ETV Bharat / state

'ಶೇ.80ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗೆ ಇರುವ ಸಮುದಾಯವನ್ನು ಎಸ್​ಟಿಗೆ ಸೇರಿಸಿ'

author img

By

Published : Nov 29, 2020, 6:58 PM IST

ಸಮುದಾಯವೊಂದರಲ್ಲಿ ಶೇಕಡಾ 80ರಷ್ಟು ಮಂದಿ ಬಡತನ ರೇಖೆಗಿಂತ ಕಡಿಮೆಯಿದ್ದರೇ, ಅಂತಹ ಸಮುದಾಯವನ್ನು ಪರಿಶಿಷ್ಟ ಪಂಗಡದ ಮೀಸಲಾತಿಗೆ ಸೇರಿಸಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ.

Minister KS Eshwarappa
ಕೆ.ಎಸ್. ಈಶ್ವರಪ್ಪ

ಬಾಗಲಕೋಟೆ: ಇಡೀ ರಾಜ್ಯದಲ್ಲಿ ಯಾವ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಅವಶ್ಯವಿದೆಯೋ, ಅಂತಹ ಸಮುದಾಯವನ್ನು ಎಸ್​ಟಿ ಮೀಸಲಾತಿಗೆ ಸೇರಬೇಕು ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ

ನಗರದ ನೂತನ ಪ್ರವಾಸ ಮಂದಿರದಲ್ಲಿ ಮಾತನಾಡಿದ ಅವರು ಕೇವಲ ಕುರುಬ ಸಮಾಜವನ್ನು ಮಾತ್ರ ಎಸ್​ಟಿ ಮೀಸಲಾತಿ ಸೇರಿಸುವುದಲ್ಲ. ಯಾವ ಸಮುದಾಯದಲ್ಲಿ ಶೇಕಡಾ 80ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಅಂತಹ ಸಮುದಾಯವನ್ನು ಎಸ್​ಟಿ ಮೀಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಜೊತೆಗೆ ಈ ಕುರಿತು ಶೀಘ್ರವಾಗಿ ನಮ್ಮ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ರಾಜಕೀಯದಲ್ಲಿ ಕುರುಬರ ಸಮುದಾಯಕ್ಕೆ ಪ್ರಾಶಸ್ತ್ಯ ಸಿಗಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.

ಬಾಗಲಕೋಟೆ: ಇಡೀ ರಾಜ್ಯದಲ್ಲಿ ಯಾವ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಅವಶ್ಯವಿದೆಯೋ, ಅಂತಹ ಸಮುದಾಯವನ್ನು ಎಸ್​ಟಿ ಮೀಸಲಾತಿಗೆ ಸೇರಬೇಕು ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ

ನಗರದ ನೂತನ ಪ್ರವಾಸ ಮಂದಿರದಲ್ಲಿ ಮಾತನಾಡಿದ ಅವರು ಕೇವಲ ಕುರುಬ ಸಮಾಜವನ್ನು ಮಾತ್ರ ಎಸ್​ಟಿ ಮೀಸಲಾತಿ ಸೇರಿಸುವುದಲ್ಲ. ಯಾವ ಸಮುದಾಯದಲ್ಲಿ ಶೇಕಡಾ 80ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಅಂತಹ ಸಮುದಾಯವನ್ನು ಎಸ್​ಟಿ ಮೀಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಜೊತೆಗೆ ಈ ಕುರಿತು ಶೀಘ್ರವಾಗಿ ನಮ್ಮ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ರಾಜಕೀಯದಲ್ಲಿ ಕುರುಬರ ಸಮುದಾಯಕ್ಕೆ ಪ್ರಾಶಸ್ತ್ಯ ಸಿಗಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.