ETV Bharat / sports

IND vs SA: ಟಿ-20 ವಿಶ್ವಕಪ್​ ದೃಷ್ಟಿಯಿಂದ ಕಾರ್ತಿಕ್​, ಹಾರ್ದಿಕ್ ಮೇಲೆ ಎಲ್ಲರ ಕಣ್ಣು

author img

By

Published : Jun 8, 2022, 1:04 PM IST

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಮಹತ್ವ ಪಡೆದುಕೊಂಡಿದ್ದು, ಕೆಲ ಪ್ಲೇಯರ್ಸ್​ ಮುಂದಿನ ಭವಿಷ್ಯ ಈ ಸರಣಿಯಿಂದ ನಿರ್ಧಾರಗೊಳ್ಳಲಿದೆ.

Karthik, Pandya
Karthik, Pandya

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್​ ದೃಷ್ಟಿಯಿಂದ ಕೆಲ ಪ್ಲೇಯರ್ಸ್​​ಗಳಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಮಹತ್ವ ಪಡೆದುಕೊಂಡಿದೆ. ಅದರಲ್ಲಿ ಪ್ರಮುಖವಾಗಿ ತಂಡಕ್ಕೆ ಕಮ್​​ಬ್ಯಾಕ್​ ಮಾಡಿರುವ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್​​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇವರು ನೀಡುವ ಪ್ರದರ್ಶನದ ಮೇಲೆ ಮುಂದಿನ ಹಾದಿ ನಿರ್ಧಾರವಾಗಲಿದೆ.

ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಟೀಂ ಇಂಡಿಯಾ ಭಾಗಿಯಾಗಲಿದ್ದು, ಇಂಡಿಯನ್​ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವಿಶ್ವಕಪ್​​ನಲ್ಲಿ ಫಿನಿಶರ್​​ ಪಾತ್ರ ನಿರ್ವಹಿಸಲು ಈ ಇಬ್ಬರೂ ಪ್ಲೇಯರ್​ಗಳ ಮೇಲೆ ಬಿಸಿಸಿಐ ದೃಷ್ಟಿ ನೆಟ್ಟಿದೆ.

2019ರ ಫೆಬ್ರವರಿಯಿಂದಲೂ ಟೀಂ ಇಂಡಿಯಾ ಪರ ಕಾರ್ತಿಕ್​ ಯಾವುದೇ ಟಿ-20 ಪಂದ್ಯ ಆಡಿಲ್ಲ. ಆದರೆ, 2022ರ ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಫಿನಿಶರ್​ ಪಾತ್ರ ನಿರ್ವಹಿಸಿರುವ ಕಾರ್ತಿಕ್​​ 220ರ ಸ್ಟ್ರೈಕ್​ ರೇಟ್​​ನಲ್ಲಿ ಬ್ಯಾಟ್​ ಬೀಸಿದ್ದರು. ಹೀಗಾಗಿ, ಬರೋಬ್ಬರಿ ಮೂರು ವರ್ಷಗಳ ಬಳಿಕ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇವರ ಬಗ್ಗೆ ಕೂಡ ಕೋಚ್ ರಾಹುಲ್ ದ್ರಾವಿಡ್ ಮೆಚ್ಚುಗೆ ಮಾತುಗಳನ್ನಾಡಿದ್ದು, ದಿನೇಶ್ ಕಾರ್ತಿಕ್ ತಂಡದಲ್ಲಿ ಫಿನಿಶರ್ ಪಾತ್ರ ನಿರ್ವಹಿಸುವ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಭಾರತೀಯ!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟನ್ಸ್ ಮುನ್ನಡೆಸಿ ಯಶಸ್ವಿಯಾಗಿರುವ ಹಾರ್ದಿಕ್ ಪಾಂಡ್ಯ, ಅನೇಕ ಏಳು - ಬೀಳಿನ ಬಳಿಕ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. 2021ರ ಐಸಿಸಿ ಟಿ-20 ವಿಶ್ವಕಪ್​​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಪಾಂಡ್ಯ, ಐಪಿಎಲ್​​ನಲ್ಲಿ 15 ಪಂದ್ಯಗಳಿಂದ 487ರನ್​​ಗಳಿಸಿದ್ದು, 8 ವಿಕೆಟ್ ಸಹ ಪಡೆದುಕೊಂಡಿದ್ದಾರೆ. ಇದರ ಪ್ರದರ್ಶನಕ್ಕೆ ಫಿದಾ ಆಗಿರುವ ಬಿಸಿಸಿಐ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ನೀಡಿದೆ.

ಉಳಿದಂತೆ ಭುವನೇಶ್ವರ್ ಕುಮಾರ್​, ಹರ್ಷಲ್ ಪಟೇಲ್​, ಆವೇಶ್ ಖಾನ್​ , ಅಕ್ಸರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್​ ಸಹ ರೇಸ್​​ನಲ್ಲಿದ್ದು, ಐಪಿಎಲ್​ನಲ್ಲಿ ಹೆಚ್ಚಿನ ವಿಕೆಟ್ ಪಡೆದಿರುವ ಯಜುವೇಂದ್ರ ಚಹಲ್ ಕೂಡ ಉತ್ತಮ ಪ್ರದರ್ಶನ ನೀಡಿ, ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ತವಕದಲ್ಲಿದ್ದಾರೆ.

ಮೊದಲ ಟಿ20 ಪಂದ್ಯ ನಾಳೆ ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದ್ದು, ತದನಂತರ ಕ್ರಮವಾಗಿ ಜೂನ್ 12ರಂದು ಕಟಕ್​, ಜೂನ್ 14 ವಿಶಾಖಪಟ್ಟಣಂ, ಜೂನ್​ 17 ರಾಜ್​ಕೋಟ್​ ಹಾಗೂ ಜೂನ್​ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಎರಡು ತಿಂಗಳ ಕಾಲ ಸುದೀರ್ಘ ಐಪಿಎಲ್​​ನಲ್ಲಿ ಭಾಗಿಯಾಗಿರುವ ಕಾರಣ ಟೀಂ ಇಂಡಿಯಾ ಖಾಯಂ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್​ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಹಿರಿಯರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹೀಗಾಗಿ, ತಂಡವನ್ನ ಕೆಎಲ್ ರಾಹುಲ್​ ಮುನ್ನಡೆಸಲಿದ್ದಾರೆ.

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್​ ದೃಷ್ಟಿಯಿಂದ ಕೆಲ ಪ್ಲೇಯರ್ಸ್​​ಗಳಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಮಹತ್ವ ಪಡೆದುಕೊಂಡಿದೆ. ಅದರಲ್ಲಿ ಪ್ರಮುಖವಾಗಿ ತಂಡಕ್ಕೆ ಕಮ್​​ಬ್ಯಾಕ್​ ಮಾಡಿರುವ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್​​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇವರು ನೀಡುವ ಪ್ರದರ್ಶನದ ಮೇಲೆ ಮುಂದಿನ ಹಾದಿ ನಿರ್ಧಾರವಾಗಲಿದೆ.

ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಟೀಂ ಇಂಡಿಯಾ ಭಾಗಿಯಾಗಲಿದ್ದು, ಇಂಡಿಯನ್​ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವಿಶ್ವಕಪ್​​ನಲ್ಲಿ ಫಿನಿಶರ್​​ ಪಾತ್ರ ನಿರ್ವಹಿಸಲು ಈ ಇಬ್ಬರೂ ಪ್ಲೇಯರ್​ಗಳ ಮೇಲೆ ಬಿಸಿಸಿಐ ದೃಷ್ಟಿ ನೆಟ್ಟಿದೆ.

2019ರ ಫೆಬ್ರವರಿಯಿಂದಲೂ ಟೀಂ ಇಂಡಿಯಾ ಪರ ಕಾರ್ತಿಕ್​ ಯಾವುದೇ ಟಿ-20 ಪಂದ್ಯ ಆಡಿಲ್ಲ. ಆದರೆ, 2022ರ ಐಪಿಎಲ್​​ನಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಫಿನಿಶರ್​ ಪಾತ್ರ ನಿರ್ವಹಿಸಿರುವ ಕಾರ್ತಿಕ್​​ 220ರ ಸ್ಟ್ರೈಕ್​ ರೇಟ್​​ನಲ್ಲಿ ಬ್ಯಾಟ್​ ಬೀಸಿದ್ದರು. ಹೀಗಾಗಿ, ಬರೋಬ್ಬರಿ ಮೂರು ವರ್ಷಗಳ ಬಳಿಕ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇವರ ಬಗ್ಗೆ ಕೂಡ ಕೋಚ್ ರಾಹುಲ್ ದ್ರಾವಿಡ್ ಮೆಚ್ಚುಗೆ ಮಾತುಗಳನ್ನಾಡಿದ್ದು, ದಿನೇಶ್ ಕಾರ್ತಿಕ್ ತಂಡದಲ್ಲಿ ಫಿನಿಶರ್ ಪಾತ್ರ ನಿರ್ವಹಿಸುವ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಭಾರತೀಯ!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟನ್ಸ್ ಮುನ್ನಡೆಸಿ ಯಶಸ್ವಿಯಾಗಿರುವ ಹಾರ್ದಿಕ್ ಪಾಂಡ್ಯ, ಅನೇಕ ಏಳು - ಬೀಳಿನ ಬಳಿಕ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. 2021ರ ಐಸಿಸಿ ಟಿ-20 ವಿಶ್ವಕಪ್​​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಪಾಂಡ್ಯ, ಐಪಿಎಲ್​​ನಲ್ಲಿ 15 ಪಂದ್ಯಗಳಿಂದ 487ರನ್​​ಗಳಿಸಿದ್ದು, 8 ವಿಕೆಟ್ ಸಹ ಪಡೆದುಕೊಂಡಿದ್ದಾರೆ. ಇದರ ಪ್ರದರ್ಶನಕ್ಕೆ ಫಿದಾ ಆಗಿರುವ ಬಿಸಿಸಿಐ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ನೀಡಿದೆ.

ಉಳಿದಂತೆ ಭುವನೇಶ್ವರ್ ಕುಮಾರ್​, ಹರ್ಷಲ್ ಪಟೇಲ್​, ಆವೇಶ್ ಖಾನ್​ , ಅಕ್ಸರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್​ ಸಹ ರೇಸ್​​ನಲ್ಲಿದ್ದು, ಐಪಿಎಲ್​ನಲ್ಲಿ ಹೆಚ್ಚಿನ ವಿಕೆಟ್ ಪಡೆದಿರುವ ಯಜುವೇಂದ್ರ ಚಹಲ್ ಕೂಡ ಉತ್ತಮ ಪ್ರದರ್ಶನ ನೀಡಿ, ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ತವಕದಲ್ಲಿದ್ದಾರೆ.

ಮೊದಲ ಟಿ20 ಪಂದ್ಯ ನಾಳೆ ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದ್ದು, ತದನಂತರ ಕ್ರಮವಾಗಿ ಜೂನ್ 12ರಂದು ಕಟಕ್​, ಜೂನ್ 14 ವಿಶಾಖಪಟ್ಟಣಂ, ಜೂನ್​ 17 ರಾಜ್​ಕೋಟ್​ ಹಾಗೂ ಜೂನ್​ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಎರಡು ತಿಂಗಳ ಕಾಲ ಸುದೀರ್ಘ ಐಪಿಎಲ್​​ನಲ್ಲಿ ಭಾಗಿಯಾಗಿರುವ ಕಾರಣ ಟೀಂ ಇಂಡಿಯಾ ಖಾಯಂ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್​ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಹಿರಿಯರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹೀಗಾಗಿ, ತಂಡವನ್ನ ಕೆಎಲ್ ರಾಹುಲ್​ ಮುನ್ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.