ಬಾಗಲಕೋಟೆ: ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನಂತರ ಪೊಲೀಸ್ ಠಾಣೆಗಳಿಗೆ ಕೊರೊನಾ ಲಗ್ಗೆ ಇಡುತ್ತಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮೀಣ ಠಾಣೆ, ತೇರದಾಳ, ಬನಹಟ್ಟಿ ಹಾಗೂ ಬಾಗಲಕೋಟೆ ಶಹರ್ ಪೊಲೀಸ್ ಠಾಣೆಗಳಲ್ಲಿ ತಲಾ ಒಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ಬಂದಿರುವುದು ವರದಿಯಾಗಿದೆ.
ಬಾಗಲಕೋಟೆ: ಸರ್ಕಾರಿ ಕಚೇರಿಗಳನ್ನು ಆವರಿಸಿಕೊಳ್ತಿದೆ ಕೊರೊನಾ
ಬಾಗಲಕೋಟೆ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನಂತರ ಪೊಲೀಸ್ ಠಾಣೆಗಳಿಗೆ ಕೊರೊನಾ ಲಗ್ಗೆ ಇಡುತ್ತಿದೆ. ಬಾಗಲಕೋಟೆ ಇಳಕಲ್ ಗ್ರಾಮೀಣ ಠಾಣೆ, ತೇರದಾಳ, ಬನಹಟ್ಟಿ ಹಾಗೂ ಬಾಗಲಕೋಟೆ ಶಹರ ಪೊಲೀಸ್ ಠಾಣೆಗೂ ಕೊರೊನಾ ಭೀತಿ ಆವರಿಸಿದೆ.
![ಬಾಗಲಕೋಟೆ: ಸರ್ಕಾರಿ ಕಚೇರಿಗಳನ್ನು ಆವರಿಸಿಕೊಳ್ತಿದೆ ಕೊರೊನಾ Corona is spreading all around cities government offices](https://etvbharatimages.akamaized.net/etvbharat/prod-images/768-512-8047655-976-8047655-1594891156730.jpg?imwidth=3840)
ಈ ಠಾಣೆಗಳನ್ನ ಬೇರೆಡೆ ಸ್ಥಳಾಂತರಿಸಿ ಕರ್ತವ್ಯ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಠಾಣೆಗಳಲ್ಲಿ ಸ್ಯಾನಿಟೈಸೇಶನ್ ಮಾಡಿಸಲಾಗಿದೆ.
ಕೊರೊನಾ ಪಾಸಿಟಿವ್ ಬಂದ ಸಿಬ್ಬಂದಿಗಳ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ ತಿಳಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನಂತರ ಪೊಲೀಸ್ ಠಾಣೆಗಳಿಗೆ ಕೊರೊನಾ ಲಗ್ಗೆ ಇಡುತ್ತಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮೀಣ ಠಾಣೆ, ತೇರದಾಳ, ಬನಹಟ್ಟಿ ಹಾಗೂ ಬಾಗಲಕೋಟೆ ಶಹರ್ ಪೊಲೀಸ್ ಠಾಣೆಗಳಲ್ಲಿ ತಲಾ ಒಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ಬಂದಿರುವುದು ವರದಿಯಾಗಿದೆ.
ಈ ಠಾಣೆಗಳನ್ನ ಬೇರೆಡೆ ಸ್ಥಳಾಂತರಿಸಿ ಕರ್ತವ್ಯ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಠಾಣೆಗಳಲ್ಲಿ ಸ್ಯಾನಿಟೈಸೇಶನ್ ಮಾಡಿಸಲಾಗಿದೆ.
ಕೊರೊನಾ ಪಾಸಿಟಿವ್ ಬಂದ ಸಿಬ್ಬಂದಿಗಳ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ ತಿಳಿಸಿದ್ದಾರೆ.