ETV Bharat / state

ಬಾಗಲಕೋಟೆಯಲ್ಲಿ ಕೊರೊನಾದಿಂದ ಮೂವರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಜಿಲ್ಲೆಯಲ್ಲಿ ಈವರೆಗೆ 8549 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿ 91 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. 8097 ಜನರ ವರದಿ ನೆಗೆಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 74 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, 16 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

author img

By

Published : Jun 4, 2020, 4:41 PM IST

Updated : Jun 4, 2020, 5:01 PM IST

3 discharge from hospital
3 discharge from hospital

ಬಾಗಲಕೋಟೆ: ಮೂರು ಜನ ಮಹಾಮಾರಿ ಕೋವಿಡ್-19ನಿಂದ ಗುಣಮುಖರಾಗಿದ್ದು, ಸದ್ಯ ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಒಟ್ಟು 74 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಸದ್ಯ ಬಾದಾಮಿ ತಾಲೂಕಿನ ಢಾಣಕಶಿರೂರ ಗ್ರಾಮದ 12 ವರ್ಷದ ಬಾಲಕಿ ಪಿ-1392, 50 ವರ್ಷದ ಪುರುಷ ಪಿ-1393, 23 ವರ್ಷದ ಯುವಕ ಪಿ-1394 ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಗುಣಮುಖರಾದವರಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಪ್ರಮಾಣಪತ್ರ ವಿತರಣೆ ಮಾಡಿದರು. ಬಳಿಕ ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಗುಣಮುಖರಾದವರಿಗೆ ಬೀಳ್ಕೊಟ್ಟರು.

ಇಂದು ಮಧ್ಯಾಹ್ನ ಬಿಡುಗಡೆಯಾದ ಕೋವಿಡ್-19 ಹೆಲ್ತ್ ಬುಲೆಟಿನ್ ಪ್ರಕಾರ, ಓರ್ವ ಬಾಲಕಿ(17 ವರ್ಷ, ಸಿದ್ದಾಪೂರ ಗ್ರಾಮ)ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಜಿಲ್ಲೆಯಿಂದ 325 ಸ್ಯಾಂಪಲ್​ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬರುವ ನಿರೀಕ್ಷೆ ಇದೆ. ಸಾಂಸ್ಥಿಕ ಕ್ವಾರಂಟೈನ್​ನಲ್ಲಿ 729 ಮಂದಿ ಇದ್ದಾರೆ.

ಈವರೆಗೆ 8549 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿ 91 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. 8097 ಜನರ ವರದಿ ನೆಗೆಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 74 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, 16 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ: ಮೂರು ಜನ ಮಹಾಮಾರಿ ಕೋವಿಡ್-19ನಿಂದ ಗುಣಮುಖರಾಗಿದ್ದು, ಸದ್ಯ ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಒಟ್ಟು 74 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಸದ್ಯ ಬಾದಾಮಿ ತಾಲೂಕಿನ ಢಾಣಕಶಿರೂರ ಗ್ರಾಮದ 12 ವರ್ಷದ ಬಾಲಕಿ ಪಿ-1392, 50 ವರ್ಷದ ಪುರುಷ ಪಿ-1393, 23 ವರ್ಷದ ಯುವಕ ಪಿ-1394 ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಗುಣಮುಖರಾದವರಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಪ್ರಮಾಣಪತ್ರ ವಿತರಣೆ ಮಾಡಿದರು. ಬಳಿಕ ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಗುಣಮುಖರಾದವರಿಗೆ ಬೀಳ್ಕೊಟ್ಟರು.

ಇಂದು ಮಧ್ಯಾಹ್ನ ಬಿಡುಗಡೆಯಾದ ಕೋವಿಡ್-19 ಹೆಲ್ತ್ ಬುಲೆಟಿನ್ ಪ್ರಕಾರ, ಓರ್ವ ಬಾಲಕಿ(17 ವರ್ಷ, ಸಿದ್ದಾಪೂರ ಗ್ರಾಮ)ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಜಿಲ್ಲೆಯಿಂದ 325 ಸ್ಯಾಂಪಲ್​ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬರುವ ನಿರೀಕ್ಷೆ ಇದೆ. ಸಾಂಸ್ಥಿಕ ಕ್ವಾರಂಟೈನ್​ನಲ್ಲಿ 729 ಮಂದಿ ಇದ್ದಾರೆ.

ಈವರೆಗೆ 8549 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿ 91 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. 8097 ಜನರ ವರದಿ ನೆಗೆಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 74 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, 16 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Jun 4, 2020, 5:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.