ETV Bharat / state

ಹಿಂದೂ-ಮುಸ್ಲಿಂ ಸಾಮರಸ್ಯದ ಮೊಹರಂ: ನೀರಲ್ಲೇ ಉರಿಯುತ್ತೆ ಈ ದರ್ಗಾದ ದೀಪ!

Muharram celebration: ಬಾಗಲಕೋಟೆ ತಾಲೂಕಿನ ಚಿಮ್ಮನಕಟ್ಟಿ ಗ್ರಾಮದ ದೊಡ್ಡ ಲಾಲಸಾಬವಲಿ ದರ್ಗಾದಲ್ಲಿ ಮೂರು ದಿನಗಳ ಕಾಲ ಹಿಂದೂ-ಮುಸ್ಲಿಂ ಭಾವೈಕ್ಯದ ಮೊಹರಂ ಆಚರಣೆ ಸಂಭ್ರಮದಿಂದ ನಡೆಯುತ್ತದೆ. ಅದರಲ್ಲೂ ಇಲ್ಲಿ ಪವಾಡ ಎಂಬಂತೆ ಮೊಹರಂ ಸಂದರ್ಭದಲ್ಲಿ ನೀರಿನಿಂದಲೇ ದೀಪ ಬೆಳಗಲಾಗುತ್ತದೆ.

author img

By

Published : Aug 10, 2022, 1:21 PM IST

Muharram celebration
ಮೊಹರಂ ಆಚರಣೆ

ಬಾಗಲಕೋಟೆ: ತಾಲೂಕಿನ ಪ್ರಸಿದ್ಧ ಕ್ಷೇತ್ರ ಚಿಮ್ಮನಕಟ್ಟಿ ಗ್ರಾಮದಲ್ಲಿ ನೀರಿನಿಂದ ದೀಪ ಬೆಳೆಗಿಸುವ ಮೂಲಕ ಮೊಹರಂ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. ನೀರಿನಿಂದ ದೀಪ ಪ್ರಜ್ವಲಿಸುವ ಬಗ್ಗೆ ನೋಡಲು ವಿವಿಧ ಪ್ರದೇಶಗಳಿಂದ ಜನರು ಆಗಮಿಸುತ್ತಾರೆ. ಗ್ರಾಮದ ದೊಡ್ಡ ಲಾಲಸಾಬವಲಿ ದರ್ಗಾದಲ್ಲಿ ಮೂರು ದಿನಗಳ ಕಾಲ ಮೊಹರಂ ಆಚರಣೆ ನಡೆಯುತ್ತದೆ.

ದೀಪ ಉರಿಯುವುದು ಎಣ್ಣೆಯಿಂದಲ್ಲ, ಬದಲಿಗೆ ನೀರು. ಹೌದು. ಇಲ್ಲಿ ಮೊಹರಂ ಪವಾಡ ಎನ್ನುವಂತೆ ನೀರಿನಿಂದ ದೀಪ ಬೆಳಗಿಸುತ್ತಾರೆ. ಗ್ರಾಮದ ಸಂಗಮೇಶ್ವರ ದೇವಸ್ಥಾನದ ಬಾವಿಯಲ್ಲಿನ ನೀರನ್ನು ಬಿಂದಿಗೆಯಲ್ಲಿ ತಂದು ದರ್ಗಾದಲ್ಲಿನ ದೀಪಗಳಿಗೆ ನೀರು ಹಾಕಿ ದೀಪ ಬೆಳಗಿಸುತ್ತಾರೆ. ಅಲ್ಲದೇ ದೇಸಾಯಿಯವರ ಮನೆಯಲ್ಲಿ ಗಂಧ ತಂದು ದೇವರಿಗೆ ಅರ್ಪಣೆ ಮಾಡಿ ಪ್ರಾರಂಭವಾಗುವ ಈ ಹಬ್ಬದಲ್ಲಿ ಸಾಕಷ್ಟು ವಿಶೇಷ ಆಚರಣೆಗಳು ನಡೆಯುತ್ತವೆ.

ಸುಮಾರು 10ಕ್ಕೂ ಹೆಚ್ಚು ಟ್ರ್ಯಾಕ್ಟರ್ ಕಟ್ಟಿಗೆ ಸಂಗ್ರಹಿಸಿ ಅಗ್ನಿ ಕುಂಡ ತಯಾರಿಸುವ ಭಕ್ತರು ಇಡೀ ರಾತ್ರಿ ಕಟ್ಟಿಗೆ ಸುಟ್ಟು ಕೆಂಡ ಮಾಡುತ್ತಾರೆ. ಬೆಳಗ್ಗೆ ದರ್ಗಾಕ್ಕೆ ಆಗಮಿಸುವ ಲಾಲಸಾಬ ಅಜ್ಜ ಅಗ್ನಿ ಕುಂಡದಲ್ಲಿ ಎರಡು ಬಾರಿ ಹಾದು ಹೋಗುವ ಮೂಲಕ ಚಾಲನೆ ನೀಡುತ್ತಾರೆ. ನಂತರ ಡೋಲಿ ಹೊತ್ತವರು ಸೇರಿದಂತೆ ಬೇಡಿಕೊಂಡವರೆಲ್ಲ ಅಗ್ನಿಯಲ್ಲಿ ಹಾಯುತ್ತಾರೆ.

ಮೊಹರಂ ಆಚರಣೆ

ನಂತರ ಹೇಳಿಕೆ ಹೇಳುವ ಅಜ್ಜನವರು ಮುಂಬರುವ ರಾಜ್ಯ ಹಾಗೂ ದೇಶದ ರಾಜಕೀಯ ವಿಷಯಗಳ ಕುರಿತು ಭವಿಷ್ಯ ನುಡಿಯುತ್ತಾರೆ. ಈ ಬಾರಿ ಮಳೆ ಸಾಕಷ್ಟು ಇದ್ದು, ಬೆಳೆ ಚನ್ನಾಗಿ ಬರಲಿದೆ. ರಾಜಕೀಯ ಸ್ಥಿರತೆ ಇರುವುದಿಲ್ಲ ಎಂದು ಲಾಲಸಾಬ ಅಜ್ಜನವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಭಾವೈಕ್ಯತೆಯ ಪ್ರತೀಕ: 5 ತಲೆಮಾರುಗಳಿಂದ ಹಿಂದೂ ಕುಟುಂಬದಿಂದ ಮೊಹರಂ ಆಚರಣೆ

ಬಾಗಲಕೋಟೆ: ತಾಲೂಕಿನ ಪ್ರಸಿದ್ಧ ಕ್ಷೇತ್ರ ಚಿಮ್ಮನಕಟ್ಟಿ ಗ್ರಾಮದಲ್ಲಿ ನೀರಿನಿಂದ ದೀಪ ಬೆಳೆಗಿಸುವ ಮೂಲಕ ಮೊಹರಂ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. ನೀರಿನಿಂದ ದೀಪ ಪ್ರಜ್ವಲಿಸುವ ಬಗ್ಗೆ ನೋಡಲು ವಿವಿಧ ಪ್ರದೇಶಗಳಿಂದ ಜನರು ಆಗಮಿಸುತ್ತಾರೆ. ಗ್ರಾಮದ ದೊಡ್ಡ ಲಾಲಸಾಬವಲಿ ದರ್ಗಾದಲ್ಲಿ ಮೂರು ದಿನಗಳ ಕಾಲ ಮೊಹರಂ ಆಚರಣೆ ನಡೆಯುತ್ತದೆ.

ದೀಪ ಉರಿಯುವುದು ಎಣ್ಣೆಯಿಂದಲ್ಲ, ಬದಲಿಗೆ ನೀರು. ಹೌದು. ಇಲ್ಲಿ ಮೊಹರಂ ಪವಾಡ ಎನ್ನುವಂತೆ ನೀರಿನಿಂದ ದೀಪ ಬೆಳಗಿಸುತ್ತಾರೆ. ಗ್ರಾಮದ ಸಂಗಮೇಶ್ವರ ದೇವಸ್ಥಾನದ ಬಾವಿಯಲ್ಲಿನ ನೀರನ್ನು ಬಿಂದಿಗೆಯಲ್ಲಿ ತಂದು ದರ್ಗಾದಲ್ಲಿನ ದೀಪಗಳಿಗೆ ನೀರು ಹಾಕಿ ದೀಪ ಬೆಳಗಿಸುತ್ತಾರೆ. ಅಲ್ಲದೇ ದೇಸಾಯಿಯವರ ಮನೆಯಲ್ಲಿ ಗಂಧ ತಂದು ದೇವರಿಗೆ ಅರ್ಪಣೆ ಮಾಡಿ ಪ್ರಾರಂಭವಾಗುವ ಈ ಹಬ್ಬದಲ್ಲಿ ಸಾಕಷ್ಟು ವಿಶೇಷ ಆಚರಣೆಗಳು ನಡೆಯುತ್ತವೆ.

ಸುಮಾರು 10ಕ್ಕೂ ಹೆಚ್ಚು ಟ್ರ್ಯಾಕ್ಟರ್ ಕಟ್ಟಿಗೆ ಸಂಗ್ರಹಿಸಿ ಅಗ್ನಿ ಕುಂಡ ತಯಾರಿಸುವ ಭಕ್ತರು ಇಡೀ ರಾತ್ರಿ ಕಟ್ಟಿಗೆ ಸುಟ್ಟು ಕೆಂಡ ಮಾಡುತ್ತಾರೆ. ಬೆಳಗ್ಗೆ ದರ್ಗಾಕ್ಕೆ ಆಗಮಿಸುವ ಲಾಲಸಾಬ ಅಜ್ಜ ಅಗ್ನಿ ಕುಂಡದಲ್ಲಿ ಎರಡು ಬಾರಿ ಹಾದು ಹೋಗುವ ಮೂಲಕ ಚಾಲನೆ ನೀಡುತ್ತಾರೆ. ನಂತರ ಡೋಲಿ ಹೊತ್ತವರು ಸೇರಿದಂತೆ ಬೇಡಿಕೊಂಡವರೆಲ್ಲ ಅಗ್ನಿಯಲ್ಲಿ ಹಾಯುತ್ತಾರೆ.

ಮೊಹರಂ ಆಚರಣೆ

ನಂತರ ಹೇಳಿಕೆ ಹೇಳುವ ಅಜ್ಜನವರು ಮುಂಬರುವ ರಾಜ್ಯ ಹಾಗೂ ದೇಶದ ರಾಜಕೀಯ ವಿಷಯಗಳ ಕುರಿತು ಭವಿಷ್ಯ ನುಡಿಯುತ್ತಾರೆ. ಈ ಬಾರಿ ಮಳೆ ಸಾಕಷ್ಟು ಇದ್ದು, ಬೆಳೆ ಚನ್ನಾಗಿ ಬರಲಿದೆ. ರಾಜಕೀಯ ಸ್ಥಿರತೆ ಇರುವುದಿಲ್ಲ ಎಂದು ಲಾಲಸಾಬ ಅಜ್ಜನವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಭಾವೈಕ್ಯತೆಯ ಪ್ರತೀಕ: 5 ತಲೆಮಾರುಗಳಿಂದ ಹಿಂದೂ ಕುಟುಂಬದಿಂದ ಮೊಹರಂ ಆಚರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.