ETV Bharat / state

ದ್ರಾಕ್ಷಿ ಮಾರಾಟಕ್ಕೆ ರೈತನಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು: ಈಟಿವಿ ಭಾರತ ವರದಿ ಫಲಶ್ರುತಿ

author img

By

Published : Apr 9, 2020, 2:42 PM IST

ಲಾಕ್ ಡೌನ್ ಹಿನ್ನೆಲೆ ಮಾರುಕಟ್ಟೆ ಸಿಗದೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಈಟಿವಿ ಭಾರತ ಪ್ರಕಟಿಸಿದ ವರದಿ ಪರಿಣಾಮ ಬೀರಿದೆ.

ETV Bharat Report impac
ಈಟಿವಿ ಭಾರತ ವರದಿ ಫಲಶ್ರುತಿ

ಬಾಗಲಕೋಟೆ : ಸಾಮಾಜಿಕ ನಿಷೇಧದ ಈ ದಿನಗಳಲ್ಲಿ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಈಟಿವಿ ಭಾರತ ಪ್ರಕಟಿಸಿದ್ದ ವರದಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.

ಬೀಳಗಿ ತಾಲೂಕಿನ ತುಂಬರಮಟ್ಟಿ ಗ್ರಾಮದ ಭೀಮಪ್ಪ ಹನುಮರ ಎಂಬವರ ದಾಕ್ಷಿ ತೋಟಕ್ಕೆ ಅಧಿಕಾರಿಗಳು ಭೇಟಿ ನೀಡಿದರು. ಈ ವೇಳೆ ರೈತರಿಗೆ ಮಾರುಕಟ್ಟೆ ಒದಗಿಸಲು ದಲ್ಲಾಳಿಯನ್ನು ಕರೆದುಕೊಂಡು ಬಂದು ಮಾರಾಟಕ್ಕೆ ಅನುಕೂಲ ಕಲ್ಪಿಸಿದರು.

ಇದನ್ನೂ ಓದಿ: ಮಾರುಕಟ್ಟೆಯಿಲ್ಲದೆ ದ್ರಾಕ್ಷಿ ಬೆಳೆ ನಾಶ.. ಅಳಲು ತೋಡಿಕೊಂಡ ರೈತ..

ರೈತ ಭೀಮಪ್ಪ ಹನುಮರ ತಮ್ಮ‌ಮೂರು ಎಕರೆ ಜಮೀನಿನಲ್ಲಿ ದ್ರಾಕ್ಷಿ ಬೆಳೆದಿದ್ದರು. ಆದರೆ ಮಾರುಕಟ್ಟೆ ಬಂದ್​ ಆದ ಪರಿಣಾಮ ಮಾರಾಟ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದರು. ಈ ಬಗ್ಗೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಬೀಳಗಿ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿಗಳಾದ ವಿವೇಕಾನಂದ ಕೆರೂರು ಹಾಗೂ ರುಕ್ಮಿಣಿ ಮೈತ್ರಿ ತೋಟಕ್ಕೆ ಭೇಟಿ ನೀಡಿ ಮಾರಾಟ ಮಾಡಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಬಾಗಲಕೋಟೆ : ಸಾಮಾಜಿಕ ನಿಷೇಧದ ಈ ದಿನಗಳಲ್ಲಿ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಈಟಿವಿ ಭಾರತ ಪ್ರಕಟಿಸಿದ್ದ ವರದಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.

ಬೀಳಗಿ ತಾಲೂಕಿನ ತುಂಬರಮಟ್ಟಿ ಗ್ರಾಮದ ಭೀಮಪ್ಪ ಹನುಮರ ಎಂಬವರ ದಾಕ್ಷಿ ತೋಟಕ್ಕೆ ಅಧಿಕಾರಿಗಳು ಭೇಟಿ ನೀಡಿದರು. ಈ ವೇಳೆ ರೈತರಿಗೆ ಮಾರುಕಟ್ಟೆ ಒದಗಿಸಲು ದಲ್ಲಾಳಿಯನ್ನು ಕರೆದುಕೊಂಡು ಬಂದು ಮಾರಾಟಕ್ಕೆ ಅನುಕೂಲ ಕಲ್ಪಿಸಿದರು.

ಇದನ್ನೂ ಓದಿ: ಮಾರುಕಟ್ಟೆಯಿಲ್ಲದೆ ದ್ರಾಕ್ಷಿ ಬೆಳೆ ನಾಶ.. ಅಳಲು ತೋಡಿಕೊಂಡ ರೈತ..

ರೈತ ಭೀಮಪ್ಪ ಹನುಮರ ತಮ್ಮ‌ಮೂರು ಎಕರೆ ಜಮೀನಿನಲ್ಲಿ ದ್ರಾಕ್ಷಿ ಬೆಳೆದಿದ್ದರು. ಆದರೆ ಮಾರುಕಟ್ಟೆ ಬಂದ್​ ಆದ ಪರಿಣಾಮ ಮಾರಾಟ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದರು. ಈ ಬಗ್ಗೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಬೀಳಗಿ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿಗಳಾದ ವಿವೇಕಾನಂದ ಕೆರೂರು ಹಾಗೂ ರುಕ್ಮಿಣಿ ಮೈತ್ರಿ ತೋಟಕ್ಕೆ ಭೇಟಿ ನೀಡಿ ಮಾರಾಟ ಮಾಡಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.