ETV Bharat / sports

BAN vs IND 2nd ODI: ನಾಳೆ ಬಾಂಗ್ಲಾ ವಿರುದ್ಧ ರೋಹಿತ್​ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯ

author img

By

Published : Dec 6, 2022, 9:41 PM IST

Updated : Dec 6, 2022, 10:30 PM IST

ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್​, ಬೌಲಿಂಗ್ ಮತ್ತು ಫೀಲ್ಡಿಂಗ್​ ಮೂರೂ ವಿಭಾಗದಲ್ಲಿ ನಿರಾಶಾದಾಯಕ ಪ್ರದರ್ಶನದಿಂದಾಗಿ ರೋಹಿತ್​ ಶರ್ಮಾ ನೇತೃತ್ವದ ಟೀಂ ಇಂಡಿಯಾ ಸೋಲು ಕಂಡಿತ್ತು.

preview-big-guns-face-heat-as-india-meet-bangladesh-in-must-win-2nd-odi
BAN vs IND 2nd ODI: ರೋಹಿತ್​ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯ

ಮೀರ್‌ಪುರ (ಬಾಂಗ್ಲಾದೇಶ): ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಬುಧವಾರ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾ ಒಂದು ವಿಕೆಟ್‌ನಿಂದ ರೋಚಕ ಗೆಲುವು ದಾಖಲಿಸಿ ಸರಣಿಯಲ್ಲಿ 1-0ಯ ಅಂತರದ ಮುನ್ನಡೆ ಸಾಧಿಸಿದೆ. ಬಾಂಗ್ಲಾ ಗೆಲುವಿಗೆ 50ಕ್ಕೂ ಹೆಚ್ಚು ರನ್‌ಗಳು ಅಗತ್ಯವಿದ್ದಾಗ ಕೊನೆಯ ವಿಕೆಟ್‌ ಪಡೆಯುವಲ್ಲಿ ವಿಫಲವಾದ ಟೀಂ ಇಂಡಿಯಾ ಗೆಲುವು ಬಿಟ್ಟು ಕೊಟ್ಟು ಸೋತು ಮುಖಭಂಗ ಅನುಭವಿಸಿತು. ಇದಕ್ಕೂ ಮುನ್ನ, ಭಾರತದ ಸ್ಟಾರ್​ ಆಟಗಾರರ ದಂಡು ಕೂಡ ಜವಾಬ್ದಾರಿಯುತ ಆಟ ಪ್ರದರ್ಶಿಸುವಲ್ಲಿ ವಿಫಲವಾಯಿತು.

ಬ್ಯಾಟಿಂಗ್​, ಬೌಲಿಂಗ್ ಮತ್ತು ಫೀಲ್ಡಿಂಗ್​ ಮೂರೂ ವಿಭಾಗಗಳಲ್ಲಿ ತೋರಿದ ನಿರಾಶಾದಾಯಕ ಪ್ರದರ್ಶನವೇ ರೋಹಿತ್​ ಶರ್ಮಾ ಪಡೆ ಹಿನ್ನಡೆ ಅನುಭವಿಸಲು ಕಾರಣವಾಗಿತ್ತು. 2015ರಲ್ಲಿ ನಡೆದ ಬಾಂಗ್ಲಾ ವಿರುದ್ಧದ ಸರಣಿಯಲ್ಲೂ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡ 1-2 ರಿಂದ ಅಂತರದಿಂದ ಸೋಲು ಕಂಡಿತ್ತು. ಕೊನೆಯ ಪಂದ್ಯದಲ್ಲಿ ಮಾತ್ರ ಟೀಂ ಇಂಡಿಯಾ ಗೆದ್ದು ನಿಟ್ಟುಸಿರುಬಿಟ್ಟಿತ್ತು.

ಈ ಸರಣಿಯ ಎರಡನೇ ಪಂದ್ಯದಲ್ಲಿಯೂ ಬಾಂಗ್ಲಾ ಸ್ಪಿನ್ನರ್‌ಗಳಾದ ಶಕೀಬ್ ಅಲ್ ಹಸನ್ ಮತ್ತು ಮೆಹದಿ ಹಸನ್ ಮಿರಾಜ್ ಮತ್ತೊಮ್ಮೆ ಭಾರತೀಯ ಬ್ಯಾಟರ್‌ಗಳನ್ನು 11-40 ಓವರ್‌ಗಳಲ್ಲೇ ಕಟ್ಟಿ ಹಾಕಿದರೆ ಇತಿಹಾಸ ಪುನರಾವರ್ತನೆ ಆಗುವ ಭೀತಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್‌ಗೆ ಇನ್ನು ಕೇವಲ 10 ತಿಂಗಳು ಮಾತ್ರ ಬಾಕಿಯಿದ್ದು ತಂಡ ಎಚ್ಚೆತ್ತುಕೊಳ್ಳಲೇಬೇಕಿದೆ.

ಭಾರತೀಯ ಆಟಗಾರರ ಭಯದ ಆಟದ ಶೈಲಿಯ ಬಗ್ಗೆ ಕೆಲ ದಿನಗಳಿಂದಲೂ ಟೀಕೆ-ಟಿಪ್ಪಣಿಗಳು ಕೇಳಿ ಬರುತ್ತಲೇ ಇದೆ. ಪರಿಸ್ಥಿತಿಗೆ ತಕ್ಕಂತೆ ಆಟ ಪ್ರದರ್ಶಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಈ ಸರಣಿಯಲ್ಲಿ ಶುಭಮನ್ ಗಿಲ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರಿಗೂ ವಿಶ್ರಾಂತಿ ನೀಡುವ ಹಿಂದಿನ ಆಯ್ಕೆ ಸಮಿತಿಯ ನಿರ್ಧಾರವೂ ಕೂಡಾ ಟೀಕೆಗೊಳಪಟ್ಟಿದೆ.

ಇದನ್ನೂ ಓದಿ: ನಿಧಾನಗತಿಯ ಓವರ್ ಮಾಡಿದ್ದಕ್ಕೆ ಟೀಂ ಇಂಡಿಯಾಗೆ ಭಾರಿ ದಂಡ ವಿಧಿಸಿದ ಐಸಿಸಿ

ತಂಡದ ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಚೇತನ್ ಶರ್ಮಾ ಈ ಹಿಂದೆ ನೀಡಿದ್ದ ಹೇಳಿಕೆ ಕೂಡಾ ವಿಚಿತ್ರ ಎನ್ನದೇ ವಿಧಿಯಿಲ್ಲ. ನ್ಯೂಜಿಲೆಂಡ್‌ ಪ್ರವಾಸದಿಂದಾಗಿ ಬಾಂಗ್ಲಾ ಸರಣಿಗೆ ಹೊಸ ಆಟಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಶುಭಮನ್ ಗಿಲ್ ಅವರಿಗೆ ಟಿ20 ವಿಶ್ವಕಪ್​ ಮತ್ತು ನ್ಯೂಜಿಲೆಂಡ್‌ ವಿರುದ್ಧ ಟಿ20 ತಂಡದಲ್ಲಿದ್ದರೂ ಆಡಲು ಅವಕಾಶಕ್ಕೆ ಸಿಕ್ಕಿರಲಿಲ್ಲ. ಆದರೂ, ಬಾಂಗ್ಲಾ ಸರಣಿಯಿಂದ ಅವರನ್ನು ಹೊರಗಿಟ್ಟಿದ್ದು ದಿಗ್ಭ್ರಮೆ ಮೂಡಿಸುವಂತಿದೆ.

ತಂಡಗಳು ಹೀಗಿವೆ..: ಭಾರತ: ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್​), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್.

ಬಾಂಗ್ಲಾದೇಶ: ಲಿಟ್ಟನ್ ದಾಸ್, ಅನಾಮುಲ್ ಹೇಗ್ ಬಿಜೋಯ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಆಲ್ ಚೌಧರಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹ್ಮದ್, ಎಬಾಡೋತ್ ಹುಸೇನ್ ಅಹ್ಮದ್, ನಶ್ಮುದ್ ಹುಸೇನ್ ಅಹ್ಮದ್, ಮಹ್ಸಮುದ್ ಷಾನ್ ಉಹ್ಮದ್, ಕ್ವಾಜಿ ನೂರುಲ್ ಹಸನ್ ಸೋಹನ್, ಶೋರಿಫುಲ್ ಇಸ್ಲಾಂ.

ಪಂದ್ಯಾರಂಭ: ಬೆಳಗ್ಗೆ 11.30 (ಭಾರತೀಯ ಕಾಲಮಾನ)

ಸ್ಥಳ: ಶೇರ್-ಎ-ಬಾಂಗ್ಲಾ ಸ್ಟೇಡಿಯಂ, ಢಾಕಾ

ಇದನ್ನೂ ಓದಿ: ಕ್ಯಾಚ್​ ಕೈಚೆಲ್ಲಿ ಪಂದ್ಯ ಕಳೆದುಕೊಂಡ ಭಾರತ: ಫೀಲ್ಡಿಂಗ್​ ವೈಫಲ್ಯ ಎಂದ ಕಾರ್ತಿ

ಮೀರ್‌ಪುರ (ಬಾಂಗ್ಲಾದೇಶ): ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಬುಧವಾರ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾ ಒಂದು ವಿಕೆಟ್‌ನಿಂದ ರೋಚಕ ಗೆಲುವು ದಾಖಲಿಸಿ ಸರಣಿಯಲ್ಲಿ 1-0ಯ ಅಂತರದ ಮುನ್ನಡೆ ಸಾಧಿಸಿದೆ. ಬಾಂಗ್ಲಾ ಗೆಲುವಿಗೆ 50ಕ್ಕೂ ಹೆಚ್ಚು ರನ್‌ಗಳು ಅಗತ್ಯವಿದ್ದಾಗ ಕೊನೆಯ ವಿಕೆಟ್‌ ಪಡೆಯುವಲ್ಲಿ ವಿಫಲವಾದ ಟೀಂ ಇಂಡಿಯಾ ಗೆಲುವು ಬಿಟ್ಟು ಕೊಟ್ಟು ಸೋತು ಮುಖಭಂಗ ಅನುಭವಿಸಿತು. ಇದಕ್ಕೂ ಮುನ್ನ, ಭಾರತದ ಸ್ಟಾರ್​ ಆಟಗಾರರ ದಂಡು ಕೂಡ ಜವಾಬ್ದಾರಿಯುತ ಆಟ ಪ್ರದರ್ಶಿಸುವಲ್ಲಿ ವಿಫಲವಾಯಿತು.

ಬ್ಯಾಟಿಂಗ್​, ಬೌಲಿಂಗ್ ಮತ್ತು ಫೀಲ್ಡಿಂಗ್​ ಮೂರೂ ವಿಭಾಗಗಳಲ್ಲಿ ತೋರಿದ ನಿರಾಶಾದಾಯಕ ಪ್ರದರ್ಶನವೇ ರೋಹಿತ್​ ಶರ್ಮಾ ಪಡೆ ಹಿನ್ನಡೆ ಅನುಭವಿಸಲು ಕಾರಣವಾಗಿತ್ತು. 2015ರಲ್ಲಿ ನಡೆದ ಬಾಂಗ್ಲಾ ವಿರುದ್ಧದ ಸರಣಿಯಲ್ಲೂ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡ 1-2 ರಿಂದ ಅಂತರದಿಂದ ಸೋಲು ಕಂಡಿತ್ತು. ಕೊನೆಯ ಪಂದ್ಯದಲ್ಲಿ ಮಾತ್ರ ಟೀಂ ಇಂಡಿಯಾ ಗೆದ್ದು ನಿಟ್ಟುಸಿರುಬಿಟ್ಟಿತ್ತು.

ಈ ಸರಣಿಯ ಎರಡನೇ ಪಂದ್ಯದಲ್ಲಿಯೂ ಬಾಂಗ್ಲಾ ಸ್ಪಿನ್ನರ್‌ಗಳಾದ ಶಕೀಬ್ ಅಲ್ ಹಸನ್ ಮತ್ತು ಮೆಹದಿ ಹಸನ್ ಮಿರಾಜ್ ಮತ್ತೊಮ್ಮೆ ಭಾರತೀಯ ಬ್ಯಾಟರ್‌ಗಳನ್ನು 11-40 ಓವರ್‌ಗಳಲ್ಲೇ ಕಟ್ಟಿ ಹಾಕಿದರೆ ಇತಿಹಾಸ ಪುನರಾವರ್ತನೆ ಆಗುವ ಭೀತಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್‌ಗೆ ಇನ್ನು ಕೇವಲ 10 ತಿಂಗಳು ಮಾತ್ರ ಬಾಕಿಯಿದ್ದು ತಂಡ ಎಚ್ಚೆತ್ತುಕೊಳ್ಳಲೇಬೇಕಿದೆ.

ಭಾರತೀಯ ಆಟಗಾರರ ಭಯದ ಆಟದ ಶೈಲಿಯ ಬಗ್ಗೆ ಕೆಲ ದಿನಗಳಿಂದಲೂ ಟೀಕೆ-ಟಿಪ್ಪಣಿಗಳು ಕೇಳಿ ಬರುತ್ತಲೇ ಇದೆ. ಪರಿಸ್ಥಿತಿಗೆ ತಕ್ಕಂತೆ ಆಟ ಪ್ರದರ್ಶಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಈ ಸರಣಿಯಲ್ಲಿ ಶುಭಮನ್ ಗಿಲ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರಿಗೂ ವಿಶ್ರಾಂತಿ ನೀಡುವ ಹಿಂದಿನ ಆಯ್ಕೆ ಸಮಿತಿಯ ನಿರ್ಧಾರವೂ ಕೂಡಾ ಟೀಕೆಗೊಳಪಟ್ಟಿದೆ.

ಇದನ್ನೂ ಓದಿ: ನಿಧಾನಗತಿಯ ಓವರ್ ಮಾಡಿದ್ದಕ್ಕೆ ಟೀಂ ಇಂಡಿಯಾಗೆ ಭಾರಿ ದಂಡ ವಿಧಿಸಿದ ಐಸಿಸಿ

ತಂಡದ ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಚೇತನ್ ಶರ್ಮಾ ಈ ಹಿಂದೆ ನೀಡಿದ್ದ ಹೇಳಿಕೆ ಕೂಡಾ ವಿಚಿತ್ರ ಎನ್ನದೇ ವಿಧಿಯಿಲ್ಲ. ನ್ಯೂಜಿಲೆಂಡ್‌ ಪ್ರವಾಸದಿಂದಾಗಿ ಬಾಂಗ್ಲಾ ಸರಣಿಗೆ ಹೊಸ ಆಟಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಶುಭಮನ್ ಗಿಲ್ ಅವರಿಗೆ ಟಿ20 ವಿಶ್ವಕಪ್​ ಮತ್ತು ನ್ಯೂಜಿಲೆಂಡ್‌ ವಿರುದ್ಧ ಟಿ20 ತಂಡದಲ್ಲಿದ್ದರೂ ಆಡಲು ಅವಕಾಶಕ್ಕೆ ಸಿಕ್ಕಿರಲಿಲ್ಲ. ಆದರೂ, ಬಾಂಗ್ಲಾ ಸರಣಿಯಿಂದ ಅವರನ್ನು ಹೊರಗಿಟ್ಟಿದ್ದು ದಿಗ್ಭ್ರಮೆ ಮೂಡಿಸುವಂತಿದೆ.

ತಂಡಗಳು ಹೀಗಿವೆ..: ಭಾರತ: ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್​), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್.

ಬಾಂಗ್ಲಾದೇಶ: ಲಿಟ್ಟನ್ ದಾಸ್, ಅನಾಮುಲ್ ಹೇಗ್ ಬಿಜೋಯ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಆಲ್ ಚೌಧರಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹ್ಮದ್, ಎಬಾಡೋತ್ ಹುಸೇನ್ ಅಹ್ಮದ್, ನಶ್ಮುದ್ ಹುಸೇನ್ ಅಹ್ಮದ್, ಮಹ್ಸಮುದ್ ಷಾನ್ ಉಹ್ಮದ್, ಕ್ವಾಜಿ ನೂರುಲ್ ಹಸನ್ ಸೋಹನ್, ಶೋರಿಫುಲ್ ಇಸ್ಲಾಂ.

ಪಂದ್ಯಾರಂಭ: ಬೆಳಗ್ಗೆ 11.30 (ಭಾರತೀಯ ಕಾಲಮಾನ)

ಸ್ಥಳ: ಶೇರ್-ಎ-ಬಾಂಗ್ಲಾ ಸ್ಟೇಡಿಯಂ, ಢಾಕಾ

ಇದನ್ನೂ ಓದಿ: ಕ್ಯಾಚ್​ ಕೈಚೆಲ್ಲಿ ಪಂದ್ಯ ಕಳೆದುಕೊಂಡ ಭಾರತ: ಫೀಲ್ಡಿಂಗ್​ ವೈಫಲ್ಯ ಎಂದ ಕಾರ್ತಿ

Last Updated : Dec 6, 2022, 10:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.