ಬಾಗಲಕೋಟೆ: ರೈತ ಸಂಪರ್ಕ ಕೇಂದ್ರಗಳಿಗೆ ಬರುವ ಬಿತ್ತನೆ ಬೀಜ, ಗೊಬ್ಬರ ಹಾಗೂ ಬೆಳೆಗೆ ಸಿಂಪಡಿಸುವ ಔಷಧಿಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ ಸಭಾ ಭವನದಲ್ಲಿ ಜರುಗಿದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳು ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಕುರಿತು ರೈತರಿಂದ ಈ ಕುರಿತು ದೂರುಗಳು ಬಂದಿದ್ದು, ಕೃಷಿ ಇಲಾಖೆಯ ಅಧಿಕಾರಿಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿದರು. ಹಾಗೆ ಲಾಭದಾಯಕವಾದ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಇಲಾಖೆ ನೀಡುವ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಅಂದಾಗ ಮಾತ್ರ ತೋಟಗಾರಿಕೆ ಬೆಳೆ ಬೆಳೆಯಲು ರೈತರು ಮುಂದಾಗುತ್ತಾರೆ ಎಂದರು.
ಇನ್ನು ತಾಡಪತ್ರೆಗಳನ್ನು ಸಹ ರೈತರಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈ ಕುರಿತು ತಾಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ತಾಡಪತ್ರೆಗೆಳು ಸರಿಯಾಗಿ ವಿತರಣೆಯಾಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.