ETV Bharat / state

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ: ಕೃಷ್ಣಾ, ಘಟಪ್ರಭಾ ನದಿ ಪಾತ್ರಗಳಲ್ಲಿ ಪ್ರವಾಹ ಭೀತಿ

ಮಹರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕೃಷ್ಣಾ, ಘಟಪ್ರಭಾ ನದಿ ಪಾತ್ರದ ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಸ್ಥಳೀಯ ಆಡಳಿತಗಳು ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿವೆ.

author img

By

Published : Sep 7, 2019, 11:11 PM IST

ಕೃಷ್ಣಾ, ಘಟಪ್ರಭಾ ನದಿಗಳಲ್ಲಿ ಪ್ರವಾಹದ ಭೀತಿ

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವ ಪರಿಣಾಮ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣ, ಘಟಪ್ರಭಾ ನದಿ ಪಾತ್ರಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ, ಘಟಪ್ರಭಾ ನದಿ ಪಾತ್ರಗಳಲ್ಲಿ ಪ್ರವಾಹ ಭೀತಿ

ಹಿಡಕಲ್ ಜಲಾಶಯದಿಂದ ಸಾಕಷ್ಟು ಪ್ರಮಾಣದಲ್ಲಿ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮಧೋಳ ತಾಲೂಕಿನಲ್ಲಿ ಜನ ಮತ್ತೆ ಪ್ರವಾಹ ಭೀತಿಯಲ್ಲಿದ್ದಾರೆ. ಜೊತೆಗೆ ಒಂಡಿಗೋಡಿ, ಮಿರ್ಜಿ, ರೋಗಿ, ಮಾಚಕನೂರು ಸೇರಿದಂತೆ ಇತರ ಗ್ರಾಮಗಳಲ್ಲೂ ನೆರೆ ಹಾವಳಿಯಾಗುವ ಸಂಭವ ಹೆಚ್ಚಿದೆ.

ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯ ಅಬ್ಬರ ಹೆಚ್ಚಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್​​​ ನೀರು ಹರಿದು‌ ಬರುತ್ತಿದೆ. ಶೂರ್ಪಾಲಿ, ಮುತ್ತೂರು, ಮೈಗೂರು, ಕೊಂಕಣವಾಡಿ, ತುಬಚಿ ಸೇರಿದಂತೆ ಇತರ ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಅಧಿಕಾರಿಗಳು ಈಗಾಗಲೇ ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಂಡಿದ್ದು, ಸಂತ್ರಸ್ತರಿಗೆ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಸಂಜಯ್ ಇಂಗಳೆ ಹೇಳಿದ್ದಾರೆ.

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವ ಪರಿಣಾಮ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣ, ಘಟಪ್ರಭಾ ನದಿ ಪಾತ್ರಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ, ಘಟಪ್ರಭಾ ನದಿ ಪಾತ್ರಗಳಲ್ಲಿ ಪ್ರವಾಹ ಭೀತಿ

ಹಿಡಕಲ್ ಜಲಾಶಯದಿಂದ ಸಾಕಷ್ಟು ಪ್ರಮಾಣದಲ್ಲಿ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮಧೋಳ ತಾಲೂಕಿನಲ್ಲಿ ಜನ ಮತ್ತೆ ಪ್ರವಾಹ ಭೀತಿಯಲ್ಲಿದ್ದಾರೆ. ಜೊತೆಗೆ ಒಂಡಿಗೋಡಿ, ಮಿರ್ಜಿ, ರೋಗಿ, ಮಾಚಕನೂರು ಸೇರಿದಂತೆ ಇತರ ಗ್ರಾಮಗಳಲ್ಲೂ ನೆರೆ ಹಾವಳಿಯಾಗುವ ಸಂಭವ ಹೆಚ್ಚಿದೆ.

ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯ ಅಬ್ಬರ ಹೆಚ್ಚಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್​​​ ನೀರು ಹರಿದು‌ ಬರುತ್ತಿದೆ. ಶೂರ್ಪಾಲಿ, ಮುತ್ತೂರು, ಮೈಗೂರು, ಕೊಂಕಣವಾಡಿ, ತುಬಚಿ ಸೇರಿದಂತೆ ಇತರ ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಅಧಿಕಾರಿಗಳು ಈಗಾಗಲೇ ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಂಡಿದ್ದು, ಸಂತ್ರಸ್ತರಿಗೆ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಸಂಜಯ್ ಇಂಗಳೆ ಹೇಳಿದ್ದಾರೆ.

Intro:AnchorBody:ಮಹಾರಾಷ್ಟ್ರ ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವ ಪರಿಣಾಮ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣ, ಘಟಪ್ರಭಾ ನದಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.ಇತ್ತೀಚಿಗೆ ಅಷ್ಟೇ ಪ್ರವಾಹ ದಿಂದ ನಲುಗಿ ಹೋಗಿದ್ದ ಸಂತ್ರಸ್ಥರು, ನೀರು ಕಡಿಮೆ ಆಗಿದೆ.ಇನ್ನೂ ತಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದು ಯೋಚನೆ ಮಾಡುತ್ತಿರುವ ಮುಂಚೆಯೇ ಮತ್ತೊಮ್ಮೆ ಪ್ರವಾಹ ಎದುರಿಸುವ ಪರಿಸ್ಥಿತಿ ಬಂದಿದೆ ಎಂದು ಚಿಂತಾಜನಕರಾಗಿ,ಗಾಯದ ಮೇಲೆ ಬರೆ ಎಳೆದಂತಾಗಿದೆ.ಹಿಡಕಲ್ ಜಲಾಶಯದ ದಿಂದ ಸಾಕಷ್ಟು ಪ್ರಮಾಣದಲ್ಲಿ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿರುವ ಹಿನ್ನೆಲೆ, ಮುಧೋಳ ತಾಲೂಕಿನಲ್ಲಿ ಪ್ರವಾಹದ ಭೀತಿ ಆವರಿಸಿದೆ.ಇದರಿಂದ ಒಂಡಿಗೋಡಿ,ಮಿರ್ಜಿ,ರೋಗಿ,ಮಾಚಕನೂರು ಸೇರಿದಂತೆ ಇತರ ಗ್ರಾಮಗಳಲ್ಲಿ ಮತ್ತೆ ನೀರು‌ ನುಗ್ಗಿ ಪ್ರವಾಹ ಉಂಟಾಗುತ್ತಿದೆ.ಮುಧೋಳ ಯಾದವಾಡ ರಸ್ತೆ ಸೇತುವೆಯಲ್ಲಿ ಅಪಾಯ ಮಟ್ಟದಲ್ಲಿ ‌ನೀರು ಹರಿಯುತ್ತಿದೆ.ಈ ಹಿಂದೆ‌ ನೀರು ಪಾಲಾಗಿರುವ ಜಮೀನುಗಳಲ್ಲಿ ಮತ್ತೆ ನೀರು ಬರುತ್ತಿದೆ.ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು‌ ಬಂದಲ್ಲಿ ಸೇತುವೆ ಮುಳಗಡೆ ಆಗಿ,ಸಂಚಾರಕ್ಕೆ ತೊಂದರೆ ಉಂಟಾಗಲಿದೆ.
ಇನ್ನು ಜಮಖಂಡಿ ತಾಲೂಕಿನಲ್ಲಿ ಯು ಕೃಷ್ಣ ನದಿಯ ಅಬ್ಬರ ಹೆಚ್ಚಾಗಿದ್ದು,ಒಂದು ಲಕ್ಷಕ್ಕೂ ಅಧಿಕ ನೀರು ಹರಿದು‌ ಬರುತ್ತಿರುವ ಹಿನ್ನೆಲೆ, ಶೂರ್ಪಾಲಿ,ಮುತ್ತೂರು, ಮೈಗೂರು,ಕೊಂಕಣವಾಡಿ,ತುಬಚಿ ಸೇರಿದಂತೆ ಇತರ ಗ್ರಾಮದಲ್ಲಿ ಪ್ರವಾಹ ಭೀತಿ ಉಂಟಾಗಿದೆ.ಇತ್ತೀಚಿಗೆ ಅಷ್ಟೇ ಪ್ರವಾಹ ಇಳಿದು,ನೀರು ಶಾಂತವಾಗಿದೆ.ಇನ್ನು ಪ್ರವಾಹ ಉಂಟಾಗುವುದಿಲ್ಲ ಎಂದು ಯೋಚನೆ ಮಾಡುತ್ತಿದ್ದ ಗ್ರಾಮಸ್ಥರಿಗೆ ಮತ್ತೆ ನೀರು‌ ಬರುತ್ತಿರುವದನ್ನು ಇನ್ನು ಬದುಕು ಮುಗಿದು ಹೋಯಿತು ಎಂದು ಹೇಳುತ್ತಿದ್ದಾರೆ...

ಬೈಟ್--ಸಂಜಯ ಇಂಗಳೆ( ಮುಧೋಳ ತಹಶಿಲ್ದಾರ)Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.