ETV Bharat / state

ಸಿದ್ದರಾಮಯ್ಯನಂತಹ ದ್ರೋಹಿಯನ್ನ ಹಿಂದೆ ನೋಡಿಲ್ಲ, ಮುಂದೆಯೂ ನೋಡುವುದಿಲ್ಲ : ಈಶ್ವರಪ್ಪ ವಾಗ್ದಾಳಿ

author img

By

Published : Dec 15, 2022, 12:34 PM IST

ಪಕ್ಷದಲ್ಲೇ ಕುತಂತ್ರ ಮಾಡುವ ವ್ಯವಸ್ಥೆ ಕಾಂಗ್ರೆಸ್​ನಲ್ಲಿದೆ. ಕರ್ನಾಟಕದ ರಾಜಕಾರಣದಲ್ಲಿ ಸಿದ್ದರಾಮಯ್ಯನಂತಹ ದ್ರೋಹಿಯನ್ನು ಯಾರೂ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

k s eshwarappa slams siddaramaiah
ಈಶ್ವರಪ್ಪ
ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ

ಬಾಗಲಕೋಟೆ: ಕರ್ನಾಟಕ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನಂತಹ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ವೀಕ್ ಲೀಡರ್ ಅಂತ ಪದೇ ಪದೇ ಹೇಳ್ತಿರೋ ಸಿದ್ದರಾಮಯ್ಯಗೆ ಟಕ್ಕರ್ ನೀಡಿದರು. ಸಿದ್ದರಾಮಯ್ಯ ವೀಕ್ ಲೀಡರ್ ಆಗಿದ್ದಕ್ಕೆ ಕಾಂಗ್ರೆಸ್ ಸೋತಿದ್ದು, ಸ್ಟ್ರಾಂಗ್ ಸಿಎಂ ಆಗಿದ್ದರೆ ಯಾಕೆ ಸೋಲುತ್ತಿದ್ದರು? ಎಂದು ಪ್ರಶ್ನಿಸಿದರು. ಅವರು, ಯಾವಾಗಲೂ ನೀನು ವೀಕ್ ಅಂತ ಹೇಳೋರು ಯಾರು?, ಯಾರೂ ತಾನು ವೀಕ್ ಇರ್ತಾರೋ ಅವರೇ ಇಂತಹ ಮಾತನ್ನು ಹೇಳುತ್ತಾರೆ ಎಂದರು.

ಸಿದ್ದರಾಮಯ್ಯ ಬಹಳ ಸ್ಟ್ರಾಂಗ್. ಹಾಗಾಗಿ, ಅವರಿಗೆ ಕ್ಷೇತ್ರವೇ ಸಿಗುತ್ತಿಲ್ಲ. ಒಂದ್ಸಾರಿ ಬಾದಾಮಿ, ಒಂದ್ಸಾರಿ ಕೊಪ್ಪಳ, ಕೋಲಾರ, ಈಗ ವರುಣ ಅಂತೀರಿ. ನಿಮ್ಮ ಕ್ಷೇತ್ರವೇ ಗೊತ್ತಿಲ್ಲ. ನಾಯಕನಿಗೆ ಜಾಗವಿಲ್ಲ, ಪಾಪ ಇನ್ನೂ ಫಾಲೋವರ್ಸ್ ಗತಿಯೇನು? ಎಂದು ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವ್ಯಂಗ್ಯವಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋಕೆ ಅಯೋಗ್ಯವಾದ ವ್ಯಕ್ತಿ: ಕೆ ಎಸ್ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕಟೀಲ್ ನೇತೃತ್ವದಲ್ಲಿ ಪಕ್ಷ ಸಂಘಟನೆ ಆಗ್ತಿದೆ. ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬೊಮ್ಮಾಯಿ, ಯಡಿಯೂರಪ್ಪ ನಾಯಕತ್ವ ಇದೆ. ಅಭಿವೃದ್ಧಿ, ಸಂಘಟನೆ ಮೇಲೆ ಬಿಜೆಪಿ ಗೆಲ್ಲುತ್ತದೆ. ಆದ್ರೆ, ಕಾಂಗ್ರೆಸ್​ನಲ್ಲಿ ಯಾರ ನೇತೃತ್ವ ಇದೆ ಎಂದು ಪ್ರಶ್ನಿಸಿದರು. ಬಳಿಕ ಕರ್ನಾಟಕದ ರಾಜಕಾರಣದಲ್ಲಿ ಇಂತಹ ದ್ರೋಹಿಯನ್ನು ಯಾರೂ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ ಎಂಬುದಕ್ಕೆ ಡಿಕೆಶಿ ಹೇಳಿಕೆ ಸಾಕ್ಷಿ: ಕೆ ಎಸ್​ ಈಶ್ವರಪ್ಪ

ಅಭ್ಯರ್ಥಿಗಳ ಹೆಸರು ಬಹಿರಂಗಪಡಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಕೊಪ್ಪಳದಲ್ಲಿ 5 ಅಭ್ಯರ್ಥಿಗಳ ಹೆಸರು ಅನೌನ್ಸ್ ಮಾಡಿಬಿಟ್ಟರು. ಪಕ್ಷದಲ್ಲೇ ಕುತಂತ್ರ ಮಾಡುವ ವ್ಯವಸ್ಥೆ ಕಾಂಗ್ರೆಸ್​ನಲ್ಲಿದೆ. ಡಿಕೆಶಿ ಮೇಲೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಮೇಲೆ ಡಿಕೆಶಿ ಆರೋಪ ಪ್ರತ್ಯಾರೋಪ ಮಾಡುತ್ತಾರೆ ಎಂದು ಈಶ್ವರಪ್ಪ ಟಾಂಗ್​ ಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ನಾವು ಮುಸ್ಲಿಮರ ವೋಟಿಗೆ ನಾವು ಕೈ ಹಾಕ್ತೀವಿ ಅನ್ನೋ ಭಯ: ಈಶ್ವರಪ್ಪ

ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ

ಬಾಗಲಕೋಟೆ: ಕರ್ನಾಟಕ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನಂತಹ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ವೀಕ್ ಲೀಡರ್ ಅಂತ ಪದೇ ಪದೇ ಹೇಳ್ತಿರೋ ಸಿದ್ದರಾಮಯ್ಯಗೆ ಟಕ್ಕರ್ ನೀಡಿದರು. ಸಿದ್ದರಾಮಯ್ಯ ವೀಕ್ ಲೀಡರ್ ಆಗಿದ್ದಕ್ಕೆ ಕಾಂಗ್ರೆಸ್ ಸೋತಿದ್ದು, ಸ್ಟ್ರಾಂಗ್ ಸಿಎಂ ಆಗಿದ್ದರೆ ಯಾಕೆ ಸೋಲುತ್ತಿದ್ದರು? ಎಂದು ಪ್ರಶ್ನಿಸಿದರು. ಅವರು, ಯಾವಾಗಲೂ ನೀನು ವೀಕ್ ಅಂತ ಹೇಳೋರು ಯಾರು?, ಯಾರೂ ತಾನು ವೀಕ್ ಇರ್ತಾರೋ ಅವರೇ ಇಂತಹ ಮಾತನ್ನು ಹೇಳುತ್ತಾರೆ ಎಂದರು.

ಸಿದ್ದರಾಮಯ್ಯ ಬಹಳ ಸ್ಟ್ರಾಂಗ್. ಹಾಗಾಗಿ, ಅವರಿಗೆ ಕ್ಷೇತ್ರವೇ ಸಿಗುತ್ತಿಲ್ಲ. ಒಂದ್ಸಾರಿ ಬಾದಾಮಿ, ಒಂದ್ಸಾರಿ ಕೊಪ್ಪಳ, ಕೋಲಾರ, ಈಗ ವರುಣ ಅಂತೀರಿ. ನಿಮ್ಮ ಕ್ಷೇತ್ರವೇ ಗೊತ್ತಿಲ್ಲ. ನಾಯಕನಿಗೆ ಜಾಗವಿಲ್ಲ, ಪಾಪ ಇನ್ನೂ ಫಾಲೋವರ್ಸ್ ಗತಿಯೇನು? ಎಂದು ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವ್ಯಂಗ್ಯವಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋಕೆ ಅಯೋಗ್ಯವಾದ ವ್ಯಕ್ತಿ: ಕೆ ಎಸ್ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕಟೀಲ್ ನೇತೃತ್ವದಲ್ಲಿ ಪಕ್ಷ ಸಂಘಟನೆ ಆಗ್ತಿದೆ. ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬೊಮ್ಮಾಯಿ, ಯಡಿಯೂರಪ್ಪ ನಾಯಕತ್ವ ಇದೆ. ಅಭಿವೃದ್ಧಿ, ಸಂಘಟನೆ ಮೇಲೆ ಬಿಜೆಪಿ ಗೆಲ್ಲುತ್ತದೆ. ಆದ್ರೆ, ಕಾಂಗ್ರೆಸ್​ನಲ್ಲಿ ಯಾರ ನೇತೃತ್ವ ಇದೆ ಎಂದು ಪ್ರಶ್ನಿಸಿದರು. ಬಳಿಕ ಕರ್ನಾಟಕದ ರಾಜಕಾರಣದಲ್ಲಿ ಇಂತಹ ದ್ರೋಹಿಯನ್ನು ಯಾರೂ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ ಎಂಬುದಕ್ಕೆ ಡಿಕೆಶಿ ಹೇಳಿಕೆ ಸಾಕ್ಷಿ: ಕೆ ಎಸ್​ ಈಶ್ವರಪ್ಪ

ಅಭ್ಯರ್ಥಿಗಳ ಹೆಸರು ಬಹಿರಂಗಪಡಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಕೊಪ್ಪಳದಲ್ಲಿ 5 ಅಭ್ಯರ್ಥಿಗಳ ಹೆಸರು ಅನೌನ್ಸ್ ಮಾಡಿಬಿಟ್ಟರು. ಪಕ್ಷದಲ್ಲೇ ಕುತಂತ್ರ ಮಾಡುವ ವ್ಯವಸ್ಥೆ ಕಾಂಗ್ರೆಸ್​ನಲ್ಲಿದೆ. ಡಿಕೆಶಿ ಮೇಲೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಮೇಲೆ ಡಿಕೆಶಿ ಆರೋಪ ಪ್ರತ್ಯಾರೋಪ ಮಾಡುತ್ತಾರೆ ಎಂದು ಈಶ್ವರಪ್ಪ ಟಾಂಗ್​ ಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ನಾವು ಮುಸ್ಲಿಮರ ವೋಟಿಗೆ ನಾವು ಕೈ ಹಾಕ್ತೀವಿ ಅನ್ನೋ ಭಯ: ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.