ETV Bharat / state

ಪೋಸ್ಟ್​ ಮಾರ್ಟಮ್​ಗೆ ಕರೆದೊಯ್ಯುವಾಗ 'ಸತ್ತ ವ್ಯಕ್ತಿ'ಗೆ ಬಂತು 'ಜೀವ'!

ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವ ವೇಳೆ ವ್ಯಕ್ತಿಗೆ ಜೀವ ಇರುವ ಬಗ್ಗೆ ತಿಳಿದು ಬಂದಿದ್ದು, ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿರುವ ಘಟನೆ ನಡೆದಿದೆ.

author img

By

Published : Mar 2, 2021, 11:13 AM IST

Updated : Mar 3, 2021, 8:42 PM IST

Bagalkote
ಶಂಕರ ಗೊಂಬಿ

ಬಾಗಲಕೋಟೆ: ಮೃತಪಟ್ಟಿದ್ದಾನೆಂದು ಶವಾಗಾರಕ್ಕೆ ವ್ಯಕ್ತಿಯ ದೇಹವನ್ನು ತೆಗೆದುಕೊಂಡು ಹೋಗುವ ಸಮಯದಲ್ಲಿ ‌ಜೀವ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿರುವ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದಿದೆ.

ಕಳೆದ ಶನಿವಾರ ಮಹಾಲಿಂಗಪುರ ರಬಕವಿ ರಸ್ತೆಯಲ್ಲಿ ಸಂಭವಿಸಿದ ಅಪಘಾತ ಸಂಭವಿಸಿತ್ತು. ಬೈಕ್​ ಅಪಘಾತದಲ್ಲಿ ಶಂಕರ ಎಂಬುವವರು ಗಾಯಗೊಂಡಿದ್ದರು. ತಲೆಗೆ ಏಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಂಕರ ಗೊಂಬಿಗೆ, ಹೆಚ್ಚಿನ ಚಿಕಿತ್ಸೆಗಾಗಿ ವೆಂಟಿಲೇಟರ್ ಮೂಲಕ ಆ್ಯಂಬುಲೆನ್ಸ್​ನಲ್ಲಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿಸಿತ್ತು. ಆದ್ರೆ ವ್ಯಕ್ತಿ ಬದುಕುವ ಸಾಧ್ಯತೆ ಕಡಿಮೆ ಇದೆ ಎಂದು ವಾಪಸ್ ಕಳುಹಿಸಿದ್ದರು. ಇನ್ನು ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಇಲ್ಲಿನ ವೈದ್ಯರು ಸಹ ಮೃತ‌ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆ ಮರಣೋತ್ತರ ಪರೀಕ್ಷೆ ನಡೆಸಲು ತಯಾರಿ ಮಾಡಲಾಗಿತ್ತು. ಆದರೆ, ಪರೀಕ್ಷೆಗೆಂದು ಕರೆದುಕೊಂಡು ಹೋಗುವ ವೇಳೆ ವ್ಯಕ್ತಿಯ ಕಾಲುಗಳು ಅಲುಗಾಡಿವೆ. ಈ ವೇಳೆ ಜೀವಂತವಿರುವ ಬಗ್ಗೆ ತಿಳಿದುಬಂದಿದೆ.

ಇನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು‌ ಹೋಗಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕರ್ ಸಾವನ್ನಪ್ಪಿದ್ದಾರೆ ಎಂದು ಅವರ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದರು.

ಬಾಗಲಕೋಟೆ: ಮೃತಪಟ್ಟಿದ್ದಾನೆಂದು ಶವಾಗಾರಕ್ಕೆ ವ್ಯಕ್ತಿಯ ದೇಹವನ್ನು ತೆಗೆದುಕೊಂಡು ಹೋಗುವ ಸಮಯದಲ್ಲಿ ‌ಜೀವ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿರುವ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದಿದೆ.

ಕಳೆದ ಶನಿವಾರ ಮಹಾಲಿಂಗಪುರ ರಬಕವಿ ರಸ್ತೆಯಲ್ಲಿ ಸಂಭವಿಸಿದ ಅಪಘಾತ ಸಂಭವಿಸಿತ್ತು. ಬೈಕ್​ ಅಪಘಾತದಲ್ಲಿ ಶಂಕರ ಎಂಬುವವರು ಗಾಯಗೊಂಡಿದ್ದರು. ತಲೆಗೆ ಏಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಂಕರ ಗೊಂಬಿಗೆ, ಹೆಚ್ಚಿನ ಚಿಕಿತ್ಸೆಗಾಗಿ ವೆಂಟಿಲೇಟರ್ ಮೂಲಕ ಆ್ಯಂಬುಲೆನ್ಸ್​ನಲ್ಲಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿಸಿತ್ತು. ಆದ್ರೆ ವ್ಯಕ್ತಿ ಬದುಕುವ ಸಾಧ್ಯತೆ ಕಡಿಮೆ ಇದೆ ಎಂದು ವಾಪಸ್ ಕಳುಹಿಸಿದ್ದರು. ಇನ್ನು ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಇಲ್ಲಿನ ವೈದ್ಯರು ಸಹ ಮೃತ‌ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆ ಮರಣೋತ್ತರ ಪರೀಕ್ಷೆ ನಡೆಸಲು ತಯಾರಿ ಮಾಡಲಾಗಿತ್ತು. ಆದರೆ, ಪರೀಕ್ಷೆಗೆಂದು ಕರೆದುಕೊಂಡು ಹೋಗುವ ವೇಳೆ ವ್ಯಕ್ತಿಯ ಕಾಲುಗಳು ಅಲುಗಾಡಿವೆ. ಈ ವೇಳೆ ಜೀವಂತವಿರುವ ಬಗ್ಗೆ ತಿಳಿದುಬಂದಿದೆ.

ಇನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು‌ ಹೋಗಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕರ್ ಸಾವನ್ನಪ್ಪಿದ್ದಾರೆ ಎಂದು ಅವರ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದರು.

Last Updated : Mar 3, 2021, 8:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.