರಿಯಾಗಿ ಸಾಗುತ್ತದೆ' ಎಂದ ಕಾರ್ತಿಕ್​​

ಇಂಡಿಯನ್​ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಹೊರತಾಗಿಯೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೋಸ್ಕರ ಅವಕಾಶ ಪಡೆದುಕೊಳ್ಳುವಲ್ಲಿ ನಿತೀಶ್ ರಾಣಾ ವಿಫಲರಾಗಿದ್ದು, ಬೇಸರದಲ್ಲಿ ಟ್ವೀಟ್ ಮಾಡಿದ್ದಾರೆ.

author img

By

Published : May 23, 2022, 5:14 PM IST

Nitish Rana Tweets After Missing Team India Spot
Nitish Rana Tweets After Missing Team India Spot

ಹೈದರಾಬಾದ್​: ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದ್ದು, ಬರೋಬ್ಬರಿ 3 ವರ್ಷಗಳ ನಂತರ ವಿಕೆಟ್​ ಕೀಪರ್​ ಬ್ಯಾಟರ್​ ದಿನೇಶ್ ಕಾರ್ತಿಕ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಅತ್ಯುತ್ತಮ ಪ್ರದರ್ಶನದ ಹೊರತಾಗಿ ಕೂಡ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದ ಸ್ಟಾರ್ ಬ್ಯಾಟರ್ ನಿತೀಶ್ ರಾಣಾ ಅವಕಾಶ ವಂಚಿತರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ತಮ್ಮ ಆಕ್ರೋಶ ಹೊರಹಾಕಿದ್ದಾರೆ.

  • Things will change soon 🇮🇳🧿

    — Nitish Rana (@NitishRana_27) May 22, 2022 " class="align-text-top noRightClick twitterSection" data=" ">

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಸ್ಟಾರ್ ಬ್ಯಾಟರ್​​ ನಿತೀಶ್ ರಾಣಾ ಅವಕಾಶ ಪಡೆದುಕೊಳ್ಳಲಿದ್ದಾರೆ ಎಂದು ಎಲ್ಲರ ಅಭಿಪ್ರಾಯವಾಗಿತ್ತು. ಆದರೆ, ಅವರಿಗೆ ಬಿಸಿಸಿಐ ಮಣೆ ಹಾಕದೇ ಸ್ಫೋಟಕ ಬ್ಯಾಟರ್ ದಿನೇಶ್ ಕಾರ್ತಿಕ್ ಹಾಗೂ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯಾಗೆ ಅವಕಾಶ ನೀಡಿದೆ. ಹೀಗಾಗಿ, ಮನನೊಂದಿರುವ ರಾಣಾ, ಶೀಘ್ರದಲ್ಲೇ ಕೆಲ ಬದಲಾವಣೆ (Things will change soon) ಎಂದು ಬರೆದುಕೊಂಡಿದ್ದಾರೆ.

ಟೀಂ ಇಂಡಿಯಾ ಪರ ಕಳೆದ ವರ್ಷ ಶ್ರೀಲಂಕಾದಲ್ಲಿ ನಡೆದ ಟಿ-20 ಸರಣಿಯಲ್ಲಿ ಆಡಿದ್ದ ರಾಣಾ ಇದೀಗ ಅವಕಾಶ ವಂಚಿತರಾಗಿದ್ದಾರೆ. ಹೀಗಾಗಿ, ಇದೇ ವರ್ಷ ನಡೆಯಲಿರುವ ಟಿ-20 ವಿಶ್ವಕಪ್​​ನಲ್ಲಿ ಚಾನ್ಸ್​​​ ಪಡೆದುಕೊಳ್ಳುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ, ರಾಣಾ ನಿರಾಸೆಗೊಂಡಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್​​ನಲ್ಲಿ ಕೆಕೆಆರ್ ಪರ ಆಡಿರುವ ನಿತೀಶ್ ರಾಣಾ 14 ಪಂದ್ಯಗಳಿಂದ 361ರನ್​​​ಗಳಿಕೆ ಮಾಡಿದ್ದು, ಕೆಲವೊಂದು ಪಂದ್ಯಗಳಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

'ನೀವು, ನಿಮ್ಮನ್ನ ನಂಬಿದರೆ, ಎಲ್ಲವೂ ಸರಿಯಾಗಿ ಸಾಗುತ್ತದೆ' ಎಂದ ಕಾರ್ತಿಕ್​​: ಬರೋಬ್ಬರಿ 3 ವರ್ಷಗಳ ಬಳಿಕ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್​, ವಿಶೇಷ ರೀತಿಯಲ್ಲಿ ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. 'ನೀವು ನಿಮ್ಮನ್ನ ನಂಬಿದರೆ, ಎಲ್ಲವೂ ಸರಿಯಾಗಿ ನಡೆಯುತ್ತದೆ. ನಿಮ್ಮೆಲ್ಲರ ಪ್ರೀತಿ, ಬೆಂಬಲ ಮತ್ತು ನಂಬಿಕೆಗಳಿಗೆ ಧನ್ಯವಾದಗಳು. ನನ್ನ ಕಠಿಣ ಪರಿಶ್ರಮ ಮುಂದುವರೆಯಲಿದೆ' ಎಂದಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಪರ ಅಬ್ಬರಿಸಲು ತಾವು ಸಿದ್ಧ ಇರುವುದಾಗಿ ಹೇಳಿಕೊಂಡಿದ್ದಾರೆ.

  • If you believe yourself, everything will fall into place! ✨
    Thank you for all the support and belief...the hard work continues... pic.twitter.com/YlnaH9YHW1

    — DK (@DineshKarthik) May 22, 2022 " class="align-text-top noRightClick twitterSection" data=" ">

ಇದನ್ನೂ ಓದಿ: 2ನೇ ಮಗುವಿನ ತಂದೆಯಾದ ಕೇನ್​ ವಿಲಿಯಮ್ಸನ್​​.. ಗಂಡು ಮಗುವಿಗೆ ಜನ್ಮ ನೀಡಿದ ಸಾರಾ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದಿನೇಶ್ ಕಾರ್ತಿಕ್​, ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಬ್ಯಾಟ್​ ಬೀಸುತ್ತಿದ್ದು, ಅನೇಕ ಮಹತ್ವದ ಇನ್ನಿಂಗ್ಸ್​ ಆಡಿದ್ದಾರೆ. ಇದರ ಮಧ್ಯೆ ಆಯ್ಕೆ ಸಮಿತಿ ಗಮನ ಸೆಳೆದು ಮರಳಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ, ಆಯ್ಕೆ ಸಮಿತಿಗೂ ಧನ್ಯವಾದ ತಿಳಿಸಿದ್ದಾರೆ. ಈ ವಿಡಿಯೋ ತುಣುಕವೊಂದನ್ನ ಆರ್​ಸಿಬಿ ತನ್ನ ಟ್ವೀಟರ್ ಅಕೌಂಟ್​ನಲ್ಲಿ ಹಾಕಿಕೊಂಡಿದೆ.

ಹೈದರಾಬಾದ್​: ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದ್ದು, ಬರೋಬ್ಬರಿ 3 ವರ್ಷಗಳ ನಂತರ ವಿಕೆಟ್​ ಕೀಪರ್​ ಬ್ಯಾಟರ್​ ದಿನೇಶ್ ಕಾರ್ತಿಕ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಅತ್ಯುತ್ತಮ ಪ್ರದರ್ಶನದ ಹೊರತಾಗಿ ಕೂಡ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದ ಸ್ಟಾರ್ ಬ್ಯಾಟರ್ ನಿತೀಶ್ ರಾಣಾ ಅವಕಾಶ ವಂಚಿತರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ತಮ್ಮ ಆಕ್ರೋಶ ಹೊರಹಾಕಿದ್ದಾರೆ.

  • Things will change soon 🇮🇳🧿

    — Nitish Rana (@NitishRana_27) May 22, 2022 " class="align-text-top noRightClick twitterSection" data=" ">

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಸ್ಟಾರ್ ಬ್ಯಾಟರ್​​ ನಿತೀಶ್ ರಾಣಾ ಅವಕಾಶ ಪಡೆದುಕೊಳ್ಳಲಿದ್ದಾರೆ ಎಂದು ಎಲ್ಲರ ಅಭಿಪ್ರಾಯವಾಗಿತ್ತು. ಆದರೆ, ಅವರಿಗೆ ಬಿಸಿಸಿಐ ಮಣೆ ಹಾಕದೇ ಸ್ಫೋಟಕ ಬ್ಯಾಟರ್ ದಿನೇಶ್ ಕಾರ್ತಿಕ್ ಹಾಗೂ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯಾಗೆ ಅವಕಾಶ ನೀಡಿದೆ. ಹೀಗಾಗಿ, ಮನನೊಂದಿರುವ ರಾಣಾ, ಶೀಘ್ರದಲ್ಲೇ ಕೆಲ ಬದಲಾವಣೆ (Things will change soon) ಎಂದು ಬರೆದುಕೊಂಡಿದ್ದಾರೆ.

ಟೀಂ ಇಂಡಿಯಾ ಪರ ಕಳೆದ ವರ್ಷ ಶ್ರೀಲಂಕಾದಲ್ಲಿ ನಡೆದ ಟಿ-20 ಸರಣಿಯಲ್ಲಿ ಆಡಿದ್ದ ರಾಣಾ ಇದೀಗ ಅವಕಾಶ ವಂಚಿತರಾಗಿದ್ದಾರೆ. ಹೀಗಾಗಿ, ಇದೇ ವರ್ಷ ನಡೆಯಲಿರುವ ಟಿ-20 ವಿಶ್ವಕಪ್​​ನಲ್ಲಿ ಚಾನ್ಸ್​​​ ಪಡೆದುಕೊಳ್ಳುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ, ರಾಣಾ ನಿರಾಸೆಗೊಂಡಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್​​ನಲ್ಲಿ ಕೆಕೆಆರ್ ಪರ ಆಡಿರುವ ನಿತೀಶ್ ರಾಣಾ 14 ಪಂದ್ಯಗಳಿಂದ 361ರನ್​​​ಗಳಿಕೆ ಮಾಡಿದ್ದು, ಕೆಲವೊಂದು ಪಂದ್ಯಗಳಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

'ನೀವು, ನಿಮ್ಮನ್ನ ನಂಬಿದರೆ, ಎಲ್ಲವೂ ಸರಿಯಾಗಿ ಸಾಗುತ್ತದೆ' ಎಂದ ಕಾರ್ತಿಕ್​​: ಬರೋಬ್ಬರಿ 3 ವರ್ಷಗಳ ಬಳಿಕ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್​, ವಿಶೇಷ ರೀತಿಯಲ್ಲಿ ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. 'ನೀವು ನಿಮ್ಮನ್ನ ನಂಬಿದರೆ, ಎಲ್ಲವೂ ಸರಿಯಾಗಿ ನಡೆಯುತ್ತದೆ. ನಿಮ್ಮೆಲ್ಲರ ಪ್ರೀತಿ, ಬೆಂಬಲ ಮತ್ತು ನಂಬಿಕೆಗಳಿಗೆ ಧನ್ಯವಾದಗಳು. ನನ್ನ ಕಠಿಣ ಪರಿಶ್ರಮ ಮುಂದುವರೆಯಲಿದೆ' ಎಂದಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಪರ ಅಬ್ಬರಿಸಲು ತಾವು ಸಿದ್ಧ ಇರುವುದಾಗಿ ಹೇಳಿಕೊಂಡಿದ್ದಾರೆ.

  • If you believe yourself, everything will fall into place! ✨
    Thank you for all the support and belief...the hard work continues... pic.twitter.com/YlnaH9YHW1

    — DK (@DineshKarthik) May 22, 2022 " class="align-text-top noRightClick twitterSection" data=" ">

ಇದನ್ನೂ ಓದಿ: 2ನೇ ಮಗುವಿನ ತಂದೆಯಾದ ಕೇನ್​ ವಿಲಿಯಮ್ಸನ್​​.. ಗಂಡು ಮಗುವಿಗೆ ಜನ್ಮ ನೀಡಿದ ಸಾರಾ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದಿನೇಶ್ ಕಾರ್ತಿಕ್​, ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಬ್ಯಾಟ್​ ಬೀಸುತ್ತಿದ್ದು, ಅನೇಕ ಮಹತ್ವದ ಇನ್ನಿಂಗ್ಸ್​ ಆಡಿದ್ದಾರೆ. ಇದರ ಮಧ್ಯೆ ಆಯ್ಕೆ ಸಮಿತಿ ಗಮನ ಸೆಳೆದು ಮರಳಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ, ಆಯ್ಕೆ ಸಮಿತಿಗೂ ಧನ್ಯವಾದ ತಿಳಿಸಿದ್ದಾರೆ. ಈ ವಿಡಿಯೋ ತುಣುಕವೊಂದನ್ನ ಆರ್​ಸಿಬಿ ತನ್ನ ಟ್ವೀಟರ್ ಅಕೌಂಟ್​ನಲ್ಲಿ ಹಾಕಿಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.