ETV Bharat / sports

IPLಗೂ ಮುನ್ನವೇ ಆರ್​ಸಿಬಿಗೆ ಆಘಾತ: ಗಾಯಗೊಂಡು ಹೊರಬಿದ್ದ ಸ್ಟಾರ್ ಆಲ್​ರೌಂಡರ್​

author img

By

Published : Aug 30, 2021, 3:19 PM IST

ವಾಷಿಂಗ್ಟನ್​ ಸುಂದರ್​ ವಿಶ್ವಟೆಸ್ಟ್​ ಚಾಂಪಿಯನ್​ಶಿಪ್ ನಂತರ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡು ಸರಣಿಯಿಂದಲೇ ಹೊರಬಿದ್ದಿದ್ದರು.

Washington to miss second-leg of IPL
ರಾಯಲ್​ ಚಾಲೆಂಜರ್ಸ್ ಬೆಂಗಳೂರು

ಬೆಂಗಳೂರು: ಆಲ್​ರೌಂಡರ್​ ವಾಷಿಂಗ್ಟನ್​ ಸುಂದರ್ ಗಾಯದ ಕಾರಣ ಸೆಪ್ಟೆಂಬರ್​ 19ರಿಂದ ನಡೆಯಲಿರುವ ​2ನೇ ಹಂತದ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ಇವರ ಬದಲಿಗೆ ಆಕಾಶ್​ ದೀಪ್​ ಅವರನ್ನು ಸೇರಿಸಿಕೊಂಡಿದ್ದಾರೆ.

14ನೇ ಆವತ್ತಿಗಾಗಿ ಎಲ್ಲಾ ತಂಡಗಳು ಯುಎಇಗೆ ತೆರಳಿವೆ. ಆರ್​ಸಿಬಿ ಕೂಡ ಭಾನುವಾರ ದುಬೈಗೆ ತೆರಳಿದ್ದು, ಖಾಸಿಗಿ ಹೋಟೆಲ್​ನಲ್ಲಿ 6 ದಿನಗಳ ಕ್ವಾರಂಟೈನ್​ಗೆ ಒಳಗಾಗಲಿದೆ. ಆದರೆ, ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ಆಲ್​ರೌಂಡರ್​ ವಾಷಿಂಗ್ಟನ್ ಸುಂದರ್​ ಬೆರಳಿನ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ವಿಶ್ವಟೆಸ್ಟ್​ ಚಾಂಪಿಯನ್​ಶಿಪ್ ನಂತರ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡು ಸರಣಿಯಿಂದಲೇ ಹೊರಬಿದ್ದಿದ್ದರು.

ವಾಷಿಂಗ್ಟನ್ ಸುಂದರ್​ ಅವರಿಂದ ತೆರವಾದ ಸ್ಥಾನಕ್ಕೆ ನೆಟ್ ಬೌಲರ್ ಆಗಿದ್ದ ಆಕಾಶ್ ದೀಪ್ ಸಿಂಗ್ ಅವರನ್ನು ಆರ್​ಸಿಬಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.

ಮಾರ್ಚ್​ನಲ್ಲಿ ಬಯೋಬಬಲ್​ನಲ್ಲಿ ಆಟಗಾರರಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಐಪಿಎಲ್​ ಅನ್ನು ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್ 19 ರಂದು ಪುನಾರಂಭಗೊಳ್ಳಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ಮೊದಲ ಪಂದ್ಯ ನಡೆದರೆ, ಸೆಪ್ಟೆಂಬರ್ 20 ರಂದು ಕೆಕೆಆರ್ ವಿರುದ್ಧ ಆರ್​ಸಿಬಿ ತನ್ನ ಅಭಿಯಾನ ಆರಂಭಿಸಲಿದೆ.

ಇದನ್ನು ಓದಿ:ಆರ್​ಸಿಬಿ ಅಭಿಮಾನಿಗಳಿಗೆ ಗುಡ್​ ನ್ಯೂಸ್: ಹಸರಂಗ, ಚಮೀರಾಗೆ NOC ನೀಡಿದ ಶ್ರೀಲಂಕಾ ಕ್ರಿಕೆಟ್​

ಬೆಂಗಳೂರು: ಆಲ್​ರೌಂಡರ್​ ವಾಷಿಂಗ್ಟನ್​ ಸುಂದರ್ ಗಾಯದ ಕಾರಣ ಸೆಪ್ಟೆಂಬರ್​ 19ರಿಂದ ನಡೆಯಲಿರುವ ​2ನೇ ಹಂತದ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ಇವರ ಬದಲಿಗೆ ಆಕಾಶ್​ ದೀಪ್​ ಅವರನ್ನು ಸೇರಿಸಿಕೊಂಡಿದ್ದಾರೆ.

14ನೇ ಆವತ್ತಿಗಾಗಿ ಎಲ್ಲಾ ತಂಡಗಳು ಯುಎಇಗೆ ತೆರಳಿವೆ. ಆರ್​ಸಿಬಿ ಕೂಡ ಭಾನುವಾರ ದುಬೈಗೆ ತೆರಳಿದ್ದು, ಖಾಸಿಗಿ ಹೋಟೆಲ್​ನಲ್ಲಿ 6 ದಿನಗಳ ಕ್ವಾರಂಟೈನ್​ಗೆ ಒಳಗಾಗಲಿದೆ. ಆದರೆ, ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ಆಲ್​ರೌಂಡರ್​ ವಾಷಿಂಗ್ಟನ್ ಸುಂದರ್​ ಬೆರಳಿನ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ವಿಶ್ವಟೆಸ್ಟ್​ ಚಾಂಪಿಯನ್​ಶಿಪ್ ನಂತರ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡು ಸರಣಿಯಿಂದಲೇ ಹೊರಬಿದ್ದಿದ್ದರು.

ವಾಷಿಂಗ್ಟನ್ ಸುಂದರ್​ ಅವರಿಂದ ತೆರವಾದ ಸ್ಥಾನಕ್ಕೆ ನೆಟ್ ಬೌಲರ್ ಆಗಿದ್ದ ಆಕಾಶ್ ದೀಪ್ ಸಿಂಗ್ ಅವರನ್ನು ಆರ್​ಸಿಬಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.

ಮಾರ್ಚ್​ನಲ್ಲಿ ಬಯೋಬಬಲ್​ನಲ್ಲಿ ಆಟಗಾರರಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಐಪಿಎಲ್​ ಅನ್ನು ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್ 19 ರಂದು ಪುನಾರಂಭಗೊಳ್ಳಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ಮೊದಲ ಪಂದ್ಯ ನಡೆದರೆ, ಸೆಪ್ಟೆಂಬರ್ 20 ರಂದು ಕೆಕೆಆರ್ ವಿರುದ್ಧ ಆರ್​ಸಿಬಿ ತನ್ನ ಅಭಿಯಾನ ಆರಂಭಿಸಲಿದೆ.

ಇದನ್ನು ಓದಿ:ಆರ್​ಸಿಬಿ ಅಭಿಮಾನಿಗಳಿಗೆ ಗುಡ್​ ನ್ಯೂಸ್: ಹಸರಂಗ, ಚಮೀರಾಗೆ NOC ನೀಡಿದ ಶ್ರೀಲಂಕಾ ಕ್ರಿಕೆಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.