ETV Bharat / state

ಬಾಗಲಕೋಟೆಯಲ್ಲಿ 'ಕೈ' ಹಾಗೂ 'ತೆನೆ' ಪಕ್ಷಗಳ ವಿರುದ್ಧ ಅಶ್ವತ್ಥ ನಾರಾಯಣ ವಾಗ್ದಾಳಿ - undefined

ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದವರು ಜಾತಿ ರಾಜಕಾರಣವನ್ನೇ ಲೋಕಸಭಾ ಚುನಾವಣೆಗೆ ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ. ಸಮಾಜದ ಚಿಂತನೆ ಹಾಗೂ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಇಂತಹ ನಾಯಕರು ಮತ ಕೇಳಲು ಬಂದಾಗ ಸೂಕ್ತ ಉತ್ತರ‌ ನೀಡಿ ಎಂದ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಕರೆ ನೀಡಿದರು.

ಅಶ್ವತ್ಥ ನಾರಾಯಣ
author img

By

Published : Apr 20, 2019, 5:02 PM IST

ಬಾಗಲಕೋಟೆ: ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್‌ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾ ಈಗಾಗಲೇ ಸೀಟ್​ ಬುಕ್ ಮಾಡುತ್ತಿದ್ದಾರೆ. ಇಂತಹ ನಾಯಕರು ಜನತೆಯಲ್ಲಿ ಹೇಗೆ ಮತ ಕೇಳುತ್ತಿದ್ದಾರೆ? ಎಂದು ಬಿಜೆಪಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಅಶ್ವತ್ಥ ನಾರಾಯಣ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಹಾಗು ಜೆಡಿಎಸ್‌ ನಾಯಕರ ವಿರುದ್ಧ ಅಶ್ವತ್ಥ ನಾರಾಯಣ ವಾಗ್ದಾಳಿ

ನಗರದ ಪ್ರೆಸ್ ಕ್ಲಬ್​ನಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಮಾಡಿರುವ ಅಭಿವೃದ್ಧಿ ಪ್ರಮುಖವಾಗಿದೆ. ಹೀಗಾಗಿ ಅವರ ಹೆಸರಿನಲ್ಲಿ ಮತ ಕೇಳಲು ಹೋಗುತ್ತಿದ್ದೇವೆ ಎಂದರು.

ಅಭ್ಯರ್ಥಿ ಹೆಸರು ಹೇಳದೆಯೇ ಮೋದಿ ಅವರು ಪ್ರಚಾರ ಭಾಷಣ ಮಾಡುತ್ತಾರಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕ್ಷೇತ್ರದಲ್ಲಿ ಪಿ.ಸಿ.ಗದ್ದಿಗೌಡರ ಮೂರು ಅವಧಿಗೆ ಸಂಸದರಾಗಿ ಆಯ್ಕೆ ಕೆಲಸ ಮಾಡಿದ್ದಾರೆ. ಅವರ ಹೆಸರು ಎಲ್ಲರಿಗೂ ತಿಳಿದಿದೆ. ಆದರೆ ಇಡೀ ದೇಶದ ಅಭಿವೃದ್ಧಿಗೆ ಮೋದಿಯವರ ಪಾತ್ರ ಇರುವುದರಿಂದ ಅವರ ಹೆಸರನಲ್ಲಿ ಹೋಗುವ ಮೂಲಕ ದೇಶದಲ್ಲಿ ಬದಲಾವಣೆ ಸಾಧ್ಯ ಎಂದರು.

ಈ ಭಾರಿ ರಾಜ್ಯದ 22 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆ: ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್‌ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾ ಈಗಾಗಲೇ ಸೀಟ್​ ಬುಕ್ ಮಾಡುತ್ತಿದ್ದಾರೆ. ಇಂತಹ ನಾಯಕರು ಜನತೆಯಲ್ಲಿ ಹೇಗೆ ಮತ ಕೇಳುತ್ತಿದ್ದಾರೆ? ಎಂದು ಬಿಜೆಪಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಅಶ್ವತ್ಥ ನಾರಾಯಣ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಹಾಗು ಜೆಡಿಎಸ್‌ ನಾಯಕರ ವಿರುದ್ಧ ಅಶ್ವತ್ಥ ನಾರಾಯಣ ವಾಗ್ದಾಳಿ

ನಗರದ ಪ್ರೆಸ್ ಕ್ಲಬ್​ನಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಮಾಡಿರುವ ಅಭಿವೃದ್ಧಿ ಪ್ರಮುಖವಾಗಿದೆ. ಹೀಗಾಗಿ ಅವರ ಹೆಸರಿನಲ್ಲಿ ಮತ ಕೇಳಲು ಹೋಗುತ್ತಿದ್ದೇವೆ ಎಂದರು.

ಅಭ್ಯರ್ಥಿ ಹೆಸರು ಹೇಳದೆಯೇ ಮೋದಿ ಅವರು ಪ್ರಚಾರ ಭಾಷಣ ಮಾಡುತ್ತಾರಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕ್ಷೇತ್ರದಲ್ಲಿ ಪಿ.ಸಿ.ಗದ್ದಿಗೌಡರ ಮೂರು ಅವಧಿಗೆ ಸಂಸದರಾಗಿ ಆಯ್ಕೆ ಕೆಲಸ ಮಾಡಿದ್ದಾರೆ. ಅವರ ಹೆಸರು ಎಲ್ಲರಿಗೂ ತಿಳಿದಿದೆ. ಆದರೆ ಇಡೀ ದೇಶದ ಅಭಿವೃದ್ಧಿಗೆ ಮೋದಿಯವರ ಪಾತ್ರ ಇರುವುದರಿಂದ ಅವರ ಹೆಸರನಲ್ಲಿ ಹೋಗುವ ಮೂಲಕ ದೇಶದಲ್ಲಿ ಬದಲಾವಣೆ ಸಾಧ್ಯ ಎಂದರು.

ಈ ಭಾರಿ ರಾಜ್ಯದ 22 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

Intro:Anchor


Body:ಚುನಾವಣೆ ಮುಂಚೆ ಯೇ ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ ಆಗುತ್ತೇನೆ.ಡಿ.ಕೆ.ಶಿವಕುಮಾರ ನಾನು ಮುಖ್ಯಮಂತ್ರಿ ಎಂದು ಹೇಳುತ್ತಾ,ಈಗಲೇ ಬುಕ್ ಮಾಡುತ್ತಿದ್ದಾರೆ.ಇಂತಹ ನಾಯಕರು ಮತಕ್ಕಾಗಿ ಯಾವ ಮುಖ ಇಟ್ಟುಕೊಂಡು ಬರುತ್ತಾರೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ವಾಗ್ದಾಳಿ ನಡೆಸಿದರು.
ಅವರು ಬಾಗಲಕೋಟೆ ನಗರದ ಪ್ರೇಸ್ ಕಬ್ಲ್ ನಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ, ಜೆಡಿಎಸ್,ಕಾಂಗ್ರೆಸ್ ಪಕ್ಷದವರು ಜಾತಿ ರಾಜಕಾರಣ ಮಾಡುವ ಮೂಲಕ ಲೋಕಸಭಾ ಚುನಾವಣೆ ಗೆ ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.ಸಮಾಜದ ಚಿಂತನೆ ಹಾಗೂ ಅಭಿವೃದ್ಧಿ ವಿಷಯಗಳ ಚರ್ಚೆ ಮಾಡುತ್ತಿಲ್ಲ.ಇಂತಹ ವಿಷಯಗಳನ್ನು ಇಟ್ಟುಕೊಂಡು ಮತ ಕೇಳಲು ಹೋಗುತ್ತಿಲ್ಲ.ಇಂತಹ ನಾಯಕರು ಮತ ಕೇಳಲು ಬಂದಾಗ ಸೂಕ್ತ ಉತ್ತರ‌ ನೀಡಿರಿ ಎಂದು ಮನವಿಕೊಂಡು ಅವರು,ಈ ಚುನಾವಣೆ ಯಲ್ಲಿ ಪ್ರಧಾನಿ ಮೋದಿ ಅವರು ಮಾಡಿರುವ ಅಭಿವೃದ್ಧಿ ಯೇ ಪ್ರಮುಖವಾಗಿದೆ.ಹೀಗಾಗಿ ಅವರ ಹೆಸರನಲ್ಲಿ ಹೋಗುತ್ತಿದ್ದೇವೆ.ಅಭ್ಯರ್ಥಿ ಹೆಸರು ಹೇಳದೆ ಮೋದಿ ಅವರು ಭಾಷಣ ಮಾಡುತ್ತಾರೆ ಎಂಬ ಪ್ರಶ್ನೆಗೆ ಈ ಕ್ಷೇತ್ರದಲ್ಲಿ ಪಿ.ಸಿ.ಗದ್ದಿಗೌಡರ ಮೂರು ಅವಧಿಗೆ ಸಂಸದರಾಗಿ ಆಯ್ಕೆ ಕೆಲಸ ಮಾಡಿದ್ದಾರೆ.ಅವರು ಹೆಸರು ಎಲ್ಲರಿಗೂ ತಿಳಿದಿದೆ.ಆದರೆ ಇಡೀ ದೇಶದ ಅಭಿವೃದ್ಧಿ ಗೆ ಮೋದಿಯವರ ಪಾತ್ರ ಇರುವುದರಿಂದ ಅವರ ಹೆಸರನಲ್ಲಿ ಹೋಗುವ ಮೂಲಕ ದೇಶದಲ್ಲಿ ಬದಲಾವಣೆ ಸಾಧ್ಯ ಎಂದು ತಿಳಿಸಿ.ಈ ಭಾರಿ ರಾಜ್ಯದ 22 ಸ್ಥಾನಗಳಲ್ಲಿ ಬಿಜೆಪಿ ಜಯಬೇರಿ ಗಳಿಸುವದು ಖಚಿತ. ಏಪ್ರಿಲ್ 18 ರಂದ ನಡೆದ ಚುನಾವಣೆ ಕ್ಷೇತ್ರದಲ್ಲಿ 14 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಬಿಜೆಪಿ ಜಯಬೇರಿ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..


Conclusion:ಆನಂದ
ಈ ಟಿವಿ,ಭಾರತ,ಬಾಗಲಕೋಟೆ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.