ETV Bharat / sports

ಕನ್ನಡಿಗನ ಸಹಿತ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಲಕ್ಷ್ಮಣ್

author img

By

Published : Jul 12, 2021, 8:55 PM IST

Updated : Jul 12, 2021, 9:08 PM IST

ಲಕ್ಷ್ಮಣ್ ಆರಂಭಿಕರಾಗಿ ಶಿಖರ್ ಧವನ್ ಮತ್ತು ಪೃಥ್ವಿ ಶಾರನ್ನು ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಸೂರ್ಯಕುಮಾರ್ ಯಾದವ್​, 4ರಲ್ಲಿ ಸಂಜು ಸಾಮ್ಸನ್​, 5ನೇ ಕ್ರಮಾಂಕಕ್ಕೆ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ನೀಡಿದ್ದಾರೆ.

ಶ್ರೀಲಂಕಾ vs ಭಾರತ ಏಕದಿನ ಪಂದ್ಯ
ಶ್ರೀಲಂಕಾ vs ಭಾರತ ಏಕದಿನ ಪಂದ್ಯ

ಕೊಲಂಬೊ: ಜುಲೈ 18ರಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆಡಲಿದೆ. ಈಗಾಗಲೆ ದ್ವೀಪ ರಾಷ್ಟ್ರ ವಿರುದ್ಧದ ಸರಣಿಗೆ 6 ಹೊಸ ಆಟಗಾರರ ಸಹಿತ 20 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಶಿಖರ್ ಧವನ್, ಭುವನೇಶ್ವರ್ ಸೇರಿದಂತೆ ಕೆಲವು ಹಿರಿಯ ಆಟಗಾರರಿದ್ದಾರೆ.

ಐಪಿಎಲ್​ನಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಮನಗೆದ್ದಿರುವ ಕರ್ನಾಟಕದ ದೇವದತ್ ಪಡಿಕ್ಕಲ್, ರಾಜಸ್ಥಾನದ ಚೇತನ್ ಸಕಾರಿಯಾ, ದೆಹಲಿಯ ನಿತೀಶ್ ರಾಣಾ ಸೇರಿದಂತೆ ಕೆಲವು ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಲು ಕಾಯುತ್ತಿದ್ದಾರೆ. ಪೃಥ್ವಿ ಶಾ ತಂಡಕ್ಕೆ ಭಾರತ ತಂಡಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಆಗಿರುವ ವಿವಿಎಸ್ ಲಕ್ಷ್ಮಣ್ ಸ್ಟಾರ್​ ಸ್ಪೋರ್ಟ್ಸ್​ ಕಾರ್ಯಕ್ರಮದ ವೇಳೆ ಈ ಸರಣಿಗೆ ತಮ್ಮ ನೆಚ್ಚಿನ 11ರ ಬಳಗವನ್ನು ಪ್ರಕಟಿಸಿದ್ದಾರೆ.

ಲಕ್ಷ್ಮಣ್ ಆರಂಭಿಕರಾಗಿ ಶಿಖರ್ ಧವನ್ ಮತ್ತು ಪೃಥ್ವಿ ಶಾರನ್ನು ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಸೂರ್ಯಕುಮಾರ್ ಯಾದವ್​, 4ರಲ್ಲಿ ಸಂಜು ಸಾಮ್ಸನ್​, 5ನೇ ಕ್ರಮಾಂಕಕ್ಕೆ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ನೀಡಿದ್ದಾರೆ.

6 ಮತ್ತು 7ನೇ ಕ್ರಮಾಂಕದಲ್ಲಿ ಆಲ್​ರೌಂಡರ್​ಗಳಾದ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಸಹೋದರರಿದ್ದಾರೆ. ಇವರಿಬ್ಬರ ಜೊತೆಗೆ ತಲಾ ಇಬ್ಬರು ವೇಗಿ ಮತ್ತು ಸ್ಪಿನ್ನರ್​ಗಳನ್ನು ಆಯ್ಕೆ ಮಾಡಿದ್ದಾರೆ. ಭುವನೇಶ್ವರ್ ಕುಮಾರ್, ದೀಪಕ್ ಚಹರ್ ಮತ್ತು ಕುಲ್ದೀಪ್- ಚಹಾಲ್​ಗೆ ಲಕ್ಷ್ಮಣ್ ಮಣೆಯಾಕಿದ್ದಾರೆ.

ಲಕ್ಷ್ಮಣ್ ಘೋಷಿಸಿದ ತಂಡದಲ್ಲಿ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್​ ಒಂದು ಬದಲಾವಣೆ ಬಯಸುವುದಾಗಿ ತಿಳಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಸಮರ್ಥರಾಗಿದ್ದರೆ ಕೃನಾಲ್ ಪಾಂಡ್ಯ ಬದಲಿಗೆ ನಿತೀಶ್ ರಾಣಾರನ್ನು ಹೆಚ್ಚುವರಿ ಬ್ಯಾಟ್ಸ್​ಮನ್ ಆಗಿ ತಂಡಕ್ಕೆ ಆಯ್ಕೆ ಮಾಡಲು ಬಯಸುತ್ತೇನೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತ vs ಶ್ರೀಲಂಕಾ: ಟಿ20, ಏಕದಿನ ಪಂದ್ಯಗಳ ಸಮಯ ಬದಲಾವಣೆ

ಕೊಲಂಬೊ: ಜುಲೈ 18ರಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆಡಲಿದೆ. ಈಗಾಗಲೆ ದ್ವೀಪ ರಾಷ್ಟ್ರ ವಿರುದ್ಧದ ಸರಣಿಗೆ 6 ಹೊಸ ಆಟಗಾರರ ಸಹಿತ 20 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಶಿಖರ್ ಧವನ್, ಭುವನೇಶ್ವರ್ ಸೇರಿದಂತೆ ಕೆಲವು ಹಿರಿಯ ಆಟಗಾರರಿದ್ದಾರೆ.

ಐಪಿಎಲ್​ನಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಮನಗೆದ್ದಿರುವ ಕರ್ನಾಟಕದ ದೇವದತ್ ಪಡಿಕ್ಕಲ್, ರಾಜಸ್ಥಾನದ ಚೇತನ್ ಸಕಾರಿಯಾ, ದೆಹಲಿಯ ನಿತೀಶ್ ರಾಣಾ ಸೇರಿದಂತೆ ಕೆಲವು ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಲು ಕಾಯುತ್ತಿದ್ದಾರೆ. ಪೃಥ್ವಿ ಶಾ ತಂಡಕ್ಕೆ ಭಾರತ ತಂಡಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಆಗಿರುವ ವಿವಿಎಸ್ ಲಕ್ಷ್ಮಣ್ ಸ್ಟಾರ್​ ಸ್ಪೋರ್ಟ್ಸ್​ ಕಾರ್ಯಕ್ರಮದ ವೇಳೆ ಈ ಸರಣಿಗೆ ತಮ್ಮ ನೆಚ್ಚಿನ 11ರ ಬಳಗವನ್ನು ಪ್ರಕಟಿಸಿದ್ದಾರೆ.

ಲಕ್ಷ್ಮಣ್ ಆರಂಭಿಕರಾಗಿ ಶಿಖರ್ ಧವನ್ ಮತ್ತು ಪೃಥ್ವಿ ಶಾರನ್ನು ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಸೂರ್ಯಕುಮಾರ್ ಯಾದವ್​, 4ರಲ್ಲಿ ಸಂಜು ಸಾಮ್ಸನ್​, 5ನೇ ಕ್ರಮಾಂಕಕ್ಕೆ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ನೀಡಿದ್ದಾರೆ.

6 ಮತ್ತು 7ನೇ ಕ್ರಮಾಂಕದಲ್ಲಿ ಆಲ್​ರೌಂಡರ್​ಗಳಾದ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಸಹೋದರರಿದ್ದಾರೆ. ಇವರಿಬ್ಬರ ಜೊತೆಗೆ ತಲಾ ಇಬ್ಬರು ವೇಗಿ ಮತ್ತು ಸ್ಪಿನ್ನರ್​ಗಳನ್ನು ಆಯ್ಕೆ ಮಾಡಿದ್ದಾರೆ. ಭುವನೇಶ್ವರ್ ಕುಮಾರ್, ದೀಪಕ್ ಚಹರ್ ಮತ್ತು ಕುಲ್ದೀಪ್- ಚಹಾಲ್​ಗೆ ಲಕ್ಷ್ಮಣ್ ಮಣೆಯಾಕಿದ್ದಾರೆ.

ಲಕ್ಷ್ಮಣ್ ಘೋಷಿಸಿದ ತಂಡದಲ್ಲಿ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್​ ಒಂದು ಬದಲಾವಣೆ ಬಯಸುವುದಾಗಿ ತಿಳಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಸಮರ್ಥರಾಗಿದ್ದರೆ ಕೃನಾಲ್ ಪಾಂಡ್ಯ ಬದಲಿಗೆ ನಿತೀಶ್ ರಾಣಾರನ್ನು ಹೆಚ್ಚುವರಿ ಬ್ಯಾಟ್ಸ್​ಮನ್ ಆಗಿ ತಂಡಕ್ಕೆ ಆಯ್ಕೆ ಮಾಡಲು ಬಯಸುತ್ತೇನೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತ vs ಶ್ರೀಲಂಕಾ: ಟಿ20, ಏಕದಿನ ಪಂದ್ಯಗಳ ಸಮಯ ಬದಲಾವಣೆ

Last Updated : Jul 12, 2021, 9:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.