ETV Bharat / sports

ENG vs IND 4th Test : ಭಾರತ ಟೆಸ್ಟ್​ ತಂಡಕ್ಕೆ ಕನ್ನಡಿಗ ಪ್ರಸಿಧ್ ಕೃಷ್ಣ ಆಯ್ಕೆ - India tour of England

ಟೀಮ್ ಮ್ಯಾನೇಜ್​ಮೆಂಟ್​ ಮನವಿ ಮೇರೆಗೆ ಭಾರತ ಆಯ್ಕೆ ಸಮಿತಿ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.

Karnataka speedster Prasidh Krishna added to main Test squad
ಭಾರತ ಟೆಸ್ಟ್​ ತಂಡಕ್ಕೆ ಕನ್ನಡಿಗ ಪ್ರಸಿಧ್ ಕೃಷ್ಣ ಆಯ್ಕೆ
author img

By

Published : Sep 1, 2021, 3:45 PM IST

ಲಂಡನ್: ಇಂಗ್ಲೆಂಡ್ ವಿರುದ್ಧ ಓವಲ್​ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕರ್ನಾಟಕದ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ ಎಂದು ಬಿಸಿಸಿಐ ಬುಧವಾರ ಖಚಿತಪಡಿಸಿದೆ.

ಗುರುವಾರದಿಂದ ಓವಲ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್​ ನಡುವೆ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಎರಡು ತಂಡಗಳು ತಲಾ ಒಂದು ಟೆಸ್ಟ್​ ಪಂದ್ಯ ಗೆದ್ದು 1-1ರಲ್ಲಿ ಸರಣಿ ಸಮಬಲ ಸಾಧಿಸಿವೆ.

ಟೀಮ್ ಮ್ಯಾನೇಜ್​ಮೆಂಟ್​ ಮನವಿ ಮೇರೆಗೆ ಭಾರತದ ಆಯ್ಕೆ ಸಮಿತಿ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಸಿಧ್ ಹೆಚ್ಚುವರಿ ಬೌಲರ್​ ಆಗಿ ಟೀಮ್ ಇಂಡಿಯಾ ಜೊತೆ ಇಂಗ್ಲೆಂಡ್​ಗೆ ಪ್ರವಾಸ ಬೆಳೆಸಿದ್ದರು. ಇದೀಗ ನಾಲ್ಕನೇ ಟೆಸ್ಟ್​ಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಕೃಷ್ಣ ಮಾರ್ಚ್​ 23, 2021ರಲ್ಲಿ ಇಂಗ್ಲೆಂಡ್​ ವಿರುದ್ಧ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಅವರು ಭಾರತದ ಪರ 3 ಏಕದಿನ ಪಂದ್ಯಗಳಿಂದ 6 ವಿಕೆಟ್ ಪಡೆದಿದ್ದಾರೆ. 9 ಪ್ರಥಮ ದರ್ಜೆ ಪಂದ್ಯಗಳಿಂದ 34 ವಿಕೆಟ್​ ಪಡೆದಿದ್ದಾರೆ.

ನಾಲ್ಕನೇ ಟೆಸ್ಟ್​ಗೆ ಭಾರತ ತಂಡ:

ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಪ್ರಸಿದ್ ಕೃಷ್ಣ

ಸ್ಟ್ಯಾಂಡ್‌ಬೈ ಪ್ಲೇಯರ್: ಅರ್ಜಾನ್ ನಾಗ್ವಾಸ್ವಾಲಾ

ಇದನ್ನು ಓದಿ:ICC Test Rankings: ಕೊಹ್ಲಿ ಹಿಂದಿಕ್ಕಿದ ರೋಹಿತ್, 6 ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ ರೂಟ್​

ಲಂಡನ್: ಇಂಗ್ಲೆಂಡ್ ವಿರುದ್ಧ ಓವಲ್​ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕರ್ನಾಟಕದ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ ಎಂದು ಬಿಸಿಸಿಐ ಬುಧವಾರ ಖಚಿತಪಡಿಸಿದೆ.

ಗುರುವಾರದಿಂದ ಓವಲ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್​ ನಡುವೆ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಎರಡು ತಂಡಗಳು ತಲಾ ಒಂದು ಟೆಸ್ಟ್​ ಪಂದ್ಯ ಗೆದ್ದು 1-1ರಲ್ಲಿ ಸರಣಿ ಸಮಬಲ ಸಾಧಿಸಿವೆ.

ಟೀಮ್ ಮ್ಯಾನೇಜ್​ಮೆಂಟ್​ ಮನವಿ ಮೇರೆಗೆ ಭಾರತದ ಆಯ್ಕೆ ಸಮಿತಿ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಸಿಧ್ ಹೆಚ್ಚುವರಿ ಬೌಲರ್​ ಆಗಿ ಟೀಮ್ ಇಂಡಿಯಾ ಜೊತೆ ಇಂಗ್ಲೆಂಡ್​ಗೆ ಪ್ರವಾಸ ಬೆಳೆಸಿದ್ದರು. ಇದೀಗ ನಾಲ್ಕನೇ ಟೆಸ್ಟ್​ಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಕೃಷ್ಣ ಮಾರ್ಚ್​ 23, 2021ರಲ್ಲಿ ಇಂಗ್ಲೆಂಡ್​ ವಿರುದ್ಧ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಅವರು ಭಾರತದ ಪರ 3 ಏಕದಿನ ಪಂದ್ಯಗಳಿಂದ 6 ವಿಕೆಟ್ ಪಡೆದಿದ್ದಾರೆ. 9 ಪ್ರಥಮ ದರ್ಜೆ ಪಂದ್ಯಗಳಿಂದ 34 ವಿಕೆಟ್​ ಪಡೆದಿದ್ದಾರೆ.

ನಾಲ್ಕನೇ ಟೆಸ್ಟ್​ಗೆ ಭಾರತ ತಂಡ:

ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಪ್ರಸಿದ್ ಕೃಷ್ಣ

ಸ್ಟ್ಯಾಂಡ್‌ಬೈ ಪ್ಲೇಯರ್: ಅರ್ಜಾನ್ ನಾಗ್ವಾಸ್ವಾಲಾ

ಇದನ್ನು ಓದಿ:ICC Test Rankings: ಕೊಹ್ಲಿ ಹಿಂದಿಕ್ಕಿದ ರೋಹಿತ್, 6 ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ ರೂಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.