ETV Bharat / state

ಕಾಂಗ್ರೆಸ್​ನವರು ಅಲಿಬಾಬಾ ಮತ್ತು ನಲವತ್ತು ಕಳ್ಳರಿದ್ದಂತೆ: ಸಚಿವ ಶ್ರೀರಾಮುಲು ಟೀಕೆ - ಶ್ರೀರಾಮುಲು ಟಾಂಗ್​

ಸಿದ್ದರಾಮಯ್ಯ ಅವರೇ ವಿಚಾರಗಳನ್ನು ಮೈಮೇಲೆ ಎಳೆದುಕೊಂಡು ಸಮಸ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಡಿಕೇರಿಗೆ ಹೋಗುವ ಪ್ರಯತ್ನ ಮಾಡಿದ್ದರು. ಅಲ್ಲಿ ಏನಾಯ್ತು ಎಂಬುದು ಗೊತ್ತಾಯ್ತು. ತಾಳ್ಮೆ ಇದ್ದರೆ ಆತನಿಗೆ ರಾಜಕಾರಣದಲ್ಲಿ ಭವಿಷ್ಯ ಇದೆ. ತಾಳ್ಮೆ ಕಳೆದುಕೊಂಡರೆ ಏನು ಮಾಡೋಕ್ಕಾಗುತ್ತೆ ಎಂದು ಶ್ರೀರಾಮುಲು ಟಾಂಗ್​ ನೀಡಿದರು.

Minister Shreeramulu
ಸಚಿವ ಶ್ರೀರಾಮಲು
author img

By

Published : Sep 25, 2022, 11:39 AM IST

Updated : Sep 25, 2022, 1:53 PM IST

ಬಾಗಲಕೋಟೆ: ಕಾಂಗ್ರೆಸ್​ನವರು ಆಲಿಬಾಬಾ ಚಾಲೀಸ್ ಫರ್ ಚಾರ್ ಚೋರ್​ಗಳಿದ್ದಂತೆ. ಅಧಿವೇಶನದಲ್ಲಿ ನಡೆಯಬೇಕಿದ್ದ ಚರ್ಚೆಗಳನ್ನು ಮೊಟಕುಗೊಳಿಸಿ, ಸ್ವಾರ್ಥ ರಾಜಕಾರಣಕ್ಕಾಗಿ ಸದನವನ್ನೇ ಸಂಪೂರ್ಣ ದಿಕ್ಕು ತಪ್ಪಿಸುವ ಕೆಲಸವನ್ನು ಅವರು ಮಾಡಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹರಿಹಾಯ್ದಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದನ ನಡೆದರೆ ರಾಜ್ಯದಲ್ಲಿರುವ ಗಂಭೀರ ವಿಷಯಗಳು ಚರ್ಚೆ ಆಗುತ್ತವೆ. ಆದರೆ ಕಾಂಗ್ರೆಸ್​ನವರು ರಾಜಕೀಯ ಅಜೆಂಡಾ ಇಟ್ಟುಕೊಂಡು, ಸ್ವಾರ್ಥ ರಾಜಕಾರಣಕ್ಕಾಗಿ ಸದನವನ್ನೇ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ತಮ್ಮ ಅವಧಿಯಲ್ಲಿ ಕಾಂಗ್ರೆಸ್​ನವರು ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಆದರೀಗ ಭ್ರಷ್ಟಾಚಾರದಲ್ಲಿ ಬಹಳಷ್ಟು ಮಡಿವಂತಿಕೆ ತೋರುತ್ತಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ಶಿಕ್ಷಕಿಯರಿಗೆ ಇಳಕಲ್ ಸೀರೆ ಹಂಚಿದ ವಿಚಾರವಾಗಿ ಮಾತನಾಡಿದ ಅವರು, ನಾನು ಏಳು ಚುನಾವಣೆಯಲ್ಲಿ ಆರು ಸಲ ಗೆದ್ದಿರುವುದು ಜನರು ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸದಿಂದ. ಬಹುಶಃ ನಾನು ಮತ್ತೆ ಬಾದಾಮಿಗೆ ಬಂದರೂ ಬರಬಹುದೇನೋ, ಇಲ್ಲೇ ಚುನಾವಣೆಗೆ ನಿಲ್ಲಬೇಕು ಎಂದು ಇನ್ನೂ ನಿರ್ಧಾರ ಮಾಡಿಲ್ಲ. ನನಗೆ ಓದಿಸಿದ, ಸಹಾಯ ಮಾಡಿದ ಗುರುಗಳಿಗೆ ಏನಾದರೂ ಕಾಣಿಕೆ ಕೊಡಬೇಕು ಅಂದುಕೊಂಡಿದ್ದೇನೆ. ಚುನಾವಣೆ ಲಾಭ ಮಾಡಿಕೊಳ್ಳಲು ಅಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಶ್ರೀರಾಮುಲು

ನಾನು ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ. 2018ರಲ್ಲಿ ಬಾದಾಮಿ, ಮೊಳಕಾಲ್ಮೂರಲ್ಲಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಪಾರ್ಟಿ ಅವಕಾಶ ಮಾಡಿಕೊಟ್ಟರೆ ಖಂಡಿತ ಬಾದಾಮಿಯಿಂದ ಸ್ಪರ್ಧೆ ಮಾಡುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಜನಾರ್ದನ ರೆಡ್ಡಿ ಸ್ಪರ್ಧಿಸುವ ಕುರಿತು ಸದ್ಯಕ್ಕೆ ಏನನ್ನೂ ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಆ ಕುರಿತು ಪಕ್ಷ ತೀರ್ಮಾನಿಸುತ್ತದೆ. ಇದರಲ್ಲಿ ನನ್ನ ಒತ್ತಡ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು. ಈ ಹಿನ್ನೆಲೆಯಲ್ಲಿ ಎಲ್ಲರೂ ಪ್ರಯತ್ನಿಸುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್​ ಮಾಡುತ್ತಿದೆ, ಅದರ ನೈತಿಕ ಅಧಪತನವೇ ಪಕ್ಷದ ಸೋಲಿಗೆ ಕಾರಣ : ಸಿಎಂ

ಬಾಗಲಕೋಟೆ: ಕಾಂಗ್ರೆಸ್​ನವರು ಆಲಿಬಾಬಾ ಚಾಲೀಸ್ ಫರ್ ಚಾರ್ ಚೋರ್​ಗಳಿದ್ದಂತೆ. ಅಧಿವೇಶನದಲ್ಲಿ ನಡೆಯಬೇಕಿದ್ದ ಚರ್ಚೆಗಳನ್ನು ಮೊಟಕುಗೊಳಿಸಿ, ಸ್ವಾರ್ಥ ರಾಜಕಾರಣಕ್ಕಾಗಿ ಸದನವನ್ನೇ ಸಂಪೂರ್ಣ ದಿಕ್ಕು ತಪ್ಪಿಸುವ ಕೆಲಸವನ್ನು ಅವರು ಮಾಡಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹರಿಹಾಯ್ದಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದನ ನಡೆದರೆ ರಾಜ್ಯದಲ್ಲಿರುವ ಗಂಭೀರ ವಿಷಯಗಳು ಚರ್ಚೆ ಆಗುತ್ತವೆ. ಆದರೆ ಕಾಂಗ್ರೆಸ್​ನವರು ರಾಜಕೀಯ ಅಜೆಂಡಾ ಇಟ್ಟುಕೊಂಡು, ಸ್ವಾರ್ಥ ರಾಜಕಾರಣಕ್ಕಾಗಿ ಸದನವನ್ನೇ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ತಮ್ಮ ಅವಧಿಯಲ್ಲಿ ಕಾಂಗ್ರೆಸ್​ನವರು ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಆದರೀಗ ಭ್ರಷ್ಟಾಚಾರದಲ್ಲಿ ಬಹಳಷ್ಟು ಮಡಿವಂತಿಕೆ ತೋರುತ್ತಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ಶಿಕ್ಷಕಿಯರಿಗೆ ಇಳಕಲ್ ಸೀರೆ ಹಂಚಿದ ವಿಚಾರವಾಗಿ ಮಾತನಾಡಿದ ಅವರು, ನಾನು ಏಳು ಚುನಾವಣೆಯಲ್ಲಿ ಆರು ಸಲ ಗೆದ್ದಿರುವುದು ಜನರು ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸದಿಂದ. ಬಹುಶಃ ನಾನು ಮತ್ತೆ ಬಾದಾಮಿಗೆ ಬಂದರೂ ಬರಬಹುದೇನೋ, ಇಲ್ಲೇ ಚುನಾವಣೆಗೆ ನಿಲ್ಲಬೇಕು ಎಂದು ಇನ್ನೂ ನಿರ್ಧಾರ ಮಾಡಿಲ್ಲ. ನನಗೆ ಓದಿಸಿದ, ಸಹಾಯ ಮಾಡಿದ ಗುರುಗಳಿಗೆ ಏನಾದರೂ ಕಾಣಿಕೆ ಕೊಡಬೇಕು ಅಂದುಕೊಂಡಿದ್ದೇನೆ. ಚುನಾವಣೆ ಲಾಭ ಮಾಡಿಕೊಳ್ಳಲು ಅಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಶ್ರೀರಾಮುಲು

ನಾನು ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ. 2018ರಲ್ಲಿ ಬಾದಾಮಿ, ಮೊಳಕಾಲ್ಮೂರಲ್ಲಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಪಾರ್ಟಿ ಅವಕಾಶ ಮಾಡಿಕೊಟ್ಟರೆ ಖಂಡಿತ ಬಾದಾಮಿಯಿಂದ ಸ್ಪರ್ಧೆ ಮಾಡುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಜನಾರ್ದನ ರೆಡ್ಡಿ ಸ್ಪರ್ಧಿಸುವ ಕುರಿತು ಸದ್ಯಕ್ಕೆ ಏನನ್ನೂ ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಆ ಕುರಿತು ಪಕ್ಷ ತೀರ್ಮಾನಿಸುತ್ತದೆ. ಇದರಲ್ಲಿ ನನ್ನ ಒತ್ತಡ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು. ಈ ಹಿನ್ನೆಲೆಯಲ್ಲಿ ಎಲ್ಲರೂ ಪ್ರಯತ್ನಿಸುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್​ ಮಾಡುತ್ತಿದೆ, ಅದರ ನೈತಿಕ ಅಧಪತನವೇ ಪಕ್ಷದ ಸೋಲಿಗೆ ಕಾರಣ : ಸಿಎಂ

Last Updated : Sep 25, 2022, 1:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.