ETV Bharat / sports

ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಕರ್ನಾಟಕ ಸರ್ಕಾರ

author img

By

Published : Aug 16, 2021, 9:46 PM IST

ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಪ್ಯಾರಾಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದು, ಕ್ರಿಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ 5 ಕೋಟಿ ರೂ , ಬೆಳ್ಳಿ ಗೆದ್ದರೆ 3 ಕೋಟಿ ರೂ ಹಾಗೂ ಕಂಚಿನ ಪದಕ ಗೆದ್ದರೆ 2 ಕೋಟಿ ರೂ ಬಹುಮಾನ ನೀಡುವುದಾಗಿ ಸಚಿವ ಡಾ. ನಾರಾಯಣಗೌಡ ಸೋಮವಾರ ಘೋಷಿಸಿದ್ದಾರೆ.

Karnataka government announce 5 crore cash award
ಕ್ರೀಡಾ ಸಚಿವ ನಾರಾಯಣ ಗೌಡ

ಬೆಂಗಳೂರು: ಆಗಸ್ಟ್​ 24ರಿಂದ ಟೋಕಿಯೋ ಪ್ಯಾರಾಲಿಂಪಿಕ್ ಆರಂಭಗೊಳ್ಳಲಿದ್ದು, ಕರ್ನಾಟಕದಿಂದ ಅರ್ಹತೆ ಪಡೆದುಕೊಂಡಿರುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಭರ್ಜರಿ ಬಹುಮಾನ ಘೋಷಿಸಿದೆ.

ಈಗಾಗಲೆ ಒಲಿಂಪಿಕ್ಸ್​ನಲ್ಲಿ ಭಾರತ 7 ಪದಕ ಗೆಲ್ಲುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಇದೀಗ ಭಾರತದಿಂದ 54 ಪ್ಯಾರಾ ಕ್ರೀಡಾಪಟುಗಳು ಮಹಾಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದು, ಅವರೂ ಕೂಡ ಹಿಂದಿನ ಪದಕಗಳಿಗಿಂತ ಹೆಚ್ಚು ಪದಕಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಪ್ಯಾರಾಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದು, ಕ್ರಿಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ 5 ಕೋಟಿ ರೂ , ಬೆಳ್ಳಿ ಗೆದ್ದರೆ 3 ಕೋಟಿ ರೂ ಹಾಗೂ ಕಂಚಿನ ಪದಕ ಗೆದ್ದರೆ 2 ಕೋಟಿ ರೂ ಬಹುಮಾನ ನೀಡುವುದಾಗಿ ಸಚಿವ ಡಾ. ನಾರಾಯಣಗೌಡ ಸೋಮವಾರ ಘೋಷಿಸಿದ್ದಾರೆ.

ಶಕೀನ್ ಖಾತುನ್ ಪ್ಯಾರಾ ಪವರ್ ಲಿಪ್ಟಿಂಗ್‍ನ ಮತ್ತು ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 2012ರ ಪ್ಯಾರಾಲಿಂಪಿಕ್ಸ್​ನಲ್ಲಿ ಕರ್ನಾಟಕದ ಗಿರೀಶ್​ ಭಾರತಕ್ಕೆ ಏಕೈಕ ಪದಕ ತಂದುಕೊಟ್ಟಿದ್ದರು. ಅವರು ಹೈ ಜಂಪ್​ನಲ್ಲಿ 1.74 ಮೀಟರ್ ಜಿಗಿದು ಬೆಳ್ಳಿ ಪದಕ ಗೆದ್ದಿದ್ದರು.

ಇದನ್ನು ಓದಿ:Tokyo Paralympics-2020: ಇಬ್ಬರು ಸ್ಪರ್ಧಾರ್ಥಿಗಳಿಗೆ ಸನ್ಮಾನ, ತಲಾ 10ಲಕ್ಷ ರೂ. ಪ್ರೋತ್ಸಾಹಧನ

ಬೆಂಗಳೂರು: ಆಗಸ್ಟ್​ 24ರಿಂದ ಟೋಕಿಯೋ ಪ್ಯಾರಾಲಿಂಪಿಕ್ ಆರಂಭಗೊಳ್ಳಲಿದ್ದು, ಕರ್ನಾಟಕದಿಂದ ಅರ್ಹತೆ ಪಡೆದುಕೊಂಡಿರುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಭರ್ಜರಿ ಬಹುಮಾನ ಘೋಷಿಸಿದೆ.

ಈಗಾಗಲೆ ಒಲಿಂಪಿಕ್ಸ್​ನಲ್ಲಿ ಭಾರತ 7 ಪದಕ ಗೆಲ್ಲುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಇದೀಗ ಭಾರತದಿಂದ 54 ಪ್ಯಾರಾ ಕ್ರೀಡಾಪಟುಗಳು ಮಹಾಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದು, ಅವರೂ ಕೂಡ ಹಿಂದಿನ ಪದಕಗಳಿಗಿಂತ ಹೆಚ್ಚು ಪದಕಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಪ್ಯಾರಾಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದು, ಕ್ರಿಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ 5 ಕೋಟಿ ರೂ , ಬೆಳ್ಳಿ ಗೆದ್ದರೆ 3 ಕೋಟಿ ರೂ ಹಾಗೂ ಕಂಚಿನ ಪದಕ ಗೆದ್ದರೆ 2 ಕೋಟಿ ರೂ ಬಹುಮಾನ ನೀಡುವುದಾಗಿ ಸಚಿವ ಡಾ. ನಾರಾಯಣಗೌಡ ಸೋಮವಾರ ಘೋಷಿಸಿದ್ದಾರೆ.

ಶಕೀನ್ ಖಾತುನ್ ಪ್ಯಾರಾ ಪವರ್ ಲಿಪ್ಟಿಂಗ್‍ನ ಮತ್ತು ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 2012ರ ಪ್ಯಾರಾಲಿಂಪಿಕ್ಸ್​ನಲ್ಲಿ ಕರ್ನಾಟಕದ ಗಿರೀಶ್​ ಭಾರತಕ್ಕೆ ಏಕೈಕ ಪದಕ ತಂದುಕೊಟ್ಟಿದ್ದರು. ಅವರು ಹೈ ಜಂಪ್​ನಲ್ಲಿ 1.74 ಮೀಟರ್ ಜಿಗಿದು ಬೆಳ್ಳಿ ಪದಕ ಗೆದ್ದಿದ್ದರು.

ಇದನ್ನು ಓದಿ:Tokyo Paralympics-2020: ಇಬ್ಬರು ಸ್ಪರ್ಧಾರ್ಥಿಗಳಿಗೆ ಸನ್ಮಾನ, ತಲಾ 10ಲಕ್ಷ ರೂ. ಪ್ರೋತ್ಸಾಹಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.