ಮುಂಬೈ(ಮಹಾರಾಷ್ಟ್ರ): ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಹರ್ಮನ್ಪ್ರೀತ್ ಕೌರ್ ತಂಡ ಮುನ್ನಡೆಸಲಿದ್ದಾರೆ. ಮಿಥಾಲಿ ರಾಜ್ ಎಲ್ಲ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಹರ್ಮನ್ಪ್ರೀತ್ಗೆ ನಾಯಕಿಯ ಸ್ಥಾನ ಒಲಿದು ಬಂದಿದೆ.
ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವೆ ಜೂನ್ 23ರಿಂದ ಟಿ-20 ಮತ್ತು ಏಕದಿನ ಕ್ರಿಕೆಟ್ ಪಂದ್ಯಗಳು ನಿಗದಿಯಾಗಿವೆ. ಎರಡೂ ಸರಣಿಯಲ್ಲಿ ತಲಾ ಮೂರು ಪಂದ್ಯಗಳಿವೆ. ಎರಡಕ್ಕೂ ಹರ್ಮನ್ಪ್ರೀತ್ ಕೌರ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.
ಭಾರತದ ಟಿ-20 ತಂಡ ಹೀಗಿದೆ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ಕೀಪರ್), ಎಸ್.ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ಕೀಪರ್), ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ಜೆಮಿಮಾ ರೋಡ್ರಿಗಸ್, ರಾಧಾ ಯಾದವ್.
ಭಾರತದ ಏಕದಿನ ತಂಡ ಹೀಗಿದೆ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ಕೀಪರ್), ಎಸ್.ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ಕೀಪರ್), ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಹಾಗೂ ತಾನಿಯಾ ಭಾಟಿಯಾ (ವಿಕೆಟ್ಕೀಪರ್), ಹರ್ಲೀನ್ ಡಿಯೋಲ್.
ಎರಡೂ ತಂಡಗಳಿಗೆ ಹೋಲಿಕೆ ಮಾಡಿದರೆ ಎರಡು ಬದಲಾವಣೆ ಮಾತ್ರ ಇವೆ. ಟಿ-20 ತಂಡದಲ್ಲಿ ಜೆಮಿಮಾ ರೋಡ್ರಿಗಸ್, ರಾಧಾ ಯಾದವ್ಗೆ ಅವಕಾಶ ಸಿಕ್ಕರೆ, ಏಕದಿನ ತಂಡದಲ್ಲಿ ತಾನಿಯಾ ಭಾಟಿಯಾ, ಹರ್ಲೀನ್ ಡಿಯೋಲ್ಗೆ ಸ್ಥಾನ ಕಲ್ಪಿಸಲಾಗಿದೆ. ಉಳಿದಂತೆ, ಆಟಗಾರ್ತಿಯರಲ್ಲಿ ಯಾವುದೇ ಬದಲಾವಣೆ ಇಲ್ಲ.
ಇನ್ನು, ಮೂರು ಪಂದ್ಯಗಳ ಟಿ-20 ಸರಣಿ ಜೂ.23ರಿಂದ ಆರಂಭವಾಗಲಿದೆ. ಡಂಬುಲ್ಲಾದಲ್ಲಿ ಜೂ.23, ಜೂ.25 ಮತ್ತು ಜೂ.27ರಂದು ಟಿ-20 ಪಂದ್ಯ ನಡೆಯಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಕ್ಯಾಂಡಿಯಲ್ಲಿ ನಿಗದಿಯಾಗಿದ್ದು, ಜು.1, ಜು.4 ಹಾಗೂ ಜು.7ರಂದು ಏಕದಿನ ಪಂದ್ಯಗಳು ಜರುಗಲಿದೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮಿಥಾಲಿ ರಾಜ್ ವಿದಾಯ