ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 42 ಜನ ಕೋವಿಡ್ನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಹೊಸದಾಗಿ 149 ಕೊರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ. ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2446ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1204 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟ ಸೋಂಕಿತರ ಪೈಕಿ ಬಾಗಲಕೋಟೆ ತಾಲೂಕಿನಲ್ಲಿ 17, ಬಾದಾಮಿ 41, ಹುನಗುಂದ 32, ಬೀಳಗಿ 27, ಮುಧೋಳ 23, ಜಮಖಂಡಿ 8, ಬೇರೆ ಜಿಲ್ಲೆಯ 1 ಪ್ರಕರಣ ಕಂಡುಬಂದಿವೆ. ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 263 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 31610 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 28623 ನೆಗೆಟಿವ್ ಬಂದಿದ್ದು, 2446 ಪಾಸಿಟಿವ್ ಪ್ರಕರಣ ಹಾಗೂ 52 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು1192 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್ಗಳು ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 182 ಇದ್ದು, ಇನ್ಸ್ಟಿಟ್ಯೂಶನ್ ಕ್ವಾರಂಟೈನ್ನಲ್ಲಿದ್ದ 8237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.