ETV Bharat / state

ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಹಳ್ಳಿಯಲ್ಲೇ ಕೆಲಸ.. ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಪರಿಶೀಲನೆ

ಕೂಲಿಕಾರರು ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್​ ಧರಿಸಿ ಕೆಲಸ ಮಾಡುತ್ತಿರುವುದನ್ನು ಗಮನಿಸಿದರು. ಕೆಲಸದ ಸ್ಥಳದಲ್ಲಿ ನೀರು, ನೆರಳು, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.

author img

By

Published : May 7, 2020, 9:27 AM IST

District Panchayat Chairperson Bayakka Meti
ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ

ಬಾಗಲಕೋಟೆ : ಉದ್ಯೋಗ ಖಾತರಿ ಯೋಜನೆಯಡಿ ಗಿರಿಸಾಗರ ಗ್ರಾಮ ಪಂಚಾಯತ್​ ವ್ಯಾಪ್ತಿಯ ರೈತರ ಹೊಲದಲ್ಲಿ ಹಮ್ಮಿಕೊಂಡ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಬುಧವಾರ ಭೇಟಿ ನೀಡಿ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದರು.

ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮೇ 4ರಿಂದ ಲಾಕ್‍ಡೌನ್‍ನಲ್ಲಿ ಕೆಲ ಸಡಿಲಿಕೆ ಮಾಡಲಾಗಿದೆ. ಗ್ರಾಮದ ಜನತೆ ಹೊಟ್ಟೆಗೆ ಅನ್ನವಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಬಾರದು ಎಂಬ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಲಾಗುತ್ತಿದೆ. ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಭೇಟಿ ನೀಡಿದ ಸ್ಥಳದಲ್ಲಿ 70ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದರು.

ಅವರು ಕಾರ್ಮಿಕರಿಗೆ ಸರಿಯಾಗಿ ಕೂಲಿ ಪಾವತಿಯಾಗುತ್ತಿರುವ ಬಗ್ಗೆ ಚರ್ಚಿಸಿದರು. ಹಾಗೆಯೇ ಕೂಲಿಕಾರರು ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್​ ಧರಿಸಿಕೊಂಡು ಕೆಲಸ ಮಾಡುತ್ತಿರುವುದನ್ನು ಗಮನಿಸಿದರು. ಕೆಲಸದ ಸ್ಥಳದಲ್ಲಿ ನೀರು, ನೆರಳು, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಜ್ಞಾವಿಧಿ ಬೋಧನೆಯೊಂದಿಗೆ ಕೆಲಸವನ್ನು ಪ್ರಾರಂಭಿಸಲಾಗಿದೆ. ಜಂಟಿ ಕೃಷಿ ನಿರ್ದೇಶಕರಾದ ಚೇತನ್ ಪಾಟೀಲ್ ಅವರು ಕೆಲಸದ ಅವಧಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ತಿಳಿಸಿದರು.

ಬಾಗಲಕೋಟೆ : ಉದ್ಯೋಗ ಖಾತರಿ ಯೋಜನೆಯಡಿ ಗಿರಿಸಾಗರ ಗ್ರಾಮ ಪಂಚಾಯತ್​ ವ್ಯಾಪ್ತಿಯ ರೈತರ ಹೊಲದಲ್ಲಿ ಹಮ್ಮಿಕೊಂಡ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಬುಧವಾರ ಭೇಟಿ ನೀಡಿ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದರು.

ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮೇ 4ರಿಂದ ಲಾಕ್‍ಡೌನ್‍ನಲ್ಲಿ ಕೆಲ ಸಡಿಲಿಕೆ ಮಾಡಲಾಗಿದೆ. ಗ್ರಾಮದ ಜನತೆ ಹೊಟ್ಟೆಗೆ ಅನ್ನವಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಬಾರದು ಎಂಬ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಲಾಗುತ್ತಿದೆ. ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಭೇಟಿ ನೀಡಿದ ಸ್ಥಳದಲ್ಲಿ 70ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದರು.

ಅವರು ಕಾರ್ಮಿಕರಿಗೆ ಸರಿಯಾಗಿ ಕೂಲಿ ಪಾವತಿಯಾಗುತ್ತಿರುವ ಬಗ್ಗೆ ಚರ್ಚಿಸಿದರು. ಹಾಗೆಯೇ ಕೂಲಿಕಾರರು ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್​ ಧರಿಸಿಕೊಂಡು ಕೆಲಸ ಮಾಡುತ್ತಿರುವುದನ್ನು ಗಮನಿಸಿದರು. ಕೆಲಸದ ಸ್ಥಳದಲ್ಲಿ ನೀರು, ನೆರಳು, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಜ್ಞಾವಿಧಿ ಬೋಧನೆಯೊಂದಿಗೆ ಕೆಲಸವನ್ನು ಪ್ರಾರಂಭಿಸಲಾಗಿದೆ. ಜಂಟಿ ಕೃಷಿ ನಿರ್ದೇಶಕರಾದ ಚೇತನ್ ಪಾಟೀಲ್ ಅವರು ಕೆಲಸದ ಅವಧಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.