ಬಾಗಲಕೋಟೆ: ಅನಧಿಕೃತ ಬಡಾವಣೆಯಲ್ಲಿ ನಿವೇಶನ ಖರೀದಿಸಬಾರದು ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಸಲಿಂಗಪ್ಪ ನಾವಲಗಿ ತಿಳಿಸಿದ್ದಾರೆ.
ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅನಧಿಕೃತ ಬಡಾವಣೆಯಲ್ಲಿ ನಿವೇಶನ ಖರೀದಿಸಬಾರದು ಎಂದು ಜಾಗೃತಿ ಮೂಡಿಸಲಾಗುವುದು. ಜೊತೆಗೆ ನಗರದ ಸುತ್ತಮುತ್ತಲಿನ ಜಮೀನು ಸೇರಿದಂತೆ ಸುಮಾರು 20 ಗ್ರಾಮಗಳಲ್ಲಿ ಯೋಜನಾ ಪ್ರಾಧಿಕಾರಕ್ಕೆ ಒಳಪಡಿಸುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದರು.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ರಾಮತೀರ್ಥ ನಗರ ಮತ್ತು ಕುಮಾರಸ್ವಾಮಿ ಲೇಔಟ್ ಮಾದರಿಯಲ್ಲಿ ಬಡಾವಣೆಗಳನ್ನು ಅಭಿವೃದ್ಧಿ ಪಡಿಸಿ, ಯೋಗ್ಯ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಓದಿ: 'ರಾಮ ಮಂದಿರ ಏಕೆ ಬೇಡ?' ಭಗವಾನ್ ಪುಸ್ತಕ ಖರೀದಿಸಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ