ETV Bharat / state

ಹಿಜಾಬ್ vs ಕೇಸರಿ ಶಾಲು ಸಂಘರ್ಷ: ಬನಹಟ್ಟಿ ಪಟ್ಟಣ ಬಂದ್ ಬಹುತೇಕ ಯಶಸ್ವಿ

author img

By

Published : Feb 9, 2022, 12:56 PM IST

ಬಾಗಲಕೋಟೆಯ ಬನಹಟ್ಟಿ ಪಟ್ಟಣದಲ್ಲಿ ನಿನ್ನೆ ಹಿಜಾಬ್-ಕೇಸರಿ ವಿವಾದ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ, ಹಿಂದೂಪರ ಸಂಘಟನೆಗಳು ಸ್ವಯಂಪ್ರೇರಿತ ಬನಹಟ್ಟಿ ಪಟ್ಟಣ ಬಂದ್​​ಗೆ ಕರೆ ನೀಡಿದ್ದವು.

Bagalkot
ಬಿಕೋ ಎನ್ನುತ್ತಿರುವ ಬನಹಟ್ಟಿ ಪಟ್ಟಣದ ರಸ್ತೆಗಳು

ಬಾಗಲಕೋಟೆ: ಹಿಜಾಬ್-ಕೇಸರಿ ಸಂಘರ್ಷದ ಕಾರಣಕ್ಕೆ ಇಂದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣ ಬಂದ್​ಗೆ ಕರೆ‌ ನೀಡಲಾಗಿದ್ದು, ಸ್ವಯಂಘೋಷಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್​​ ಆಗಿವೆ.

ಪ್ರತಿಭಟನೆ ನಡೆಸಲು ಮುಂದಾದ ಹಿಂದೂಪರ ಸಂಘಟನೆ ಕಾರ್ಯಕರ್ತರು

ಜಿಲ್ಲೆಯಲ್ಲಿ ನಿನ್ನೆ (ಮಂಗಳವಾರ) ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿತ್ತು. ಕಲ್ಲು ತೂರಾಟ ನಡೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಸಂಬಂಧ ಪೊಲೀಸರು ಎರಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಲ್ಲದೇ, ಪ್ರತಿಭಟನೆಯ ವೇಳೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಹಲ್ಲೆ ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಸ್ವಯಂಪ್ರೇರಿತ ಬನಹಟ್ಟಿ ಪಟ್ಟಣ ಬಂದ್​​ಗೆ ಕರೆ ನೀಡಿದ್ದವು.

ಇದನ್ನೂ ಓದಿ: ಹಿಜಾಬ್​-ಕೇಸರಿ ಶಾಲು ವಿವಾದ: ಬನಹಟ್ಟಿಯಲ್ಲಿ ಕಲ್ಲು ತೂರಾಟ

ಪೊಲೀಸರೊಂದಿಗೆ ಮಾತಿನ ಚಕಮಕಿ: ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್​​ ಕಚೇರಿ ಎದುರು ಸೇರಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್​​ ಜಗಲಸಾರ ಪ್ರತಿಭಟನಾಕಾರರನ್ನು ತಡೆದಿದ್ದು, ಹಿಂದೂ‌ಪರ ಸಂಘಟನೆ ‌ಮುಖಂಡರು ಹಾಗು ಪೊಲೀಸರ ನಡುವಿನ ವಾಗ್ವಾದಕ್ಕೆ ಕಾರಣವಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್​ಪಿ, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೋಮು ಸಂಘರ್ಷಕ್ಕೆ ಕಾರಣವಾಗುವವರು ಯಾರೇ ಆಗಲಿ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ 15 ಜನರನ್ನು ಬಂಧಿಸಲಾಗಿದೆ. ನೀವು ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಹೋಗಬೇಕು. ಯಾರೂ ಕಾನೂನು ಉಲ್ಲಂಘನೆ ಮಾಡಬಾರದು ಎಂದರು.

ಬಾಗಲಕೋಟೆ: ಹಿಜಾಬ್-ಕೇಸರಿ ಸಂಘರ್ಷದ ಕಾರಣಕ್ಕೆ ಇಂದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣ ಬಂದ್​ಗೆ ಕರೆ‌ ನೀಡಲಾಗಿದ್ದು, ಸ್ವಯಂಘೋಷಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್​​ ಆಗಿವೆ.

ಪ್ರತಿಭಟನೆ ನಡೆಸಲು ಮುಂದಾದ ಹಿಂದೂಪರ ಸಂಘಟನೆ ಕಾರ್ಯಕರ್ತರು

ಜಿಲ್ಲೆಯಲ್ಲಿ ನಿನ್ನೆ (ಮಂಗಳವಾರ) ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿತ್ತು. ಕಲ್ಲು ತೂರಾಟ ನಡೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಸಂಬಂಧ ಪೊಲೀಸರು ಎರಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಲ್ಲದೇ, ಪ್ರತಿಭಟನೆಯ ವೇಳೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಹಲ್ಲೆ ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಸ್ವಯಂಪ್ರೇರಿತ ಬನಹಟ್ಟಿ ಪಟ್ಟಣ ಬಂದ್​​ಗೆ ಕರೆ ನೀಡಿದ್ದವು.

ಇದನ್ನೂ ಓದಿ: ಹಿಜಾಬ್​-ಕೇಸರಿ ಶಾಲು ವಿವಾದ: ಬನಹಟ್ಟಿಯಲ್ಲಿ ಕಲ್ಲು ತೂರಾಟ

ಪೊಲೀಸರೊಂದಿಗೆ ಮಾತಿನ ಚಕಮಕಿ: ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್​​ ಕಚೇರಿ ಎದುರು ಸೇರಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್​​ ಜಗಲಸಾರ ಪ್ರತಿಭಟನಾಕಾರರನ್ನು ತಡೆದಿದ್ದು, ಹಿಂದೂ‌ಪರ ಸಂಘಟನೆ ‌ಮುಖಂಡರು ಹಾಗು ಪೊಲೀಸರ ನಡುವಿನ ವಾಗ್ವಾದಕ್ಕೆ ಕಾರಣವಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್​ಪಿ, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೋಮು ಸಂಘರ್ಷಕ್ಕೆ ಕಾರಣವಾಗುವವರು ಯಾರೇ ಆಗಲಿ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ 15 ಜನರನ್ನು ಬಂಧಿಸಲಾಗಿದೆ. ನೀವು ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಹೋಗಬೇಕು. ಯಾರೂ ಕಾನೂನು ಉಲ್ಲಂಘನೆ ಮಾಡಬಾರದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.