ETV Bharat / sports

2ನೇ ಟಿ20: ಭಾರತ ವಿರುದ್ಧ ಟಾಸ್​ ಗೆದ್ದ ಐರ್ಲೆಂಡ್​, ಟೀಂ ಇಂಡಿಯಾಗೆ ಸರಣಿ ಗೆಲುವಿನ ಗುರಿ

author img

By

Published : Aug 20, 2023, 7:31 PM IST

Updated : Aug 20, 2023, 10:56 PM IST

ಐರ್ಲೆಂಡ್​ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದೆ. ಪಂದ್ಯಕ್ಕೆ ಮಳೆಯ ಅಡ್ಡಿಯಾಗುವ ಅತಂಕವಿಲ್ಲ.

ಐರ್ಲೆಂಡ್​ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್​ ಆಯ್ಕೆ,
ಐರ್ಲೆಂಡ್​ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್​ ಆಯ್ಕೆ,

ಡಬ್ಲಿನ್​(ಐರ್ಲೆಂಡ್​) : ಡಬ್ಲಿನ್​ನಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ವಿರುದ್ಧ ಐರ್ಲೆಂಡ್ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಉಭಯ ತಂಡಗಳು ಕಣಕ್ಕಿಳಿಸಿವೆ. ಮೊದಲ ಪಂದ್ಯದಲ್ಲಿ ಭಾರತ ಡಕ್ವರ್ಥ್​ ಲೂಯಿಸ್​ ನಿಯಮದ ಅನುಸಾರ 2 ರನ್​ ಗೆಲುವು ಸಾಧಿಸಿತ್ತು.

ವೇಗಿ ಜಸ್ಪ್ರೀತ್​ ಬೂಮ್ರಾ ನೇತೃತ್ವದ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಕೈವಶಕ್ಕೆ ತಂತ್ರ ರೂಪಿಸಿದ್ದರೆ, ಇತ್ತ ಆತಿಥೇಯ ಐರ್ಲೆಂಡ್​ ಕೂಡ ಬಲಿಷ್ಠ ಭಾರತವನ್ನು ಸೋಲಿಸಿ ಸರಣಿ ಸಮಬಲ ಸಾಧಿಸಲು ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ನಾಯಕ ಪಾಲ್​ ಸ್ಟಿರ್ಲಿಂಗ್​ ಬ್ಯಾಟಿಂಗ್​ನಲ್ಲಿ ವಿಫಲವಾಗಿದ್ದರು. ಆರಂಭದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕರ್ಟಿಸ್ ಕ್ಯಾಂಫರ್ ಮತ್ತು ಬ್ಯಾರಿ ಮೆಕಾರ್ಟಿ ಶಕ್ತಿ ತುಂಬಿದ್ದರು.

ಬ್ಯಾರಿ ಮೆಕಾರ್ಟಿ ಭರ್ಜರಿ ಅರ್ಧಶತಕ(51)ಬಾರಿಸಿ ತಂಡವನ್ನು ಆಧರಿಸಿದ್ದರು. ಇನ್ನೊಂದು ತುದಿಯಲ್ಲಿ ಕ್ಯಾಂಪರ್​ 39 ರನ್​ ಮಾಡಿ ನೆರವಾಗಿದ್ದರು. ಬಳಿಕ ಭಾರತದ ಇನಿಂಗ್ಸ್​ ವೇಳೆ ಮಳೆ ಸುರಿದ ಕಾರಣ ಪಂದ್ಯವನ್ನು ರದ್ದು ಮಾಡಲಾಗಿತ್ತು. ಡಕ್ವರ್ಥ್​ ಲೂಯಿಸ್​ ನಿಯಮದ ಪ್ರಕಾರ ಭಾರತ 2 ರನ್​ ಮುಂದಿದ್ದ ಕಾರಣ ಜಯಶಾಲಿ ಎಂದು ಘೋಷಿಸಲಾಗಿತ್ತು.

ಹಿರಿಯರ ಜಾಗದಲ್ಲಿ ಸ್ಥಾನ ಪಡೆದಿರುವ ಯಶಸ್ವಿ ಜೈಸ್ವಾಲ್​, ಋತುರಾಜ್​ ಗಾಯಕ್ವಾಡ್​, ತಿಲಕ್​ ವರ್ಮಾ, ರಿಂಕುಸಿಂಗ್​ ಬ್ಯಾಟಿಂಗ್​ನಲ್ಲಿ ಮಿಂಚಬೇಕಿದೆ. ನಾಯಕ ಬೂಮ್ರಾ ಗಾಯದ ಬಳಿಕ ಭರ್ಜರಿ ಕಮ್​ಬ್ಯಾಕ್​ ಮಾಡಿದ್ದಾರೆ. ಮೊದಲ ಪಂದ್ಯದಲ್ಲೇ 2 ವಿಕೆಟ್​ ಗಳಿಸಿದ್ದರು. ಜೊತೆಗೆ ಪ್ರಸಿದ್ಧ್​ ಕೃಷ್ಣ, ಅರ್ಷದೀಪ್​ ತಮ್ಮ ಕೌಶಲ್ಯ ಪ್ರದರ್ಶಿಸಬೇಕಿದೆ.

ಬೂಮ್ರಾಗೆ ಮೊದಲ ಸರಣಿ ಜಯದ ಕನಸು: ಇನ್ನು ಹಾರ್ದಿಕ್​ ಪಾಂಡ್ಯ ಬದಲಿಗೆ ನಾಯಕರಾಗಿರುವ ವೇಗಿ ಜಸ್ಪ್ರೀತ್​ ಬೂಮ್ರಾ ಮೊದಲ ಸರಣಿ ಜಯದ ಕನಸು ಹೊಂದಿದ್ದಾರೆ. ಬೂಮ್ರಾ ಭಾರತ ಟಿ20 ತಂಡದ 11ನೇ ಕ್ಯಾಪ್ಟನ್​ ಆಗಿದ್ದಾರೆ.

ತಂಡಗಳು ಇಂತಿವೆ- ಐರ್ಲೆಂಡ್: ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್(ನಾಯಕ), ಲೋರ್ಕನ್ ಟಕರ್(ವಿಕೆಟ್​ ಕೀಪರ್​), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಟಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

ಭಾರತ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೆಟ್​ ಕೀಪರ್​), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬೂಮ್ರಾ(ನಾಯಕ), ರವಿ ಬಿಷ್ಣೋಯ್.

ಇದನ್ನೂ ಓದಿ: ಮಹಾರಾಜ ಟ್ರೋಫಿ: ಶಿವಮೊಗ್ಗ ಲಯನ್ಸ್ ಮಣಿಸಿ ಸತತ 5ನೇ ಗೆಲುವು ದಾಖಲಿಸಿದ ಹುಬ್ಬಳ್ಳಿ ಟೈಗರ್ಸ್

ಡಬ್ಲಿನ್​(ಐರ್ಲೆಂಡ್​) : ಡಬ್ಲಿನ್​ನಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ವಿರುದ್ಧ ಐರ್ಲೆಂಡ್ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಉಭಯ ತಂಡಗಳು ಕಣಕ್ಕಿಳಿಸಿವೆ. ಮೊದಲ ಪಂದ್ಯದಲ್ಲಿ ಭಾರತ ಡಕ್ವರ್ಥ್​ ಲೂಯಿಸ್​ ನಿಯಮದ ಅನುಸಾರ 2 ರನ್​ ಗೆಲುವು ಸಾಧಿಸಿತ್ತು.

ವೇಗಿ ಜಸ್ಪ್ರೀತ್​ ಬೂಮ್ರಾ ನೇತೃತ್ವದ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಕೈವಶಕ್ಕೆ ತಂತ್ರ ರೂಪಿಸಿದ್ದರೆ, ಇತ್ತ ಆತಿಥೇಯ ಐರ್ಲೆಂಡ್​ ಕೂಡ ಬಲಿಷ್ಠ ಭಾರತವನ್ನು ಸೋಲಿಸಿ ಸರಣಿ ಸಮಬಲ ಸಾಧಿಸಲು ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ನಾಯಕ ಪಾಲ್​ ಸ್ಟಿರ್ಲಿಂಗ್​ ಬ್ಯಾಟಿಂಗ್​ನಲ್ಲಿ ವಿಫಲವಾಗಿದ್ದರು. ಆರಂಭದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕರ್ಟಿಸ್ ಕ್ಯಾಂಫರ್ ಮತ್ತು ಬ್ಯಾರಿ ಮೆಕಾರ್ಟಿ ಶಕ್ತಿ ತುಂಬಿದ್ದರು.

ಬ್ಯಾರಿ ಮೆಕಾರ್ಟಿ ಭರ್ಜರಿ ಅರ್ಧಶತಕ(51)ಬಾರಿಸಿ ತಂಡವನ್ನು ಆಧರಿಸಿದ್ದರು. ಇನ್ನೊಂದು ತುದಿಯಲ್ಲಿ ಕ್ಯಾಂಪರ್​ 39 ರನ್​ ಮಾಡಿ ನೆರವಾಗಿದ್ದರು. ಬಳಿಕ ಭಾರತದ ಇನಿಂಗ್ಸ್​ ವೇಳೆ ಮಳೆ ಸುರಿದ ಕಾರಣ ಪಂದ್ಯವನ್ನು ರದ್ದು ಮಾಡಲಾಗಿತ್ತು. ಡಕ್ವರ್ಥ್​ ಲೂಯಿಸ್​ ನಿಯಮದ ಪ್ರಕಾರ ಭಾರತ 2 ರನ್​ ಮುಂದಿದ್ದ ಕಾರಣ ಜಯಶಾಲಿ ಎಂದು ಘೋಷಿಸಲಾಗಿತ್ತು.

ಹಿರಿಯರ ಜಾಗದಲ್ಲಿ ಸ್ಥಾನ ಪಡೆದಿರುವ ಯಶಸ್ವಿ ಜೈಸ್ವಾಲ್​, ಋತುರಾಜ್​ ಗಾಯಕ್ವಾಡ್​, ತಿಲಕ್​ ವರ್ಮಾ, ರಿಂಕುಸಿಂಗ್​ ಬ್ಯಾಟಿಂಗ್​ನಲ್ಲಿ ಮಿಂಚಬೇಕಿದೆ. ನಾಯಕ ಬೂಮ್ರಾ ಗಾಯದ ಬಳಿಕ ಭರ್ಜರಿ ಕಮ್​ಬ್ಯಾಕ್​ ಮಾಡಿದ್ದಾರೆ. ಮೊದಲ ಪಂದ್ಯದಲ್ಲೇ 2 ವಿಕೆಟ್​ ಗಳಿಸಿದ್ದರು. ಜೊತೆಗೆ ಪ್ರಸಿದ್ಧ್​ ಕೃಷ್ಣ, ಅರ್ಷದೀಪ್​ ತಮ್ಮ ಕೌಶಲ್ಯ ಪ್ರದರ್ಶಿಸಬೇಕಿದೆ.

ಬೂಮ್ರಾಗೆ ಮೊದಲ ಸರಣಿ ಜಯದ ಕನಸು: ಇನ್ನು ಹಾರ್ದಿಕ್​ ಪಾಂಡ್ಯ ಬದಲಿಗೆ ನಾಯಕರಾಗಿರುವ ವೇಗಿ ಜಸ್ಪ್ರೀತ್​ ಬೂಮ್ರಾ ಮೊದಲ ಸರಣಿ ಜಯದ ಕನಸು ಹೊಂದಿದ್ದಾರೆ. ಬೂಮ್ರಾ ಭಾರತ ಟಿ20 ತಂಡದ 11ನೇ ಕ್ಯಾಪ್ಟನ್​ ಆಗಿದ್ದಾರೆ.

ತಂಡಗಳು ಇಂತಿವೆ- ಐರ್ಲೆಂಡ್: ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್(ನಾಯಕ), ಲೋರ್ಕನ್ ಟಕರ್(ವಿಕೆಟ್​ ಕೀಪರ್​), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಟಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

ಭಾರತ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೆಟ್​ ಕೀಪರ್​), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬೂಮ್ರಾ(ನಾಯಕ), ರವಿ ಬಿಷ್ಣೋಯ್.

ಇದನ್ನೂ ಓದಿ: ಮಹಾರಾಜ ಟ್ರೋಫಿ: ಶಿವಮೊಗ್ಗ ಲಯನ್ಸ್ ಮಣಿಸಿ ಸತತ 5ನೇ ಗೆಲುವು ದಾಖಲಿಸಿದ ಹುಬ್ಬಳ್ಳಿ ಟೈಗರ್ಸ್

Last Updated : Aug 20, 2023, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.