ETV Bharat / sports

ಕುಸ್ತಿಪಟು ಸುಶೀಲ್ ಕುಮಾರ್​ಗೆ ಮರಣದಂಡನೆ ವಿಧಿಸಿ: ಮೃತ ಸಾಗರ್​ ತಾಯಿ ಆಗ್ರಹ

author img

By

Published : May 23, 2021, 9:29 PM IST

ಆರೋಪಿ ಸುಶೀಲ್ ಕುಮಾರ್​ಗೆ ಮರಣದಂಡನೆ ಶಿಕ್ಷೆಯಾಗಬೇಕೆಂದು ಹಾಗೂ ಸುಶೀಲ್​ ಪಡೆದಿರುವ ಎಲ್ಲಾ ಮೆಡಲ್ ಮತ್ತು ಗೌರವಾನ್ವಿತ ಪ್ರಶಸ್ತಿಗಳನ್ನೆಲ್ಲಾ ವಾಪಸ್​ ಪಡೆಯಬೇಕೆಂದು ಸಾಗರ್ ತಾಯಿ ಆಗ್ರಹಿಸಿದ್ದಾರೆ.

ಸುಶೀಲ್ ಕುಮಾರ್
ಸುಶೀಲ್ ಕುಮಾರ್

ಸೋನಿಪತ್: ಕುಸ್ತಿಪಟು ಸಾಗರ್​ ರಾಣಾ ಕೊಲೆಗೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು 18 ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ನ್ಯಾಯಾಲಯ ಅವರನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ವಿಚಾರಣೆಗಾಗಿ ಒಪ್ಪಿಸಿದೆ. ಈ ಸಂದರ್ಭದಲ್ಲಿ 'ಈಟಿವಿ ಭಾರತ' ಜೊತೆಗೆ ಮಾತನಾಡಿರುವ ಮೃತ ಕುಸ್ತಿಪಟುವಿನ ತಂದೆ ಹಾಗೂ ನಿವೃತ್ತ ದೆಹಲಿ ಪೊಲೀಸ್​ ಅಧಿಕಾರಿಯಾರಿಯಾಗಿರುವ ಆಶೋಕ್ ಧಾಂಖರ್- "ನಮಗೆ ನ್ಯಾಯ ಸಿಗಬೇಕು, ದೆಹಲಿ ಪೊಲೀಸರ ಮೇಲೆ ವಿಶ್ವಾಸವಿದೆ." ಎಂದಿದ್ದಾರೆ.

ಮೃತ ಸಾಗರ್ ರಾಣಾ ಪೋಷಕರು

ಸಾಗರ್ ತಾಯಿ ಸವಿತಾ ಧಾಂಖರ್ ಮಾತನಾಡಿ, "ಆರೋಪಿ ಸುಶೀಲ್ ಕುಮಾರ್​ಗೆ ಮರಣದಂಡನೆ ಶಿಕ್ಷೆಯಾಗಬೇಕು. ಜೊತೆಗೆ ಸುಶೀಲ್​ ಪಡೆದಿರುವ ಎಲ್ಲಾ ಮೆಡಲ್ ಮತ್ತು ಗೌರವಾನ್ವಿತ ಪ್ರಶಸ್ತಿಗಳನ್ನು ವಾಪಸ್​ ಪಡೆಯಬೇಕು. ಸ್ಟೇಡಿಯಂನಿಂದ ಮತ್ತು ಕುಸ್ತಿ ಕ್ರೀಡಾ ವಿಭಾಗದಿಂದ ಸುಶೀಲ್ ಕುಮಾರ್​ರನ್ನು ತೆಗೆದು ಹಾಕಬೇಕು." ಎಂದು ಹೇಳಿದ್ದಾರೆ.

ಪೊಲೀಸರ ವರದಿ ಪ್ರಕಾರ ಮೇ 4 ರಂದು ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಛತ್ರಸಾಲ್​ ಸ್ಟೇಡಿಯಂಗೆ ಸಾಗರ್ ಮತ್ತು ಅವರ ಸ್ನೇಹಿತರನ್ನು ಕರೆತಂದು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಸಾಗರ್ ಮೃತಪಟ್ಟರೆ, ಸ್ನೇಹಿತರು ಗಾಯಗೊಂಡಿದ್ದರು. ಸಾಗರ್​ ಮೃತಪಟ್ಟ ನಂತರ ಸುಶೀಲ್ ಕುಮಾರ್ ನಾಪತ್ತೆಯಾಗಿದ್ದರು. ಕೊನೆಗೆ ಮೇ 23ರಂದು ದೆಹಲಿ ಪೊಲೀಸರಿಂದ ಬಂಧನವಾಗಿದ್ದರು.​

ಇದನ್ನು ಓದಿ:ಸಾಗರ್​ ರಾಣಾ ಕೊಲೆ ಪ್ರಕರಣ: 6 ದಿನಗಳ ಪೊಲೀಸ್ ಕಸ್ಟಡಿಗೆ ಕುಸ್ತಿಪಟು ಸುಶೀಲ್ ಕುಮಾರ್​

ಸೋನಿಪತ್: ಕುಸ್ತಿಪಟು ಸಾಗರ್​ ರಾಣಾ ಕೊಲೆಗೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು 18 ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ನ್ಯಾಯಾಲಯ ಅವರನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ವಿಚಾರಣೆಗಾಗಿ ಒಪ್ಪಿಸಿದೆ. ಈ ಸಂದರ್ಭದಲ್ಲಿ 'ಈಟಿವಿ ಭಾರತ' ಜೊತೆಗೆ ಮಾತನಾಡಿರುವ ಮೃತ ಕುಸ್ತಿಪಟುವಿನ ತಂದೆ ಹಾಗೂ ನಿವೃತ್ತ ದೆಹಲಿ ಪೊಲೀಸ್​ ಅಧಿಕಾರಿಯಾರಿಯಾಗಿರುವ ಆಶೋಕ್ ಧಾಂಖರ್- "ನಮಗೆ ನ್ಯಾಯ ಸಿಗಬೇಕು, ದೆಹಲಿ ಪೊಲೀಸರ ಮೇಲೆ ವಿಶ್ವಾಸವಿದೆ." ಎಂದಿದ್ದಾರೆ.

ಮೃತ ಸಾಗರ್ ರಾಣಾ ಪೋಷಕರು

ಸಾಗರ್ ತಾಯಿ ಸವಿತಾ ಧಾಂಖರ್ ಮಾತನಾಡಿ, "ಆರೋಪಿ ಸುಶೀಲ್ ಕುಮಾರ್​ಗೆ ಮರಣದಂಡನೆ ಶಿಕ್ಷೆಯಾಗಬೇಕು. ಜೊತೆಗೆ ಸುಶೀಲ್​ ಪಡೆದಿರುವ ಎಲ್ಲಾ ಮೆಡಲ್ ಮತ್ತು ಗೌರವಾನ್ವಿತ ಪ್ರಶಸ್ತಿಗಳನ್ನು ವಾಪಸ್​ ಪಡೆಯಬೇಕು. ಸ್ಟೇಡಿಯಂನಿಂದ ಮತ್ತು ಕುಸ್ತಿ ಕ್ರೀಡಾ ವಿಭಾಗದಿಂದ ಸುಶೀಲ್ ಕುಮಾರ್​ರನ್ನು ತೆಗೆದು ಹಾಕಬೇಕು." ಎಂದು ಹೇಳಿದ್ದಾರೆ.

ಪೊಲೀಸರ ವರದಿ ಪ್ರಕಾರ ಮೇ 4 ರಂದು ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಛತ್ರಸಾಲ್​ ಸ್ಟೇಡಿಯಂಗೆ ಸಾಗರ್ ಮತ್ತು ಅವರ ಸ್ನೇಹಿತರನ್ನು ಕರೆತಂದು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಸಾಗರ್ ಮೃತಪಟ್ಟರೆ, ಸ್ನೇಹಿತರು ಗಾಯಗೊಂಡಿದ್ದರು. ಸಾಗರ್​ ಮೃತಪಟ್ಟ ನಂತರ ಸುಶೀಲ್ ಕುಮಾರ್ ನಾಪತ್ತೆಯಾಗಿದ್ದರು. ಕೊನೆಗೆ ಮೇ 23ರಂದು ದೆಹಲಿ ಪೊಲೀಸರಿಂದ ಬಂಧನವಾಗಿದ್ದರು.​

ಇದನ್ನು ಓದಿ:ಸಾಗರ್​ ರಾಣಾ ಕೊಲೆ ಪ್ರಕರಣ: 6 ದಿನಗಳ ಪೊಲೀಸ್ ಕಸ್ಟಡಿಗೆ ಕುಸ್ತಿಪಟು ಸುಶೀಲ್ ಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.