ETV Bharat / state

ಡಿಸಿಎಂ ಆದ ಬಳಿಕ ತವರು ಜಿಲ್ಲೆಗೆ ಭೇಟಿ, ಅಧಿಕಾರಿಗಳೊಂದಿಗೆ ಗೋವಿಂದ ಕಾರಜೋಳ ಸಭೆ.. - DCM Govinda Karajola

ಗೋವಿಂದ ಕಾರಜೋಳ ಅವರು ಉಪಮುಖ್ಯಮಂತ್ರಿ ಆದ ಬಳಿಕ ಇದೇ ಪ್ರಥಮ ಬಾರಿ ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡು, ಪ್ರವಾಹ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ತವರು ಜಿಲ್ಲೆಗೆ ಡಿಸಿಎಂ ಭೇಟಿ
author img

By

Published : Aug 31, 2019, 11:15 PM IST

ಬಾಗಲಕೋಟೆ: ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ ಆದ ಬಳಿಕ ಇದೇ ಪ್ರಥಮ ಬಾರಿ ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡು, ಪ್ರವಾಹ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಗೆ ಆಗಮಿಸಿದ ಡಿಸಿಎಂ ಗೋವಿಂದ ಕಾರಜೋಳ, ಜಿಲ್ಲಾ ಪಂಚಾಯತ್‌ ಸಭಾ ಭವನದಲ್ಲಿ ಸಭೆ ನಡೆಸಿದರು. ಕೃಷ್ಣಾ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಗಳ ಪ್ರವಾಹದಿಂದ ಹಾನಿ ಉ‌ಂಟಾಗಿರುವ ಗ್ರಾಮಗಳ ಕುರಿತು ಮಾಹಿತಿ ಪಡೆದರು. ನಿರಾಶ್ರಿತರಿಗೆ ನಿರ್ಮಾಣ ಮಾಡಿರುವ ಶೆಡ್, ವಿದ್ಯುತ್ ಸಂಪರ್ಕ ಹಾಗೂ ಪರಿಹಾರ ಧನ ಸೇರಿದಂತೆ ಇತರ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಕಲೆ ಹಾಕಿದರು.

ತವರು ಜಿಲ್ಲೆಗೆ ಡಿಸಿಎಂ ಭೇಟಿ

ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪರಿಹಾರ ಧನ, ಎಲ್ಲ ಸೌಲಭ್ಯಗಳನ್ನು ಸಂತ್ರಸ್ತರಿಗೆ ಮುಟ್ಟುವಂತೆ ನಿಗಾ ವಹಿಸಬೇಕೆಂದು ಸೂಚಿಸಿದರು. ಶಾಸಕ ಸಿದ್ದು ಸವದಿ ಹಾಗೂ ದೊಡ್ಡನಗೌಡ ಪಾಟೀಲ್​ ಅವರೂ ತಮ್ಮ ಕ್ಷೇತ್ರದಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ಗಮನ ಸೆಳೆದರು. ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಯಾರೇ ಅಪರಾಧ ಮಾಡಲಿ ಅವರಿಗೆ ಶಿಕ್ಷೆ ಆಗಲಿದೆ. ಡಿ ಕೆ ಶಿವಕುಮಾರ್​ ಅವರು ಯಾವುದೇ ತಪ್ಪು ಮಾಡಿಲ್ಲವಾದಲ್ಲಿ ಅವರಿಗೆ ಇಡಿ ಅಧಿಕಾರಿಗಳು ಎನೂ ಮಾಡುವುದಿಲ್ಲ ಎಂದರು.

ಬಾಗಲಕೋಟೆ: ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ ಆದ ಬಳಿಕ ಇದೇ ಪ್ರಥಮ ಬಾರಿ ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡು, ಪ್ರವಾಹ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಗೆ ಆಗಮಿಸಿದ ಡಿಸಿಎಂ ಗೋವಿಂದ ಕಾರಜೋಳ, ಜಿಲ್ಲಾ ಪಂಚಾಯತ್‌ ಸಭಾ ಭವನದಲ್ಲಿ ಸಭೆ ನಡೆಸಿದರು. ಕೃಷ್ಣಾ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಗಳ ಪ್ರವಾಹದಿಂದ ಹಾನಿ ಉ‌ಂಟಾಗಿರುವ ಗ್ರಾಮಗಳ ಕುರಿತು ಮಾಹಿತಿ ಪಡೆದರು. ನಿರಾಶ್ರಿತರಿಗೆ ನಿರ್ಮಾಣ ಮಾಡಿರುವ ಶೆಡ್, ವಿದ್ಯುತ್ ಸಂಪರ್ಕ ಹಾಗೂ ಪರಿಹಾರ ಧನ ಸೇರಿದಂತೆ ಇತರ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಕಲೆ ಹಾಕಿದರು.

ತವರು ಜಿಲ್ಲೆಗೆ ಡಿಸಿಎಂ ಭೇಟಿ

ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪರಿಹಾರ ಧನ, ಎಲ್ಲ ಸೌಲಭ್ಯಗಳನ್ನು ಸಂತ್ರಸ್ತರಿಗೆ ಮುಟ್ಟುವಂತೆ ನಿಗಾ ವಹಿಸಬೇಕೆಂದು ಸೂಚಿಸಿದರು. ಶಾಸಕ ಸಿದ್ದು ಸವದಿ ಹಾಗೂ ದೊಡ್ಡನಗೌಡ ಪಾಟೀಲ್​ ಅವರೂ ತಮ್ಮ ಕ್ಷೇತ್ರದಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ಗಮನ ಸೆಳೆದರು. ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಯಾರೇ ಅಪರಾಧ ಮಾಡಲಿ ಅವರಿಗೆ ಶಿಕ್ಷೆ ಆಗಲಿದೆ. ಡಿ ಕೆ ಶಿವಕುಮಾರ್​ ಅವರು ಯಾವುದೇ ತಪ್ಪು ಮಾಡಿಲ್ಲವಾದಲ್ಲಿ ಅವರಿಗೆ ಇಡಿ ಅಧಿಕಾರಿಗಳು ಎನೂ ಮಾಡುವುದಿಲ್ಲ ಎಂದರು.

Intro:AnchorBody:-- ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ಅವರು,ಉಪ ಮುಖ್ಯಮಂತ್ರಿ ಆದ ಬಳಿಕ ಇದೇ ಪ್ರಥಮ ಭಾರಿಗೆ ಬಾಗಲಕೋಟೆ ಜಿಲ್ಲೆ ಗೆ ಪ್ರವಾಸ ಹಮ್ಮಿಕೊಂಡು,ಪ್ರವಾಹ ಸಂತ್ರಸ್ಥರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಪೊಲೀಸ್ ಇಲಾಖೆಯಿಂದ ಗಾಡ್ ಆಪ್ ಆನ್ಹರ್ ನೆರವೇರಿಸಲಾಯಿತು. ನಂತರ ಜಿಲ್ಲಾ ಪಂಚಾಯತ ಸಭಾಭವನ ದಲ್ಲಿ ನಡೆದ ಸಭೆಯಲ್ಲಿ,ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಗಳಿಂದ ಉಂಟಾಗಿರುವ ಪ್ರವಾಹ ದಿಂದ ತೊಂದರೆ ಉ‌ಂಟಾಗಿರುವ ಗ್ರಾಮಗಳ ಬಗ್ಗೆ, ಶೆಡ್ಡ ನಿರ್ಮಾಣ ಮಾಡಿರುವ ಸಂಖ್ಯೆಗಳ ,ವಿದ್ಯುತ್ ಸಂಪರ್ಕ ನೀಡಿರುವ ಹಾಗೂ ಪರಿಹಾರ ಧನ ಸೇರಿದಂತೆ ಇತರ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿ, ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ,ಪರಿಹಾರ ಧನ ಎಲ್ಲ ಸೌಲಭ್ಯಗಳನ್ನು ನಿಜವಾದ ಸಂತ್ರಸ್ತರಿಗೆ ಮುಟ್ಟುವಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಸಿದ್ದು ಸವದಿ ಹಾಗೂ ದೊಡ್ಡನಗೌಡ ಪಾಟೀಲ ಅವರಿ ತಮ್ಮ ಕ್ಷೇತ್ರದಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ಗಮನ ಸೆಳೆದರು.ಈ ಮುಂಚೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು,ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಯಾರೇ ಅಪರಾಧ ಮಾಡಲಿ ಅವರಿಗೆ ಶಿಕ್ಷೆ ಆಗಲಿದೆ.ಡಿ ಕೆ ಸಿ ಅವರು ಯಾವುದೇ ತಪ್ಪು ಮಾಡಿಲ್ಲವಾದಲ್ಲಿ ಅವರಿಗೆ ಇ ಡಿ ಅಧಿಕಾರಿಗಳು ಎನೂ ಮಾಡುವುದಿಲ್ಲ ಎಂದು ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡಿದ ಅವರು, ನಾನು ಈ ಮಟ್ಟಕ್ಕೆ ಬೆಳೆಯಬೇಕಾದರೆ ಬಾಗಲಕೋಟೆ ಹಾಗೂ ಮುಧೋಳ ಜನತೆ ಕಾರಣವಾಗಿದ್ದು,ಅವರಿಗೆ ಧನ್ಯವಾದಗಳು ಎಂದರು..
Byte--ಗೋವಿಂದ ಕಾರಜೋಳ( ಡಿಸಿಎಂ)Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.