ETV Bharat / state

ಬಾಗಲಕೋಟೆ: ಸ್ವಯಂಪ್ರೇರಣೆಯಿಂದ ಅಂಗಡಿ ಬಂದ್ ಮಾಡಲು ವ್ಯಾಪಾರಸ್ಥರ ನಿರ್ಧಾರ - Bhagalkot covid cases

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಜುಲೈ 10 ರಿಂದ 25 ರವರೆಗೆ ಬೆಳಿಗ್ಗೆಯಿಂದ ಮಧ್ಯಾಹ್ನ ಎರಡು‌ ಗಂಟೆವರೆಗೆ ಮಾತ್ರ ಎಲ್ಲಾ ಅಂಗಡಿಗಳನ್ನು ತೆರೆದು ಮಧ್ಯಾಹ್ನದ ನಂತರ ಬಂದ್ ಮಾಡಲು ವ್ಯಾಪಾರಸ್ಥರು ಮುಂದಾಗಿದ್ದಾರೆ.

Bhagalkot
Bhagalkot
author img

By

Published : Jul 9, 2020, 10:30 AM IST

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಬಂದ್ ಮಾಡಲು ಮುಂದಾಗಿದ್ದಾರೆ.

ಬೆಳಗ್ಗೆಯಿಂದ ಮಧ್ಯಾಹ್ನ 2‌ ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆದು ಮಧ್ಯಾಹ್ನದ ನಂತರ ಬಂದ್ ಮಾಡಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು‌ ಮುಂದಾಗಿದ್ದಾರೆ.
ಹಳೆ ಬಾಗಲಕೋಟೆ, ವಿದ್ಯಾಗಿರಿ, ನವನಗರ ಹಾಗೂ ಗ್ರಾಮೀಣ ಭಾಗದಲ್ಲಿಯೂ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಬುಧವಾರ ನಗರದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಈ‌ ನಿರ್ಧಾರ ಕೈಗೊಳ್ಳಲಾಯಿತು.

ಸರ್ಕಾರದ ಆದೇಶದಂತೆ ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ ತೆರೆಯಲಾಗುತ್ತಿತ್ತು. ಅದರೆ ಕೊರೊನಾ ಭಯಕ್ಕೆ ಜುಲೈ 10 ರಿಂದ 25 ರವರೆಗೆ ನಗರದ ಬಟ್ಟೆ, ಕಿರಾಣಿ, ಚಿನ್ನ ಹಾಗೂ ನಗರದ ಸಣ್ಣಪುಟ್ಟ ವ್ಯಾಪಾರ ನಡೆಸುವ ಎಲ್ಲಾ ಅಂಗಡಿಗಳು ಮಧ್ಯಾಹ್ನ 2 ಗಂಟೆಗೆ ಅಂದರೆ ನಾಲ್ಕು ಗಂಟೆ ಮುಂಚಿತವಾಗಿಯೇ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ.

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಬಂದ್ ಮಾಡಲು ಮುಂದಾಗಿದ್ದಾರೆ.

ಬೆಳಗ್ಗೆಯಿಂದ ಮಧ್ಯಾಹ್ನ 2‌ ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆದು ಮಧ್ಯಾಹ್ನದ ನಂತರ ಬಂದ್ ಮಾಡಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು‌ ಮುಂದಾಗಿದ್ದಾರೆ.
ಹಳೆ ಬಾಗಲಕೋಟೆ, ವಿದ್ಯಾಗಿರಿ, ನವನಗರ ಹಾಗೂ ಗ್ರಾಮೀಣ ಭಾಗದಲ್ಲಿಯೂ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಬುಧವಾರ ನಗರದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಈ‌ ನಿರ್ಧಾರ ಕೈಗೊಳ್ಳಲಾಯಿತು.

ಸರ್ಕಾರದ ಆದೇಶದಂತೆ ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ ತೆರೆಯಲಾಗುತ್ತಿತ್ತು. ಅದರೆ ಕೊರೊನಾ ಭಯಕ್ಕೆ ಜುಲೈ 10 ರಿಂದ 25 ರವರೆಗೆ ನಗರದ ಬಟ್ಟೆ, ಕಿರಾಣಿ, ಚಿನ್ನ ಹಾಗೂ ನಗರದ ಸಣ್ಣಪುಟ್ಟ ವ್ಯಾಪಾರ ನಡೆಸುವ ಎಲ್ಲಾ ಅಂಗಡಿಗಳು ಮಧ್ಯಾಹ್ನ 2 ಗಂಟೆಗೆ ಅಂದರೆ ನಾಲ್ಕು ಗಂಟೆ ಮುಂಚಿತವಾಗಿಯೇ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.