ETV Bharat / state

ಈ ಸಲ ಉತ್ತಮ ಮಳೆ : ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿಗಳ ಭವಿಷ್ಯವಾಣಿ - ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠ ಮಳೆ ಭವಿಷ್ಯ

ಈ ವರ್ಷದ ಮುಂಗಾರಿನಲ್ಲಿ ರೋಹಣಿ, ಪುನರ್ವಸು ಸಂಪೂರ್ಣ, ಆರಿದ್ರಾ, ಮೃಗಶಿರಾ ಉತ್ತಮ ಮಳೆಗಳು, ಪುಷ್ಯಾ ಸಾಧಾರಣವಾಗಿ ಬೀಳಲಿವೆ. ಹಿಂಗಾರಿನಲ್ಲಿ ಮಗಿ ಸಂಪೂರ್ಣ. ಉತ್ತರಿ ಉತ್ತಮ, ಚಿತ್ತಿ, ಸ್ವಾತಿ ಸಾಧಾರಣವಾಗಿ ಸುರಿಯಲಿವೆ ಎಂದು ಶ್ರಿಮಠದ ಮಠಾಧೀಶರಾದ ಜಗನ್ನಾಥಸ್ವಾಮಿ ಅಖಂಡಸ್ವಾಮಿ ಮಹಾಪುರುಷ ನೆರೆದ ಭಕ್ತಾಧಿಗಳಿಗೆ ತಿಳಿಸಿದರು.

rain-prediction-of-murali-sri-sri-rajerajendra-swamy
ಶ್ರೀ ಮಳೆರಾಜೇಂದ್ರಸ್ವಾಮಿ
author img

By

Published : Mar 25, 2021, 11:31 PM IST

ಬಾಗಲಕೋಟೆ: ಪ್ರಸಕ್ತ ವರ್ಷ ಮುಂಗಾರು ಮಳೆಗಳಾದ ರೋಹಣಿ, ಪುನನರ್ವಸು, ಹಿಂಗಾರು ಮಳೆಗಳಲ್ಲಿ ಮಗಿ, ಉತ್ತರಿ ಸಂಪೂರ್ಣವಾಗಿ ಸುರಿಯಲಿವೆ ಎಂದು ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ವಾಣಿಯಗಿದೆ.

ಈ ಭಾಗದ ಕೃಷಿಕರ ಮಠವೆಂದು ಖ್ಯಾತಿ ಪಡೆದಿರುವ ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ನಡೆದ ಕಡುಬಿನ ಕಾಳಗ(ಮಳೆ ಬೆಳೆ ಸೂಚನೆ)ದಲ್ಲಿ ಸೂಚನೆ ದೊರೆತಿದೆ. ಈ ವರ್ಷದ ಮುಂಗಾರಿನಲ್ಲಿ ರೋಹಣಿ, ಪುನರ್ವಸು ಸಂಪೂರ್ಣ, ಆರಿದ್ರಾ, ಮೃಗಶಿರಾ ಉತ್ತಮ ಮಳೆಗಳು, ಪುಷ್ಯಾ ಸಾಧಾರಣವಾಗಿ ಬೀಳಲಿವೆ. ಹಿಂಗಾರಿನಲ್ಲಿ ಮಗಿ ಸಂಪೂರ್ಣ. ಉತ್ತರಿ ಉತ್ತಮ, ಚಿತ್ತಿ, ಸ್ವಾತಿ ಸಾಧಾರಣವಾಗಿ ಸುರಿಯಲಿವೆ ಎಂದು ಶ್ರಿಮಠದ ಮಠಾಧೀಶರಾದ ಜಗನ್ನಾಥಸ್ವಾಮಿ ಅಖಂಡಸ್ವಾಮಿ ಮಹಾಪುರುಷ ನೆರೆದ ಭಕ್ತಾಧಿಗಳಿಗೆ ತಿಳಿಸಿದರು.

ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿಗಳ ಭವಿಷ್ಯವಾಣಿ

ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರಾ ಮಹೋತ್ಸವ ವಿಜೃಮಣೆಯಿಂದ ನಡೆಯಿತು. ಜಾತ್ರೆಯ ಅಂಗವಾಗಿ ನಡೆಯುವ ಕಡುಬಿನ ಕಾಳಗ ಕಳೆದ ವರ್ಷ ಬರ ಬಿದ್ದ ಹಿನ್ನೆಲೆ, ಈ ವರ್ಷ ಮಳೆ ಚೆನ್ನಾಗಿ ಆಗಲಿ ಎಂದು ಪ್ರಾರ್ಥಿಸುತ್ತ ಸುತ್ತಮುತ್ತಲಿನ ಗ್ರಾಮಗಳ ರೈತಾಪಿ ಜನರು ಮಳೆ ಸೂಚನೆಗಾಗಿ ಕತೂಹಲದಿಂದ ಕಾಯ್ದು ನಿಂತಿದ್ದರು.

ಕಡುಬಿನ ಕಾಳಗದ ವೈಶಿಷ್ಟ್ಯ

ಕಡುಬಿನ ಕಾಳಗದ ಮುಂಚೆ ನಡೆದ ಮಳೆರಾಜೇಂದ್ರಸ್ವಾಮಿಗಳ ಮೂರ್ತಿ ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಗ್ರಾಮದ ಸಾವಿರಾರು ಮಹಿಳೆಯರು ಆರತಿ ಹಾಗೂ ಪಂಚಬಿಂದಿಗೆಯೊಂದಿಗೆ ಪಾಲ್ಗೊಂಡಿದ್ದರು. ಗಂಗೆಯ ಪುಜೆಗಾಗಿ ನಿರ್ಮಿಸಿರುವ ಹೊಂಡದವರೆಗೆ ಮೆರವಣಿಗೆಯಲ್ಲಿ ಸಾಗಿದ ಗ್ರಾಮಸ್ಥರು ಗಂಗೆಗೆ ಪೂಜೆ ಸಲ್ಲಿಸಿ ಪಂಚ ಬಿಂದಿಗೆಗಳಲ್ಲಿ ಗಂಗೆಯನ್ನು ತುಂಬಿ, ಪ್ರತಿ ಬಿಂದಿಯ ಮೇಲೆ ಎರಡೆರಡು ಮಳೆಗಳು ಹೆಸರನ್ನು ನಮೂದಿಸಲಾಗುತ್ತದೆ. ಪಂಚ ಬಿಂದಿಗೆ ಹೊತ್ತು ನಂತರ ಗಂಗಾ ಹೊಂಡದಿಂದ ಪುನಃ ಮೆರವಣಿಗೆಯಲ್ಲಿ ರಥೋತ್ಸವ ಇರುವ ಸ್ಥಳಕ್ಕೆ ಬರುತ್ತಾರೆ. ರಥೋತ್ಸವವನ್ನು ಪ್ರದಕ್ಷಣೆ ಹಾಕಿ ಪಂಚಬಿಂದಿಗೆ ಪೂಜೆ ಸಲ್ಲಿಸಿ ತರುವಾಯ ಮಳೆ-ಬೆಳೆ ಸೂಚನೆ ನೀಡಲಾಗುತ್ತದೆ.

ಮಳೆಗಳ ಹೆಸರನ್ನು ಹೊಂದಿರುವ ಬಿಂದಿಗೆಗಳ ಬಸಿಯುವಿಕೆ(ಸೋರಿಕೆ) ಆಧಾರದ ಮೇಲೆ ಮಳೆ, ಬೆಳೆ ಸೂಚನೆ ಹೊರಬೀಳುತ್ತದೆ. ಸೋರಿಕೆ ಪ್ರಮಾಣದ ಮೇಲೆಯೇ ಯಾವ ಮಳೆ ಹೆಚ್ಚು ಸುರಿಯುತ್ತದೆ ಹಾಗೂ ಯಾವುದು ಕಡಿಮೆಯಾಗುತ್ತದೆ ಎಂಬುದನ್ನು ಹೇಳಲಾಗುತ್ತದೆ. ವಿಶಿಷ್ಟ ಪರಂಪರೆ ಹೊಂದಿರುವುದರಿಂದ ಮಳೆರಾಜೇಂದ್ರ ಮಠದ ಕಡುಬಿನ ಕಾಳಗಕ್ಕೆ ರೈತಸಮುದಾಯ ಕುತೂಹಲದಿಂದ ನೋಡುತ್ತದೆ.

ಬಾಗಲಕೋಟೆ: ಪ್ರಸಕ್ತ ವರ್ಷ ಮುಂಗಾರು ಮಳೆಗಳಾದ ರೋಹಣಿ, ಪುನನರ್ವಸು, ಹಿಂಗಾರು ಮಳೆಗಳಲ್ಲಿ ಮಗಿ, ಉತ್ತರಿ ಸಂಪೂರ್ಣವಾಗಿ ಸುರಿಯಲಿವೆ ಎಂದು ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ವಾಣಿಯಗಿದೆ.

ಈ ಭಾಗದ ಕೃಷಿಕರ ಮಠವೆಂದು ಖ್ಯಾತಿ ಪಡೆದಿರುವ ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ನಡೆದ ಕಡುಬಿನ ಕಾಳಗ(ಮಳೆ ಬೆಳೆ ಸೂಚನೆ)ದಲ್ಲಿ ಸೂಚನೆ ದೊರೆತಿದೆ. ಈ ವರ್ಷದ ಮುಂಗಾರಿನಲ್ಲಿ ರೋಹಣಿ, ಪುನರ್ವಸು ಸಂಪೂರ್ಣ, ಆರಿದ್ರಾ, ಮೃಗಶಿರಾ ಉತ್ತಮ ಮಳೆಗಳು, ಪುಷ್ಯಾ ಸಾಧಾರಣವಾಗಿ ಬೀಳಲಿವೆ. ಹಿಂಗಾರಿನಲ್ಲಿ ಮಗಿ ಸಂಪೂರ್ಣ. ಉತ್ತರಿ ಉತ್ತಮ, ಚಿತ್ತಿ, ಸ್ವಾತಿ ಸಾಧಾರಣವಾಗಿ ಸುರಿಯಲಿವೆ ಎಂದು ಶ್ರಿಮಠದ ಮಠಾಧೀಶರಾದ ಜಗನ್ನಾಥಸ್ವಾಮಿ ಅಖಂಡಸ್ವಾಮಿ ಮಹಾಪುರುಷ ನೆರೆದ ಭಕ್ತಾಧಿಗಳಿಗೆ ತಿಳಿಸಿದರು.

ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿಗಳ ಭವಿಷ್ಯವಾಣಿ

ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರಾ ಮಹೋತ್ಸವ ವಿಜೃಮಣೆಯಿಂದ ನಡೆಯಿತು. ಜಾತ್ರೆಯ ಅಂಗವಾಗಿ ನಡೆಯುವ ಕಡುಬಿನ ಕಾಳಗ ಕಳೆದ ವರ್ಷ ಬರ ಬಿದ್ದ ಹಿನ್ನೆಲೆ, ಈ ವರ್ಷ ಮಳೆ ಚೆನ್ನಾಗಿ ಆಗಲಿ ಎಂದು ಪ್ರಾರ್ಥಿಸುತ್ತ ಸುತ್ತಮುತ್ತಲಿನ ಗ್ರಾಮಗಳ ರೈತಾಪಿ ಜನರು ಮಳೆ ಸೂಚನೆಗಾಗಿ ಕತೂಹಲದಿಂದ ಕಾಯ್ದು ನಿಂತಿದ್ದರು.

ಕಡುಬಿನ ಕಾಳಗದ ವೈಶಿಷ್ಟ್ಯ

ಕಡುಬಿನ ಕಾಳಗದ ಮುಂಚೆ ನಡೆದ ಮಳೆರಾಜೇಂದ್ರಸ್ವಾಮಿಗಳ ಮೂರ್ತಿ ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಗ್ರಾಮದ ಸಾವಿರಾರು ಮಹಿಳೆಯರು ಆರತಿ ಹಾಗೂ ಪಂಚಬಿಂದಿಗೆಯೊಂದಿಗೆ ಪಾಲ್ಗೊಂಡಿದ್ದರು. ಗಂಗೆಯ ಪುಜೆಗಾಗಿ ನಿರ್ಮಿಸಿರುವ ಹೊಂಡದವರೆಗೆ ಮೆರವಣಿಗೆಯಲ್ಲಿ ಸಾಗಿದ ಗ್ರಾಮಸ್ಥರು ಗಂಗೆಗೆ ಪೂಜೆ ಸಲ್ಲಿಸಿ ಪಂಚ ಬಿಂದಿಗೆಗಳಲ್ಲಿ ಗಂಗೆಯನ್ನು ತುಂಬಿ, ಪ್ರತಿ ಬಿಂದಿಯ ಮೇಲೆ ಎರಡೆರಡು ಮಳೆಗಳು ಹೆಸರನ್ನು ನಮೂದಿಸಲಾಗುತ್ತದೆ. ಪಂಚ ಬಿಂದಿಗೆ ಹೊತ್ತು ನಂತರ ಗಂಗಾ ಹೊಂಡದಿಂದ ಪುನಃ ಮೆರವಣಿಗೆಯಲ್ಲಿ ರಥೋತ್ಸವ ಇರುವ ಸ್ಥಳಕ್ಕೆ ಬರುತ್ತಾರೆ. ರಥೋತ್ಸವವನ್ನು ಪ್ರದಕ್ಷಣೆ ಹಾಕಿ ಪಂಚಬಿಂದಿಗೆ ಪೂಜೆ ಸಲ್ಲಿಸಿ ತರುವಾಯ ಮಳೆ-ಬೆಳೆ ಸೂಚನೆ ನೀಡಲಾಗುತ್ತದೆ.

ಮಳೆಗಳ ಹೆಸರನ್ನು ಹೊಂದಿರುವ ಬಿಂದಿಗೆಗಳ ಬಸಿಯುವಿಕೆ(ಸೋರಿಕೆ) ಆಧಾರದ ಮೇಲೆ ಮಳೆ, ಬೆಳೆ ಸೂಚನೆ ಹೊರಬೀಳುತ್ತದೆ. ಸೋರಿಕೆ ಪ್ರಮಾಣದ ಮೇಲೆಯೇ ಯಾವ ಮಳೆ ಹೆಚ್ಚು ಸುರಿಯುತ್ತದೆ ಹಾಗೂ ಯಾವುದು ಕಡಿಮೆಯಾಗುತ್ತದೆ ಎಂಬುದನ್ನು ಹೇಳಲಾಗುತ್ತದೆ. ವಿಶಿಷ್ಟ ಪರಂಪರೆ ಹೊಂದಿರುವುದರಿಂದ ಮಳೆರಾಜೇಂದ್ರ ಮಠದ ಕಡುಬಿನ ಕಾಳಗಕ್ಕೆ ರೈತಸಮುದಾಯ ಕುತೂಹಲದಿಂದ ನೋಡುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.