ETV Bharat / sports

ಭಾರತ - ಪಾಕಿಸ್ತಾನ ದ್ವಿಪಕ್ಷೀಯ ಪಂದ್ಯಗಳನ್ನ ಪುನಾರಂಭಿಸುವಂತೆ ಪಾಕ್​ ಮನವಿ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ - India vs pakistan

ಏಷ್ಯಾಕಪ್​ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಕಿಸ್ತಾನಕ್ಕೆ ತೆರಳಿದ್ದರು.

Roger Binny
Roger Binny
author img

By ETV Bharat Karnataka Team

Published : Sep 6, 2023, 6:06 PM IST

ಅಮೃತಸರ (ಪಂಜಾಬ್): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ನಂತರ ಅಮೃತಸರದ ಅಟ್ಟಾರಿ - ವಾಘಾ ಗಡಿಗೆ ಇಂದು (ಬುಧವಾರ) ಆಗಮಿಸಿದರು. ಲಾಹೋರ್‌ನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಪಂದ್ಯಗಳಿಗೆ ಹಾಜರಾಗಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಏಷ್ಯನ್ ಕ್ರಿಕೆಟ್ ಮಂಡಳಿ (ಎಸಿಸಿ) ಮತ್ತು ಇತರ ಕ್ರಿಕೆಟ್ ಮಂಡಳಿಗಳ ಸದಸ್ಯರಿಗೆ ಆಹ್ವಾನ ನೀಡಿದ ನಂತರ ಬಿನ್ನಿ ಮತ್ತು ಶುಕ್ಲಾ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿ ನಡೆದ ಭೋಜನಕೂಟದಲ್ಲಿ ಅವರು ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳ ಆಟಗಾರರನ್ನು ಭೇಟಿಯಾದರು.

ಪ್ರವಾಸದ ಬಗ್ಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ್ಯ ಬಿನ್ನಿ,"ನಾವು ಪಾಕಿಸ್ತಾನದಲ್ಲಿ ಬಹಳ ಒಳ್ಳೆಯ ಸಭೆಯನ್ನು ನಡೆಸಿದ್ದೇವೆ. ನಾವು ಉತ್ತಮ ಆತಿಥ್ಯವನ್ನು ಸ್ವೀಕರಿಸಿದ್ದೇವೆ. ಅವರು ನಮ್ಮನ್ನು ಚೆನ್ನಾಗಿ ನೋಡಿಕೊಂಡರು. ಮುಖ್ಯ ಅಜೆಂಡಾ ಕ್ರಿಕೆಟ್ ನೋಡುವುದು ಮತ್ತು ಅವರೊಂದಿಗೆ ಕುಳಿತು ವಿಷಯಗಳನ್ನು ಚರ್ಚಿಸುವುದು. ಒಟ್ಟಾರೆ, ಇದು ತುಂಬಾ ಒಳ್ಳೆಯ ಪ್ರವಾಸವಾಗಿತ್ತು. ಪಾಕಿಸ್ತಾನ ನಮ್ಮನ್ನು ಚೆನ್ನಾಗಿ ನಡೆಸಿಕೊಂಡಿತು" ಎಂದು ತಿಳಿಸಿದರು.

"ಇದು ಎರಡು ದಿನಗಳ ಭೇಟಿ ಮತ್ತು ಉತ್ತಮ ಭೇಟಿಯಾಗಿದೆ. ರಾಜ್ಯಪಾಲರು ನಮ್ಮ ಗೌರವಾರ್ಥ ಔತಣಕೂಟವನ್ನು ಏರ್ಪಡಿಸಿದರು. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆತಿಥ್ಯವೂ ಚೆನ್ನಾಗಿತ್ತು. ಉಭಯ ದೇಶಗಳ ನಡುವಿನ ಕ್ರಿಕೆಟ್ ಅನ್ನು ಪುನರಾರಂಭಿಸಬೇಕು ಎಂಬುದು ಅವರ ಬೇಡಿಕೆಯಾಗಿತ್ತು, ನಾವು ಇದನ್ನು ಸರ್ಕಾರದ ಮುಂದಿಡುತ್ತೇವೆ ಮತ್ತು ನಮ್ಮ ಸರ್ಕಾರ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಇದು ಕ್ರಿಕೆಟ್ ಭೇಟಿ ಮತ್ತು ಯಾವುದೇ ರಾಜಕೀಯ ಅಜೆಂಡಾ ಇರಲಿಲ್ಲ" ಎಂದು ಶುಕ್ಲಾ ಹೇಳಿದರು.

ಎರಡೂ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧಗಳನ್ನು ಸ್ಥಗಿತಗೊಳಿಸಿರುವುದರಿಂದ ಎರಡೂ ದೇಶಗಳು ಐಸಿಸಿ ಅಥವಾ ಎಸಿಸಿ ಈವೆಂಟ್‌ಗಳಲ್ಲಿ ಮಾತ್ರ ಪರಸ್ಪರ ಸ್ಪರ್ಧಿಸುತ್ತವೆ. 2008ರಲ್ಲಿ ಏಷ್ಯಾಕಪ್‌ಗಾಗಿ ಭಾರತ ತಂಡವೊಂದು ಕೊನೆಯ ಬಾರಿ ಪಾಕಿಸ್ತಾನಕ್ಕೆ ತೆರಳಿತ್ತು. ಪಾಕಿಸ್ತಾನ ಕೊನೆಯದಾಗಿ 2006 ರಲ್ಲಿ ದ್ವಿಪಕ್ಷೀಯ ಸರಣಿಗಾಗಿ ಭಾರತಕ್ಕೆ ಬಂದಿತ್ತು. ಪಾಕಿಸ್ತಾನವು ಕೊನೆಯದಾಗಿ 2012 ರಲ್ಲಿ ವೈಟ್-ಬಾಲ್ ಪ್ರವಾಸಕ್ಕಾಗಿ ಭಾರತಕ್ಕೆ ಭೇಟಿ ನೀಡಿತ್ತು.

ಏಷ್ಯಾಕಪ್​ನ​ ಗುಂಪು ಹಂತದಲ್ಲಿ ಭಾರತ - ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಗಿ ನಿರಾಸೆ ಉಂಟು ಮಾಡಿತ್ತು. ಸೆಪ್ಟೆಂಬರ್​ 10 ರಂದು ಎರಡನೇ ಬಾರಿಗೆ ಏಷ್ಯಾಕಪ್​ನಲ್ಲಿ ಮುಖಾಮುಖಿ ಆಗಲಿದೆ. ಈ ಎರಡು ತಂಡಗಳು ಟಾಪ್​ ಟು ತಂಡಗಳಾಗಿ ಹೊರಹೊಮ್ಮಿದಲ್ಲಿ ಫೈನಲ್​ನಲ್ಲೂ ಮುಖಾಮುಖಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ವಿಶ್ವಕಪ್​ಗೆ ಆಸ್ಟ್ರೇಲಿಯಾ​ ತಂಡ ಪ್ರಕಟ: ಗಾಯಾಳು ನಾಯಕ ಪ್ಯಾಟ್​ ಕಮ್ಮಿನ್ಸ್​, ಮ್ಯಾಕ್ಸಿ, ಸ್ಟಾರ್ಕ್​, ಸ್ಮಿತ್​ಗೂ ಸ್ಥಾನ

ಅಮೃತಸರ (ಪಂಜಾಬ್): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ನಂತರ ಅಮೃತಸರದ ಅಟ್ಟಾರಿ - ವಾಘಾ ಗಡಿಗೆ ಇಂದು (ಬುಧವಾರ) ಆಗಮಿಸಿದರು. ಲಾಹೋರ್‌ನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಪಂದ್ಯಗಳಿಗೆ ಹಾಜರಾಗಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಏಷ್ಯನ್ ಕ್ರಿಕೆಟ್ ಮಂಡಳಿ (ಎಸಿಸಿ) ಮತ್ತು ಇತರ ಕ್ರಿಕೆಟ್ ಮಂಡಳಿಗಳ ಸದಸ್ಯರಿಗೆ ಆಹ್ವಾನ ನೀಡಿದ ನಂತರ ಬಿನ್ನಿ ಮತ್ತು ಶುಕ್ಲಾ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿ ನಡೆದ ಭೋಜನಕೂಟದಲ್ಲಿ ಅವರು ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳ ಆಟಗಾರರನ್ನು ಭೇಟಿಯಾದರು.

ಪ್ರವಾಸದ ಬಗ್ಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ್ಯ ಬಿನ್ನಿ,"ನಾವು ಪಾಕಿಸ್ತಾನದಲ್ಲಿ ಬಹಳ ಒಳ್ಳೆಯ ಸಭೆಯನ್ನು ನಡೆಸಿದ್ದೇವೆ. ನಾವು ಉತ್ತಮ ಆತಿಥ್ಯವನ್ನು ಸ್ವೀಕರಿಸಿದ್ದೇವೆ. ಅವರು ನಮ್ಮನ್ನು ಚೆನ್ನಾಗಿ ನೋಡಿಕೊಂಡರು. ಮುಖ್ಯ ಅಜೆಂಡಾ ಕ್ರಿಕೆಟ್ ನೋಡುವುದು ಮತ್ತು ಅವರೊಂದಿಗೆ ಕುಳಿತು ವಿಷಯಗಳನ್ನು ಚರ್ಚಿಸುವುದು. ಒಟ್ಟಾರೆ, ಇದು ತುಂಬಾ ಒಳ್ಳೆಯ ಪ್ರವಾಸವಾಗಿತ್ತು. ಪಾಕಿಸ್ತಾನ ನಮ್ಮನ್ನು ಚೆನ್ನಾಗಿ ನಡೆಸಿಕೊಂಡಿತು" ಎಂದು ತಿಳಿಸಿದರು.

"ಇದು ಎರಡು ದಿನಗಳ ಭೇಟಿ ಮತ್ತು ಉತ್ತಮ ಭೇಟಿಯಾಗಿದೆ. ರಾಜ್ಯಪಾಲರು ನಮ್ಮ ಗೌರವಾರ್ಥ ಔತಣಕೂಟವನ್ನು ಏರ್ಪಡಿಸಿದರು. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆತಿಥ್ಯವೂ ಚೆನ್ನಾಗಿತ್ತು. ಉಭಯ ದೇಶಗಳ ನಡುವಿನ ಕ್ರಿಕೆಟ್ ಅನ್ನು ಪುನರಾರಂಭಿಸಬೇಕು ಎಂಬುದು ಅವರ ಬೇಡಿಕೆಯಾಗಿತ್ತು, ನಾವು ಇದನ್ನು ಸರ್ಕಾರದ ಮುಂದಿಡುತ್ತೇವೆ ಮತ್ತು ನಮ್ಮ ಸರ್ಕಾರ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಇದು ಕ್ರಿಕೆಟ್ ಭೇಟಿ ಮತ್ತು ಯಾವುದೇ ರಾಜಕೀಯ ಅಜೆಂಡಾ ಇರಲಿಲ್ಲ" ಎಂದು ಶುಕ್ಲಾ ಹೇಳಿದರು.

ಎರಡೂ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧಗಳನ್ನು ಸ್ಥಗಿತಗೊಳಿಸಿರುವುದರಿಂದ ಎರಡೂ ದೇಶಗಳು ಐಸಿಸಿ ಅಥವಾ ಎಸಿಸಿ ಈವೆಂಟ್‌ಗಳಲ್ಲಿ ಮಾತ್ರ ಪರಸ್ಪರ ಸ್ಪರ್ಧಿಸುತ್ತವೆ. 2008ರಲ್ಲಿ ಏಷ್ಯಾಕಪ್‌ಗಾಗಿ ಭಾರತ ತಂಡವೊಂದು ಕೊನೆಯ ಬಾರಿ ಪಾಕಿಸ್ತಾನಕ್ಕೆ ತೆರಳಿತ್ತು. ಪಾಕಿಸ್ತಾನ ಕೊನೆಯದಾಗಿ 2006 ರಲ್ಲಿ ದ್ವಿಪಕ್ಷೀಯ ಸರಣಿಗಾಗಿ ಭಾರತಕ್ಕೆ ಬಂದಿತ್ತು. ಪಾಕಿಸ್ತಾನವು ಕೊನೆಯದಾಗಿ 2012 ರಲ್ಲಿ ವೈಟ್-ಬಾಲ್ ಪ್ರವಾಸಕ್ಕಾಗಿ ಭಾರತಕ್ಕೆ ಭೇಟಿ ನೀಡಿತ್ತು.

ಏಷ್ಯಾಕಪ್​ನ​ ಗುಂಪು ಹಂತದಲ್ಲಿ ಭಾರತ - ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಗಿ ನಿರಾಸೆ ಉಂಟು ಮಾಡಿತ್ತು. ಸೆಪ್ಟೆಂಬರ್​ 10 ರಂದು ಎರಡನೇ ಬಾರಿಗೆ ಏಷ್ಯಾಕಪ್​ನಲ್ಲಿ ಮುಖಾಮುಖಿ ಆಗಲಿದೆ. ಈ ಎರಡು ತಂಡಗಳು ಟಾಪ್​ ಟು ತಂಡಗಳಾಗಿ ಹೊರಹೊಮ್ಮಿದಲ್ಲಿ ಫೈನಲ್​ನಲ್ಲೂ ಮುಖಾಮುಖಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ವಿಶ್ವಕಪ್​ಗೆ ಆಸ್ಟ್ರೇಲಿಯಾ​ ತಂಡ ಪ್ರಕಟ: ಗಾಯಾಳು ನಾಯಕ ಪ್ಯಾಟ್​ ಕಮ್ಮಿನ್ಸ್​, ಮ್ಯಾಕ್ಸಿ, ಸ್ಟಾರ್ಕ್​, ಸ್ಮಿತ್​ಗೂ ಸ್ಥಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.