ETV Bharat / state

RSS ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ಇವರೆಲ್ಲ ಬ್ರಿಟಿಷರ್ ಏಜೆಂಟ್ ಆಗಿದ್ದವರು.. ಎಂ ಬಿ ಪಾಟೀಲ್​

author img

By

Published : Apr 20, 2022, 2:36 PM IST

ಬಿಜೆಪಿ, ಆರ್‌ಎಸ್‌ಎಸ್​ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಕೋಮು ಭಾವನೆ ಬಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ತಿದ್ದಾರೆ. ಜನರಿಗೂ ಸ್ವಲ್ಪ ದಿನದಲ್ಲಿ ಸತ್ಯ ಗೊತ್ತಾಗುತ್ತೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಅದನ್ನು ಹಾಳು ಮಾಡಲು ಬಿಡಲ್ಲ ಎಂದರು..

ಪಿಎಫ್ಐ, ಎಸ್​​ಡಿಪಿಐ ಜೊತೆಗೆ ಹಿಂದು ಸಂಘಟನೆಗಳ ಬ್ಯಾನ್ ಮಾಡಿ: ಎಂ.ಬಿ.ಪಾಟೀಲ್​
ಪಿಎಫ್ಐ, ಎಸ್​​ಡಿಪಿಐ ಜೊತೆಗೆ ಹಿಂದು ಸಂಘಟನೆಗಳ ಬ್ಯಾನ್ ಮಾಡಿ: ಎಂ.ಬಿ.ಪಾಟೀಲ್​

ಬಾಗಲಕೋಟೆ : ಪಿಎಫ್ಐ, ಎಸ್​​ಡಿಪಿಐ ಸಂಘಟನೆಗಳ ಜೊತೆಗೆ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆ ಮತ್ತು ಭಜರಂಗದಳ ಹಾಗೂ ಸನಾತನ ಧರ್ಮ ಬ್ಯಾನ್ ಮಾಡಬೇಕು. ಯಾರೂ ಕೋಮುಭಾವನೆ ಕೆರಳಿಸುತ್ತಾರೋ ಅವರನ್ನ ಬ್ಯಾನ್ ‌ಮಾಡಿ ನಮ್ಮದೇನು ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ ಬಿ ಪಾಟೀಲ್​ ತಿಳಿಸಿದರು.

ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವನೋ ಒಬ್ಬ ಸ್ಟೇಟಸ್ ಹಾಕಿದ್ದರಿಂದ ಹುಬ್ಬಳ್ಳಿ ಗಲಾಟೆಯಾಯ್ತು. ಪ್ರಚೋದನೆ ಆಯ್ತು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ಕೈಯಲ್ಲಿ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ತಪ್ಪಿತಸ್ಥರು ಯಾರೇ ಇರಲಿ ಕ್ರಮ ಆಗಬೇಕು. ನಿರಪರಾಧಿಗಳಿಗೆ ಕಿರುಕುಳ ಮಾಡಬೇಡಿ ಎಂದರು.

ಆರ್‌ಎಸ್‌ಎಸ್ ದೇಶಭಕ್ತಿ ಸಂಘಟನೆ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಇವರೆಲ್ಲಾ ಬ್ರಿಟಿಷರ ಏಜೆಂಟ್ ಆಗಿದ್ದರು ಎಂದು ಇಡೀ ಜಗತ್ತಿಗೆ ಗೊತ್ತಿದೆ. ಸಾವರ್ಕರ್ 3 ಸಾರಿ ಕ್ಷಮೆ ಕೋರಿ ಪತ್ರ ಬರೆದಿದ್ದರು.

ಬಿಜೆಪಿ, ಆರ್‌ಎಸ್‌ಎಸ್​ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಕೋಮು ಭಾವನೆ ಬಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ತಿದ್ದಾರೆ. ಜನರಿಗೂ ಸ್ವಲ್ಪ ದಿನದಲ್ಲಿ ಸತ್ಯ ಗೊತ್ತಾಗುತ್ತೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಅದನ್ನು ಹಾಳು ಮಾಡಲು ಬಿಡಲ್ಲ ಎಂದರು.

ಪಿಎಫ್ಐ, ಎಸ್​​ಡಿಪಿಐ ಜೊತೆಗೆ ಹಿಂದು ಸಂಘಟನೆಗಳ ಬ್ಯಾನ್ ಮಾಡಿ: ಎಂ.ಬಿ.ಪಾಟೀಲ್​

ತಮ್ಮ ತಪ್ಪು ವೈಫಲ್ಯ, ಶೇ.40ರಷ್ಟು ಕಮಿಷನ್​ ಆರೋಪ ಮುಚ್ಚಿಕೊಳ್ಳಲು ಹಿಜಾಬ್, ಹಲಾಲ್ ವಿಷಯ ಮುನ್ನೆಲೆಗೆ ತರುತ್ತಿದ್ದಾರೆ. ಸಿಎಂ ಬೊಮ್ಮಾಯಿ ಕಚೇರಿ ಸಿಬ್ಬಂದಿ ಮೇಲೂ ನ್ಯಾಯಾಂಗ ತನಿಖೆಯಾಗಬೇಕು. ಕಮಿಷನ್ ವಿಚಾರವಾಗಿ ಸಿಎಂ ಕಚೇರಿ ಸೇರಿದಂತೆ ಕೆಲವು ಸಚಿವರ ವಿರುದ್ಧ ಕೆಂಪಣ್ಣ ಆರೋಪ ಮಾಡಿದ್ದಾರೆ.

ನಾನು ಹೇಳಿರೋದಲ್ಲ. ಮುಖ್ಯಮಂತ್ರಿ ಕಾರ್ಯಾಲಯದಲ್ಲೂ ಕೆಲವು ಜನ ಅಧಿಕಾರಿಗಳು ಕೇಳುತ್ತಿದ್ಧಾರೆ. ಈ ಬಗ್ಗೆ ಸಂಪೂರ್ಣವಾಗಿ ನ್ಯಾಯಾಧೀಶರ ಮೂಲಕ ನಿಷ್ಪಕ್ಷಪಾತ ತನಿಖೆ ಆಗಲಿ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಆರೋಪ ವಿಚಾರವಾಗಿ ಮಾತನಾಡಿ, ಬೊಮ್ಮಾಯಿ ಮೂರು ವರ್ಷ ಯಾಕೆ ಸುಮ್ನೆ ಕೂತಿದ್ರಿ, ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದು ಗೊತ್ತಿದ್ದು ಸುಮ್ನೆ ಕೂತಿದ್ರೆ ಅದೂ ಅಪರಾಧವಾಗಿದೆ. ಭ್ರಷ್ಟಾಚಾರ ಮಾಡಿದರೆ ಬಯಲಿಗೆಳೆಯಬೇಕಿತ್ತು ಎಂದು ಕಿಡಿಕಾರಿದರು.

ಇದನ್ನೂ ಓದಿ: 50 ಕೋಟಿ ರೂ. ಮೇಲ್ಪಟ್ಟ ಕಾಮಗಾರಿಗಳ ಅನುಮೋದನೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸಮಿತಿ ರಚನೆ.. ಸಿಎಂ

ಬಾಗಲಕೋಟೆ : ಪಿಎಫ್ಐ, ಎಸ್​​ಡಿಪಿಐ ಸಂಘಟನೆಗಳ ಜೊತೆಗೆ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆ ಮತ್ತು ಭಜರಂಗದಳ ಹಾಗೂ ಸನಾತನ ಧರ್ಮ ಬ್ಯಾನ್ ಮಾಡಬೇಕು. ಯಾರೂ ಕೋಮುಭಾವನೆ ಕೆರಳಿಸುತ್ತಾರೋ ಅವರನ್ನ ಬ್ಯಾನ್ ‌ಮಾಡಿ ನಮ್ಮದೇನು ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ ಬಿ ಪಾಟೀಲ್​ ತಿಳಿಸಿದರು.

ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವನೋ ಒಬ್ಬ ಸ್ಟೇಟಸ್ ಹಾಕಿದ್ದರಿಂದ ಹುಬ್ಬಳ್ಳಿ ಗಲಾಟೆಯಾಯ್ತು. ಪ್ರಚೋದನೆ ಆಯ್ತು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ಕೈಯಲ್ಲಿ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ತಪ್ಪಿತಸ್ಥರು ಯಾರೇ ಇರಲಿ ಕ್ರಮ ಆಗಬೇಕು. ನಿರಪರಾಧಿಗಳಿಗೆ ಕಿರುಕುಳ ಮಾಡಬೇಡಿ ಎಂದರು.

ಆರ್‌ಎಸ್‌ಎಸ್ ದೇಶಭಕ್ತಿ ಸಂಘಟನೆ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಇವರೆಲ್ಲಾ ಬ್ರಿಟಿಷರ ಏಜೆಂಟ್ ಆಗಿದ್ದರು ಎಂದು ಇಡೀ ಜಗತ್ತಿಗೆ ಗೊತ್ತಿದೆ. ಸಾವರ್ಕರ್ 3 ಸಾರಿ ಕ್ಷಮೆ ಕೋರಿ ಪತ್ರ ಬರೆದಿದ್ದರು.

ಬಿಜೆಪಿ, ಆರ್‌ಎಸ್‌ಎಸ್​ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಕೋಮು ಭಾವನೆ ಬಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ತಿದ್ದಾರೆ. ಜನರಿಗೂ ಸ್ವಲ್ಪ ದಿನದಲ್ಲಿ ಸತ್ಯ ಗೊತ್ತಾಗುತ್ತೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಅದನ್ನು ಹಾಳು ಮಾಡಲು ಬಿಡಲ್ಲ ಎಂದರು.

ಪಿಎಫ್ಐ, ಎಸ್​​ಡಿಪಿಐ ಜೊತೆಗೆ ಹಿಂದು ಸಂಘಟನೆಗಳ ಬ್ಯಾನ್ ಮಾಡಿ: ಎಂ.ಬಿ.ಪಾಟೀಲ್​

ತಮ್ಮ ತಪ್ಪು ವೈಫಲ್ಯ, ಶೇ.40ರಷ್ಟು ಕಮಿಷನ್​ ಆರೋಪ ಮುಚ್ಚಿಕೊಳ್ಳಲು ಹಿಜಾಬ್, ಹಲಾಲ್ ವಿಷಯ ಮುನ್ನೆಲೆಗೆ ತರುತ್ತಿದ್ದಾರೆ. ಸಿಎಂ ಬೊಮ್ಮಾಯಿ ಕಚೇರಿ ಸಿಬ್ಬಂದಿ ಮೇಲೂ ನ್ಯಾಯಾಂಗ ತನಿಖೆಯಾಗಬೇಕು. ಕಮಿಷನ್ ವಿಚಾರವಾಗಿ ಸಿಎಂ ಕಚೇರಿ ಸೇರಿದಂತೆ ಕೆಲವು ಸಚಿವರ ವಿರುದ್ಧ ಕೆಂಪಣ್ಣ ಆರೋಪ ಮಾಡಿದ್ದಾರೆ.

ನಾನು ಹೇಳಿರೋದಲ್ಲ. ಮುಖ್ಯಮಂತ್ರಿ ಕಾರ್ಯಾಲಯದಲ್ಲೂ ಕೆಲವು ಜನ ಅಧಿಕಾರಿಗಳು ಕೇಳುತ್ತಿದ್ಧಾರೆ. ಈ ಬಗ್ಗೆ ಸಂಪೂರ್ಣವಾಗಿ ನ್ಯಾಯಾಧೀಶರ ಮೂಲಕ ನಿಷ್ಪಕ್ಷಪಾತ ತನಿಖೆ ಆಗಲಿ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಆರೋಪ ವಿಚಾರವಾಗಿ ಮಾತನಾಡಿ, ಬೊಮ್ಮಾಯಿ ಮೂರು ವರ್ಷ ಯಾಕೆ ಸುಮ್ನೆ ಕೂತಿದ್ರಿ, ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದು ಗೊತ್ತಿದ್ದು ಸುಮ್ನೆ ಕೂತಿದ್ರೆ ಅದೂ ಅಪರಾಧವಾಗಿದೆ. ಭ್ರಷ್ಟಾಚಾರ ಮಾಡಿದರೆ ಬಯಲಿಗೆಳೆಯಬೇಕಿತ್ತು ಎಂದು ಕಿಡಿಕಾರಿದರು.

ಇದನ್ನೂ ಓದಿ: 50 ಕೋಟಿ ರೂ. ಮೇಲ್ಪಟ್ಟ ಕಾಮಗಾರಿಗಳ ಅನುಮೋದನೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸಮಿತಿ ರಚನೆ.. ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.